ಬೆಂಗಳೂರು : ಸ್ಯಾಂಡಲ್ವುಡ್ನ ಖ್ಯಾತ ನಟ ಕಿಚ್ಚ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್. ಕುಮಾರ್ ಅವರ ನಡುವಿನ ವಿವಾದ ಈಗ ಕೋರ್ಟ್ ಅಂಗಳದಲ್ಲಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೂಡ ಆರಂಭ ಆಗಿದೆ. ಇತ್ತೀಚೆಗೆ ಸುದೀಪ್ ಮತ್ತು ಎಂ.ಎನ್. ಕುಮಾರ್ ಅವರು ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದರು. ಈಗ ನ್ಯಾಯಾಲಯದಿಂದ ಎಂ.ಎನ್. ಕುಮಾರ್ ಅವರಿಗೆ ಇಂಜಂಕ್ಷನ್ ಆರ್ಡರ್ ನೀಡಲಾಗಿದೆ.
ಸುದೀಪ್ ಅವರ ವಿರುದ್ಧ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಎಂದು ಆದೇಶಿಸಲಾಗಿದೆ. ಕೋರ್ಟ್ನಲ್ಲಿ ಕೇಸ್ ಅಂತ್ಯವಾಗುವ ತನಕವೂ ಈ ಆದೇಶ ಅನ್ವಯ ಆಗಲಿದೆ. ಚಿತ್ರರಂಗದ ಹಿರಿಯರು ಈ ವಿವಾದವನ್ನು ಬಗೆಹರಿಸಲು ಪ್ರಯತ್ನಿದರು. ಆದರೆ ಕಾನೂನಿನ ಮೂಲಕವೇ ನ್ಯಾಯ ಪಡೆಯುವುದಾಗಿ ಸುದೀಪ್ ಅವರು ನಿರ್ಧರಿಸಿದ್ದಾರೆ.
ಕಿಚ್ಚ ಸುದೀಪ್ ಅವರು ಮುಂಗಡ ಹಣ ಪಡೆದು ಕಾಲ್ಶೀಟ್ ನೀಡಿಲ್ಲ ಎಂಬುದು ಎಂ.ಎನ್. ಕುಮಾರ್ ಮಾಡಿದ ಆರೋಪ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಅವರು ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಇದರಿಂದ ತಮಗೆ ಮಾನಹಾನಿ ಆಗಿದೆ ಎಂದು ಸುದೀಪ್ ಅವರು ಕೋರ್ಟ್ ಮೆಟ್ಟಿಲೇರಿದರು. ಎಂ.ಎನ್. ಕುಮಾರ್ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಎನ್.ಎಂ. ಸುರೇಶ್ ಕೂಡ ಭಾಗಿ ಆಗಿದ್ದರು. ಅವರ ವಿರುದ್ಧವೂ ಸುದೀಪ್ ದೂರು ನೀಡಿದ್ದರು. ಹಾಗಾಗಿ ಎನ್.ಎಂ. ಸುರೇಶ್ ಸಹ ಕಾನೂನಿನ ಸಂಕಷ್ಟ ಎದುರಿಸುತ್ತಿದ್ದಾರೆ.
ಆಗಸ್ಟ್ 10ರಂದು ಸುದೀಪ್ ಅವರು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿನ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಬಂದು ತಮ್ಮ ಹೇಳಿಕೆ ದಾಖಲಿಸಿದ್ದರು. ಆ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಮಾಧ್ಯಮಗಳ ಎದುರು ಸುದೀಪ್ ಪರ ಲಾಯರ್ ವಿವರಿಸಿದ್ದಾರೆ. ‘ಕಾನೂನಿನ ಪ್ರಕಾರವಾಗಿ ಸುದೀಪ್ ಅವರು ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ್ದಾರೆ. ಮಾನಹಾನಿ ಆಗಿದ್ದಕ್ಕೆ ಸಾಕ್ಷಿಗಳನ್ನು ಸಲ್ಲಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಯಾವುದೇ ಅವಕಾಶ ಇಲ್ಲ’ ಎಂದು ಸುದೀಪ್ ಪರ ವಕೀಲರು ಹೇಳಿದ್ದರು.
ಎಂ.ಎನ್. ಕುಮಾರ್ ನಡುವಿನ ಜಟಾಪಟಿಯಲ್ಲಿ ರಾಜಿ ಮಾಡಿಕೊಳ್ಳಲು ಸುದೀಪ್ ಸಿದ್ಧರಿಲ್ಲ. ಸಂಧಾನ ನಡೆಸುವ ಉದ್ದೇಶದಿಂದ ರವಿಚಂದ್ರನ್ ಮತ್ತು ಶಿವರಾಜ್ಕುಮಾರ್ ಅವರ ಮಧ್ಯಸ್ಥಿಕೆಯಲ್ಲಿ ಮಾತುಕಥೆ ನಡೆದಿತ್ತು. ಅದರಲ್ಲಿ ಸುದೀಪ್ ಕೂಡ ಭಾಗಿ ಆಗಿದ್ದರು. ಆದರೆ ಕೋರ್ಟ್ನ ಹೊರಗೆ ಸಂಧಾನ ಮಾಡಿಕೊಳ್ಳಲು ಸುದೀಪ್ ಒಪ್ಪಿಕೊಂಡಿಲ್ಲ. ಹಾಗಾಗಿ ಅವರು ಕಾನೂನಿ ಹಾದಿ ಹಿಡಿದಿದ್ದಾರೆ.
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…