ಚಿತ್ರ ಮಂಜರಿ

ಥಿಯೇಟರ್‌ ಒಳಗೆ ಅಭಿಮಾನಿಗಳ ದುರ್ವರ್ತನೆ: ಪಟಾಕಿ ಸಿಡಿಸಬೇಡಿ ಎಂದ ಸಲ್ಮಾನ್‌ ಖಾನ್‌

ಬಾಲಿವುಡ್‌ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಸಿನಿಮಾ ಟೈಗರ್‌-3 ಭಾನುವಾರ (ನ.12) ದಂದು ರಿಲೀಸ್‌ ಅಗಿದೆ. ಅಭಿಮಾನಿಗಳ ಕ್ರೇಜ್‌ ಹೇಳ ತೀರದು, ಸಲ್ಲುವನ್ನು ಭಾಯ್‌ ರೀತಿಯಲ್ಲಿ ದೇಶಾದ್ಯಂತ ಅಭಿಮಾನಿಗಳು ಬರಮಾಡಿಕೊಳ್ಳುತ್ತಿದ್ದಾರೆ.

ಭಾನುವಾರ ರಿಲೀಸ್‌ ಆದ ಟೈಗರ್-‌3ಗೆ ಅದ್ದೂರಿ ವೆಲ್‌ಕಮ್‌ ದೊರೆಯಿತು. ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ಬಂದರೂ ಅಭಿಮಾನಿಗಳಿಗೆ ಮೆಚ್ಚಿನ ಸಿನಿಮಾ ಆಗಿದ್ದು ಸುಳ್ಳಲ್ಲ. ಅಭಿಮಾನಿಗಳ ಅಭಿಮಾನ ಅತಿರೇಕಕ್ಕೆ ತಲುಪಿದ್ದು, ಸಲ್ಲು ಕಟೌಟ್‌ಗೆ ಹಾರ, ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಾ ಅಭಿಮಾನಿಗಳು ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರಮಂದಿರ ಒಳಗಡೆ ಪಟಾಕಿ ಸಿಡಿಸಿದ್ದು, ಸಲ್ಲು ಅಭಿಮಾನಿಗಳ ದುರ್ವರ್ತನೆಯಿಂದ ಚಿತ್ರ ವೀಕ್ಷಣೆಗೆ ಬಂದಿದ್ದವರು ಕಕ್ಕಾಬಿಕ್ಕಿಯಾಗಿದ್ದಾರೆ. ನೋಡ ನೋಡುತ್ತಿದ್ದಂತೆ ಪಟಾಕಿ ಸಿಡಿದಿದ್ದು, ವೀಕ್ಷಕರೆಲ್ಲಾ ಎದ್ನೊ ಬಿದ್ನೋ ಎಂದು ಥಿಯೇಟರ್‌ನಿಂದ ಕಾಲ್ಕಿತ್ತಿದ್ದಾರೆ.

ಈ ಘಟನೆಯಿಂದ ಹಲವಾರು ಜನರು ಕಾಲ್ತುಳಿತಕ್ಕೆ ಒಳಗಾಗಿದ್ದು, ಹಲವಾರು ಮಂದಿಗೆ ಗಾಯಗಳಾಗಿದೆ ಎಂದು ಹೇಳಲಾಗುತ್ತಿದೆ.

ಮಹಾರಾಷ್ಟ್ರ ಚಿತ್ರಮಂದಿರದಲ್ಲಿ ನಡೆದ ಘಟನೆ: ಸಲ್ಲು ಭಾಯ್‌ ಎಂಟ್ರಿ ವೇಳೆ ಸ್ಕ್ರೀನ್‌ ನ ಒಂದು ಬದಿಯಲ್ಲಿ ಪಟಾಕಿ ಸಿಡಿಸಿದ್ದಾರೆ. ಚಿತ್ರಮಂದಿರ ತುಂಬೆಲ್ಲಾ ರಾಶಿ ರಾಶಿ ಕಸ, ದಟ್ಟ ಹೊಗೆ ಆವರಿಸಿದ್ದು ಕೆಲಕಾಲ ಆತಂಕ ಮನೆಮಾಡಿತ್ತು. ಅಂದಹಾಗೆ ಈ ಘಟನೆ ನಡೆದದ್ದು, ಮಹಾರಾಷ್ಟ್ರದ ನಾಸಿಕ್‌ನ ಮಾಲೇಗಾಂವ್‌ ಮೋಹನ್‌ ಚಿತ್ರಮಂದಿರದಲ್ಲಿ.

ಸಲ್ಲು ಫ್ಯಾನ್ಸ್‌ ವಿರುದ್ಧ ಖಂಡನೆ: ಸೋಷಿಯಲ್‌ ಮೀಡಿಯಾದಲ್ಲಿ ಈ ವೀಡಿಯೋ ವೈರಲ್‌ ಆಗುತ್ತಿದ್ದಂತೆ ಸಲ್ಲು ಫ್ಯಾನ್ಸ್‌ರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಿತಿ ಮೀರಿದ ಹುಚ್ಚುತನ ಇದಾಗಿದ್ದು, ಚಿತ್ರಮಂದಿರದಲ್ಲಿ ಇವರಿಗೆ ಪಟಾಕಿ ಹಚ್ಚಲು ಅನುಮತಿ ನೀಡಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ಸಲ್ಲು ರಿಯಾಕ್ಷನ್‌ : “ನನ್ನ ಎಲ್ಲಾ ಅಭಿಮಾನಿಗಳಿಗೆ ಬೆಂಕಿ ಪಟಾಕಿಗಳನ್ನು ಆಡಿಟೋರಿಯಂ ಒಳಗೆ ತೆಗೆದುಕೊಂಡು ಹೋಗಬೇಡಿ ಎಂದು ವಿನಂತಿಸುತ್ತೇನೆ ಬೆಂಕಿಯಿಂದ ದೊಡ್ಡ ಅನಾಹುತ ಆಗಬಹುದು ಮತ್ತು ಇದರಿಂದಾಗಿ ನಿಮ್ಮ ಮತ್ತು ಇತರರ ಜೀವಕ್ಕೆ ಅಪಾಯವಿದೆ. ಚಿತ್ರಮಂದಿರದೊಳಗೆ ಪಟಾಕಿಗಳನ್ನು ತೆಗೆದುಕೊಂಡು ಹೋಗಲು ಬಿಡಬೇಡಿ ಮತ್ತು ಪ್ರವೇಶ ದ್ವಾರದಲ್ಲಿ ಸೆಕ್ಯೂರಿಟಿ ನಿಲ್ಲಿಸುವಂತೆ ಥಿಯೇಟರ್ ಮಾಲೀಕರಿಗೆ ನನ್ನ ವಿನಂತಿ.  ಚಿತ್ರವನ್ನು ಆನಂದಿಸಿ ಆದರೆ ದಯವಿಟ್ಟು ಇದನ್ನು ತಪ್ಪಿಸಿ” ಎಂದು ಅಭಿಮಾನಿಗಳಲ್ಲಿ ಸಲ್ಲು ಮನವಿ ಮಾಡಿದ್ದಾರೆ.

ಟೈಗರ್‌-3 ಚಿತ್ರವನ್ನು ಮನೀಷ್‌ ಶರ್ಮಾ ನಿರ್ದೇಶಿಸಿದ್ದು, ಯಶ್‌ರಾಜ್‌ ಫಿಲಂಸ್‌ ನಿರ್ಮಾಣ ಮಾಡಿದೆ. ಸಲ್ಮಾನ್‌ ಖಾನ್‌, ಕತ್ರಿನಾ ಕೈಫ್‌, ಇಮ್ರಾನ್‌ ಹಶ್ಮಿ, ರಿದ್ಧಿ ಡೋಗ್ರಾ, ಅಶುತೋಷ್‌ ರಾಣಾ, ರೇವತಿ, ವಿಶೇಷ ಪಾತ್ರದಲ್ಲಿ ಶಾರುಖ್‌ ಖಾನ್‌, ಹೃತಿಕ್‌ ರೋಷನ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

andolanait

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

4 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

4 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

5 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

5 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

5 hours ago