ಚಿತ್ರ ಮಂಜರಿ

ಸಾರ್ವಜನಿಕವಾಗಿ ಸುದೀಪ್​ ಬಗ್ಗೆ ಹೇಳಿಕೆ ನೀಡದಂತೆ ಎಂ.ಎನ್​. ಕುಮಾರ್​ಗೆ ನ್ಯಾಯಾಲಯ ಆದೇಶ

ಬೆಂಗಳೂರು : ಸ್ಯಾಂಡಲ್​ವುಡ್​ನ ಖ್ಯಾತ ನಟ ಕಿಚ್ಚ ಸುದೀಪ್​ ಮತ್ತು ನಿರ್ಮಾಪಕ ಎಂ.ಎನ್​. ಕುಮಾರ್​ ಅವರ ನಡುವಿನ ವಿವಾದ ಈಗ ಕೋರ್ಟ್​ ಅಂಗಳದಲ್ಲಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೂಡ ಆರಂಭ ಆಗಿದೆ. ಇತ್ತೀಚೆಗೆ ಸುದೀಪ್​ ಮತ್ತು ಎಂ.ಎನ್​. ಕುಮಾರ್​ ಅವರು ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದರು. ಈಗ ನ್ಯಾಯಾಲಯದಿಂದ ಎಂ.ಎನ್​. ಕುಮಾರ್​ ಅವರಿಗೆ ಇಂಜಂಕ್ಷನ್​ ಆರ್ಡರ್​ ನೀಡಲಾಗಿದೆ.

ಸುದೀಪ್​ ಅವರ ವಿರುದ್ಧ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಎಂದು ಆದೇಶಿಸಲಾಗಿದೆ. ಕೋರ್ಟ್​ನಲ್ಲಿ ಕೇಸ್​ ಅಂತ್ಯವಾಗುವ ತನಕವೂ ಈ ಆದೇಶ ಅನ್ವಯ ಆಗಲಿದೆ. ಚಿತ್ರರಂಗದ ಹಿರಿಯರು ಈ ವಿವಾದವನ್ನು ಬಗೆಹರಿಸಲು ಪ್ರಯತ್ನಿದರು. ಆದರೆ ಕಾನೂನಿನ ಮೂಲಕವೇ ನ್ಯಾಯ ಪಡೆಯುವುದಾಗಿ ಸುದೀಪ್​ ಅವರು ನಿರ್ಧರಿಸಿದ್ದಾರೆ.

ಕಿಚ್ಚ ಸುದೀಪ್​ ಅವರು ಮುಂಗಡ ಹಣ ಪಡೆದು ಕಾಲ್​ಶೀಟ್​ ನೀಡಿಲ್ಲ ಎಂಬುದು ಎಂ.ಎನ್​. ಕುಮಾರ್ ಮಾಡಿದ ಆರೋಪ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಅವರು ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಇದರಿಂದ ತಮಗೆ ಮಾನಹಾನಿ ಆಗಿದೆ ಎಂದು ಸುದೀಪ್​ ಅವರು ಕೋರ್ಟ್​ ಮೆಟ್ಟಿಲೇರಿದರು. ಎಂ.ಎನ್​. ಕುಮಾರ್​ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಎನ್​.ಎಂ. ಸುರೇಶ್​ ಕೂಡ ಭಾಗಿ ಆಗಿದ್ದರು. ಅವರ ವಿರುದ್ಧವೂ ಸುದೀಪ್​ ದೂರು ನೀಡಿದ್ದರು. ಹಾಗಾಗಿ ಎನ್​.ಎಂ. ಸುರೇಶ್​ ಸಹ ಕಾನೂನಿನ ಸಂಕಷ್ಟ ಎದುರಿಸುತ್ತಿದ್ದಾರೆ.

ಆಗಸ್ಟ್​ 10ರಂದು ಸುದೀಪ್​ ಅವರು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿನ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಬಂದು ತಮ್ಮ ಹೇಳಿಕೆ ದಾಖಲಿಸಿದ್ದರು. ಆ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಮಾಧ್ಯಮಗಳ ಎದುರು ಸುದೀಪ್​ ಪರ ಲಾಯರ್​ ವಿವರಿಸಿದ್ದಾರೆ. ‘ಕಾನೂನಿನ ಪ್ರಕಾರವಾಗಿ ಸುದೀಪ್​ ಅವರು ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ್ದಾರೆ. ಮಾನಹಾನಿ ಆಗಿದ್ದಕ್ಕೆ ಸಾಕ್ಷಿಗಳನ್ನು ಸಲ್ಲಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಯಾವುದೇ ಅವಕಾಶ ಇಲ್ಲ’ ಎಂದು ಸುದೀಪ್​ ಪರ ವಕೀಲರು ಹೇಳಿದ್ದರು.

ಎಂ.ಎನ್​. ಕುಮಾರ್​ ನಡುವಿನ ಜಟಾಪಟಿಯಲ್ಲಿ ರಾಜಿ ಮಾಡಿಕೊಳ್ಳಲು ಸುದೀಪ್​ ಸಿದ್ಧರಿಲ್ಲ. ಸಂಧಾನ ನಡೆಸುವ ಉದ್ದೇಶದಿಂದ ರವಿಚಂದ್ರನ್​ ಮತ್ತು ಶಿವರಾಜ್​ಕುಮಾರ್​ ಅವರ ಮಧ್ಯಸ್ಥಿಕೆಯಲ್ಲಿ ಮಾತುಕಥೆ ನಡೆದಿತ್ತು. ಅದರಲ್ಲಿ ಸುದೀಪ್​ ಕೂಡ ಭಾಗಿ ಆಗಿದ್ದರು. ಆದರೆ ಕೋರ್ಟ್​ನ ಹೊರಗೆ ಸಂಧಾನ ಮಾಡಿಕೊಳ್ಳಲು ಸುದೀಪ್​ ಒಪ್ಪಿಕೊಂಡಿಲ್ಲ. ಹಾಗಾಗಿ ಅವರು ಕಾನೂನಿ ಹಾದಿ ಹಿಡಿದಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

35 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago