ಬೆಂಗಳೂರು : ಸ್ಯಾಂಡಲ್ವುಡ್ನ ಖ್ಯಾತ ನಟ ಕಿಚ್ಚ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್. ಕುಮಾರ್ ಅವರ ನಡುವಿನ ವಿವಾದ ಈಗ ಕೋರ್ಟ್ ಅಂಗಳದಲ್ಲಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೂಡ ಆರಂಭ ಆಗಿದೆ. ಇತ್ತೀಚೆಗೆ ಸುದೀಪ್ ಮತ್ತು ಎಂ.ಎನ್. ಕುಮಾರ್ ಅವರು ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದರು. ಈಗ ನ್ಯಾಯಾಲಯದಿಂದ ಎಂ.ಎನ್. ಕುಮಾರ್ ಅವರಿಗೆ ಇಂಜಂಕ್ಷನ್ ಆರ್ಡರ್ ನೀಡಲಾಗಿದೆ.
ಸುದೀಪ್ ಅವರ ವಿರುದ್ಧ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಎಂದು ಆದೇಶಿಸಲಾಗಿದೆ. ಕೋರ್ಟ್ನಲ್ಲಿ ಕೇಸ್ ಅಂತ್ಯವಾಗುವ ತನಕವೂ ಈ ಆದೇಶ ಅನ್ವಯ ಆಗಲಿದೆ. ಚಿತ್ರರಂಗದ ಹಿರಿಯರು ಈ ವಿವಾದವನ್ನು ಬಗೆಹರಿಸಲು ಪ್ರಯತ್ನಿದರು. ಆದರೆ ಕಾನೂನಿನ ಮೂಲಕವೇ ನ್ಯಾಯ ಪಡೆಯುವುದಾಗಿ ಸುದೀಪ್ ಅವರು ನಿರ್ಧರಿಸಿದ್ದಾರೆ.
ಕಿಚ್ಚ ಸುದೀಪ್ ಅವರು ಮುಂಗಡ ಹಣ ಪಡೆದು ಕಾಲ್ಶೀಟ್ ನೀಡಿಲ್ಲ ಎಂಬುದು ಎಂ.ಎನ್. ಕುಮಾರ್ ಮಾಡಿದ ಆರೋಪ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಅವರು ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಇದರಿಂದ ತಮಗೆ ಮಾನಹಾನಿ ಆಗಿದೆ ಎಂದು ಸುದೀಪ್ ಅವರು ಕೋರ್ಟ್ ಮೆಟ್ಟಿಲೇರಿದರು. ಎಂ.ಎನ್. ಕುಮಾರ್ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಎನ್.ಎಂ. ಸುರೇಶ್ ಕೂಡ ಭಾಗಿ ಆಗಿದ್ದರು. ಅವರ ವಿರುದ್ಧವೂ ಸುದೀಪ್ ದೂರು ನೀಡಿದ್ದರು. ಹಾಗಾಗಿ ಎನ್.ಎಂ. ಸುರೇಶ್ ಸಹ ಕಾನೂನಿನ ಸಂಕಷ್ಟ ಎದುರಿಸುತ್ತಿದ್ದಾರೆ.
ಆಗಸ್ಟ್ 10ರಂದು ಸುದೀಪ್ ಅವರು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿನ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಬಂದು ತಮ್ಮ ಹೇಳಿಕೆ ದಾಖಲಿಸಿದ್ದರು. ಆ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಮಾಧ್ಯಮಗಳ ಎದುರು ಸುದೀಪ್ ಪರ ಲಾಯರ್ ವಿವರಿಸಿದ್ದಾರೆ. ‘ಕಾನೂನಿನ ಪ್ರಕಾರವಾಗಿ ಸುದೀಪ್ ಅವರು ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ್ದಾರೆ. ಮಾನಹಾನಿ ಆಗಿದ್ದಕ್ಕೆ ಸಾಕ್ಷಿಗಳನ್ನು ಸಲ್ಲಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಯಾವುದೇ ಅವಕಾಶ ಇಲ್ಲ’ ಎಂದು ಸುದೀಪ್ ಪರ ವಕೀಲರು ಹೇಳಿದ್ದರು.
ಎಂ.ಎನ್. ಕುಮಾರ್ ನಡುವಿನ ಜಟಾಪಟಿಯಲ್ಲಿ ರಾಜಿ ಮಾಡಿಕೊಳ್ಳಲು ಸುದೀಪ್ ಸಿದ್ಧರಿಲ್ಲ. ಸಂಧಾನ ನಡೆಸುವ ಉದ್ದೇಶದಿಂದ ರವಿಚಂದ್ರನ್ ಮತ್ತು ಶಿವರಾಜ್ಕುಮಾರ್ ಅವರ ಮಧ್ಯಸ್ಥಿಕೆಯಲ್ಲಿ ಮಾತುಕಥೆ ನಡೆದಿತ್ತು. ಅದರಲ್ಲಿ ಸುದೀಪ್ ಕೂಡ ಭಾಗಿ ಆಗಿದ್ದರು. ಆದರೆ ಕೋರ್ಟ್ನ ಹೊರಗೆ ಸಂಧಾನ ಮಾಡಿಕೊಳ್ಳಲು ಸುದೀಪ್ ಒಪ್ಪಿಕೊಂಡಿಲ್ಲ. ಹಾಗಾಗಿ ಅವರು ಕಾನೂನಿ ಹಾದಿ ಹಿಡಿದಿದ್ದಾರೆ.
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…