ಚಿತ್ರ ಮಂಜರಿ

ಸಾರ್ವಜನಿಕವಾಗಿ ಸುದೀಪ್​ ಬಗ್ಗೆ ಹೇಳಿಕೆ ನೀಡದಂತೆ ಎಂ.ಎನ್​. ಕುಮಾರ್​ಗೆ ನ್ಯಾಯಾಲಯ ಆದೇಶ

ಬೆಂಗಳೂರು : ಸ್ಯಾಂಡಲ್​ವುಡ್​ನ ಖ್ಯಾತ ನಟ ಕಿಚ್ಚ ಸುದೀಪ್​ ಮತ್ತು ನಿರ್ಮಾಪಕ ಎಂ.ಎನ್​. ಕುಮಾರ್​ ಅವರ ನಡುವಿನ ವಿವಾದ ಈಗ ಕೋರ್ಟ್​ ಅಂಗಳದಲ್ಲಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೂಡ ಆರಂಭ ಆಗಿದೆ. ಇತ್ತೀಚೆಗೆ ಸುದೀಪ್​ ಮತ್ತು ಎಂ.ಎನ್​. ಕುಮಾರ್​ ಅವರು ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದರು. ಈಗ ನ್ಯಾಯಾಲಯದಿಂದ ಎಂ.ಎನ್​. ಕುಮಾರ್​ ಅವರಿಗೆ ಇಂಜಂಕ್ಷನ್​ ಆರ್ಡರ್​ ನೀಡಲಾಗಿದೆ.

ಸುದೀಪ್​ ಅವರ ವಿರುದ್ಧ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಎಂದು ಆದೇಶಿಸಲಾಗಿದೆ. ಕೋರ್ಟ್​ನಲ್ಲಿ ಕೇಸ್​ ಅಂತ್ಯವಾಗುವ ತನಕವೂ ಈ ಆದೇಶ ಅನ್ವಯ ಆಗಲಿದೆ. ಚಿತ್ರರಂಗದ ಹಿರಿಯರು ಈ ವಿವಾದವನ್ನು ಬಗೆಹರಿಸಲು ಪ್ರಯತ್ನಿದರು. ಆದರೆ ಕಾನೂನಿನ ಮೂಲಕವೇ ನ್ಯಾಯ ಪಡೆಯುವುದಾಗಿ ಸುದೀಪ್​ ಅವರು ನಿರ್ಧರಿಸಿದ್ದಾರೆ.

ಕಿಚ್ಚ ಸುದೀಪ್​ ಅವರು ಮುಂಗಡ ಹಣ ಪಡೆದು ಕಾಲ್​ಶೀಟ್​ ನೀಡಿಲ್ಲ ಎಂಬುದು ಎಂ.ಎನ್​. ಕುಮಾರ್ ಮಾಡಿದ ಆರೋಪ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಅವರು ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಇದರಿಂದ ತಮಗೆ ಮಾನಹಾನಿ ಆಗಿದೆ ಎಂದು ಸುದೀಪ್​ ಅವರು ಕೋರ್ಟ್​ ಮೆಟ್ಟಿಲೇರಿದರು. ಎಂ.ಎನ್​. ಕುಮಾರ್​ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಎನ್​.ಎಂ. ಸುರೇಶ್​ ಕೂಡ ಭಾಗಿ ಆಗಿದ್ದರು. ಅವರ ವಿರುದ್ಧವೂ ಸುದೀಪ್​ ದೂರು ನೀಡಿದ್ದರು. ಹಾಗಾಗಿ ಎನ್​.ಎಂ. ಸುರೇಶ್​ ಸಹ ಕಾನೂನಿನ ಸಂಕಷ್ಟ ಎದುರಿಸುತ್ತಿದ್ದಾರೆ.

ಆಗಸ್ಟ್​ 10ರಂದು ಸುದೀಪ್​ ಅವರು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿನ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಬಂದು ತಮ್ಮ ಹೇಳಿಕೆ ದಾಖಲಿಸಿದ್ದರು. ಆ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಮಾಧ್ಯಮಗಳ ಎದುರು ಸುದೀಪ್​ ಪರ ಲಾಯರ್​ ವಿವರಿಸಿದ್ದಾರೆ. ‘ಕಾನೂನಿನ ಪ್ರಕಾರವಾಗಿ ಸುದೀಪ್​ ಅವರು ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ್ದಾರೆ. ಮಾನಹಾನಿ ಆಗಿದ್ದಕ್ಕೆ ಸಾಕ್ಷಿಗಳನ್ನು ಸಲ್ಲಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಯಾವುದೇ ಅವಕಾಶ ಇಲ್ಲ’ ಎಂದು ಸುದೀಪ್​ ಪರ ವಕೀಲರು ಹೇಳಿದ್ದರು.

ಎಂ.ಎನ್​. ಕುಮಾರ್​ ನಡುವಿನ ಜಟಾಪಟಿಯಲ್ಲಿ ರಾಜಿ ಮಾಡಿಕೊಳ್ಳಲು ಸುದೀಪ್​ ಸಿದ್ಧರಿಲ್ಲ. ಸಂಧಾನ ನಡೆಸುವ ಉದ್ದೇಶದಿಂದ ರವಿಚಂದ್ರನ್​ ಮತ್ತು ಶಿವರಾಜ್​ಕುಮಾರ್​ ಅವರ ಮಧ್ಯಸ್ಥಿಕೆಯಲ್ಲಿ ಮಾತುಕಥೆ ನಡೆದಿತ್ತು. ಅದರಲ್ಲಿ ಸುದೀಪ್​ ಕೂಡ ಭಾಗಿ ಆಗಿದ್ದರು. ಆದರೆ ಕೋರ್ಟ್​ನ ಹೊರಗೆ ಸಂಧಾನ ಮಾಡಿಕೊಳ್ಳಲು ಸುದೀಪ್​ ಒಪ್ಪಿಕೊಂಡಿಲ್ಲ. ಹಾಗಾಗಿ ಅವರು ಕಾನೂನಿ ಹಾದಿ ಹಿಡಿದಿದ್ದಾರೆ.

andolanait

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

2 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

2 hours ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

2 hours ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

2 hours ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

2 hours ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

2 hours ago