ಚಿತ್ರ ಮಂಜರಿ

ಸಾರ್ವಜನಿಕವಾಗಿ ಸುದೀಪ್​ ಬಗ್ಗೆ ಹೇಳಿಕೆ ನೀಡದಂತೆ ಎಂ.ಎನ್​. ಕುಮಾರ್​ಗೆ ನ್ಯಾಯಾಲಯ ಆದೇಶ

ಬೆಂಗಳೂರು : ಸ್ಯಾಂಡಲ್​ವುಡ್​ನ ಖ್ಯಾತ ನಟ ಕಿಚ್ಚ ಸುದೀಪ್​ ಮತ್ತು ನಿರ್ಮಾಪಕ ಎಂ.ಎನ್​. ಕುಮಾರ್​ ಅವರ ನಡುವಿನ ವಿವಾದ ಈಗ ಕೋರ್ಟ್​ ಅಂಗಳದಲ್ಲಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೂಡ ಆರಂಭ ಆಗಿದೆ. ಇತ್ತೀಚೆಗೆ ಸುದೀಪ್​ ಮತ್ತು ಎಂ.ಎನ್​. ಕುಮಾರ್​ ಅವರು ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದರು. ಈಗ ನ್ಯಾಯಾಲಯದಿಂದ ಎಂ.ಎನ್​. ಕುಮಾರ್​ ಅವರಿಗೆ ಇಂಜಂಕ್ಷನ್​ ಆರ್ಡರ್​ ನೀಡಲಾಗಿದೆ.

ಸುದೀಪ್​ ಅವರ ವಿರುದ್ಧ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಎಂದು ಆದೇಶಿಸಲಾಗಿದೆ. ಕೋರ್ಟ್​ನಲ್ಲಿ ಕೇಸ್​ ಅಂತ್ಯವಾಗುವ ತನಕವೂ ಈ ಆದೇಶ ಅನ್ವಯ ಆಗಲಿದೆ. ಚಿತ್ರರಂಗದ ಹಿರಿಯರು ಈ ವಿವಾದವನ್ನು ಬಗೆಹರಿಸಲು ಪ್ರಯತ್ನಿದರು. ಆದರೆ ಕಾನೂನಿನ ಮೂಲಕವೇ ನ್ಯಾಯ ಪಡೆಯುವುದಾಗಿ ಸುದೀಪ್​ ಅವರು ನಿರ್ಧರಿಸಿದ್ದಾರೆ.

ಕಿಚ್ಚ ಸುದೀಪ್​ ಅವರು ಮುಂಗಡ ಹಣ ಪಡೆದು ಕಾಲ್​ಶೀಟ್​ ನೀಡಿಲ್ಲ ಎಂಬುದು ಎಂ.ಎನ್​. ಕುಮಾರ್ ಮಾಡಿದ ಆರೋಪ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಅವರು ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಇದರಿಂದ ತಮಗೆ ಮಾನಹಾನಿ ಆಗಿದೆ ಎಂದು ಸುದೀಪ್​ ಅವರು ಕೋರ್ಟ್​ ಮೆಟ್ಟಿಲೇರಿದರು. ಎಂ.ಎನ್​. ಕುಮಾರ್​ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಎನ್​.ಎಂ. ಸುರೇಶ್​ ಕೂಡ ಭಾಗಿ ಆಗಿದ್ದರು. ಅವರ ವಿರುದ್ಧವೂ ಸುದೀಪ್​ ದೂರು ನೀಡಿದ್ದರು. ಹಾಗಾಗಿ ಎನ್​.ಎಂ. ಸುರೇಶ್​ ಸಹ ಕಾನೂನಿನ ಸಂಕಷ್ಟ ಎದುರಿಸುತ್ತಿದ್ದಾರೆ.

ಆಗಸ್ಟ್​ 10ರಂದು ಸುದೀಪ್​ ಅವರು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿನ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಬಂದು ತಮ್ಮ ಹೇಳಿಕೆ ದಾಖಲಿಸಿದ್ದರು. ಆ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಮಾಧ್ಯಮಗಳ ಎದುರು ಸುದೀಪ್​ ಪರ ಲಾಯರ್​ ವಿವರಿಸಿದ್ದಾರೆ. ‘ಕಾನೂನಿನ ಪ್ರಕಾರವಾಗಿ ಸುದೀಪ್​ ಅವರು ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ್ದಾರೆ. ಮಾನಹಾನಿ ಆಗಿದ್ದಕ್ಕೆ ಸಾಕ್ಷಿಗಳನ್ನು ಸಲ್ಲಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಯಾವುದೇ ಅವಕಾಶ ಇಲ್ಲ’ ಎಂದು ಸುದೀಪ್​ ಪರ ವಕೀಲರು ಹೇಳಿದ್ದರು.

ಎಂ.ಎನ್​. ಕುಮಾರ್​ ನಡುವಿನ ಜಟಾಪಟಿಯಲ್ಲಿ ರಾಜಿ ಮಾಡಿಕೊಳ್ಳಲು ಸುದೀಪ್​ ಸಿದ್ಧರಿಲ್ಲ. ಸಂಧಾನ ನಡೆಸುವ ಉದ್ದೇಶದಿಂದ ರವಿಚಂದ್ರನ್​ ಮತ್ತು ಶಿವರಾಜ್​ಕುಮಾರ್​ ಅವರ ಮಧ್ಯಸ್ಥಿಕೆಯಲ್ಲಿ ಮಾತುಕಥೆ ನಡೆದಿತ್ತು. ಅದರಲ್ಲಿ ಸುದೀಪ್​ ಕೂಡ ಭಾಗಿ ಆಗಿದ್ದರು. ಆದರೆ ಕೋರ್ಟ್​ನ ಹೊರಗೆ ಸಂಧಾನ ಮಾಡಿಕೊಳ್ಳಲು ಸುದೀಪ್​ ಒಪ್ಪಿಕೊಂಡಿಲ್ಲ. ಹಾಗಾಗಿ ಅವರು ಕಾನೂನಿ ಹಾದಿ ಹಿಡಿದಿದ್ದಾರೆ.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago