ಚಿತ್ರ ಮಂಜರಿ

ಸಲಾರ್ ಟೀಸರ್ ರಿಲೀಸ್​​ಗೆ ಮುಹೂರ್ತ ಫಿಕ್ಸ್ : ಅಧಿಕೃತ ಮಾಹಿತಿ ಪ್ರಕಟಿಸಿದ ಹೊಂಬಾಳೆ ಫಿಲ್ಮ್ಸ್

ಬೆಂಗಳೂರು : ಡಾರ್ಲಿಂಗ್ ಪ್ರಭಾಸ್ ಅವರ ಬಹುನಿರೀಕ್ಷಿತ ಸಲಾರ್ ಚಿತ್ರದ ಟೀಸರ್​​ ರಿಲೀಸ್​​ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಘೋಷಿಸಿದೆ.

ಪ್ಯಾನ್ ಇಂಡಿಯನ್ ಸ್ಟಾರ್ ನಟ ಪ್ರಭಾಸ್ ಅವರ ಬಹುನಿರೀಕ್ಷಿತ ಚಿತ್ರ ಸಲಾರ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕೆಜಿಎಫ್ ಸಿನಿಮಾದ ಖ್ಯಾತಿಯ ಪ್ರಶಾಂತ್ ನೀಲ್ ಈ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರ ಸೆಪ್ಟೆಂಬರ್ 28 2023 ರಂದು ದೇಶದ ಬಹುತೇಕ ಚಿತ್ರಮಂದಿರಗಳಲ್ಲಿ ಭರ್ಜರಿ ಓಪನಿಂಗ್ ಪಡೆಯಲು ಸಜ್ಜಾಗಿದೆ.

ಸದ್ಯ ಚಿತ್ರದ ನಿರ್ಮಾಪಕರು ಪ್ರಭಾಸ್ ಅಭಿಮಾನಿಗಳಿಗೆ ಮತ್ತು ಸಿನಿಪ್ರೇಕ್ಷಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ಸಲಾರ್ ಚಿತ್ರದ ಹೊಚ್ಚ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಆಕ್ಷನ್-ಡ್ರಾಮಾ ಹೊಂದಿರುವ ಟೀಸರ್ ಅನ್ನು ಜುಲೈ 6, 2023 ರಂದು ಸಂಜೆ 5:12ಕ್ಕೆ ಬಿಡುಗಡೆಗೊಳಿಸಲಿದ್ದೇವೆ ಎಂದು ಅಧಿಕೃತವಾಗಿ ತಿಳಿಸಿದೆ.

ಸಲಾರ್ ಚಿತ್ರದಲ್ಲಿ ಪ್ರಭಾಸ್ ಮತ್ತು ಶ್ರುತಿ ಹಾಸನ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮತ್ತು ಸರಣ್ ಶಕ್ತಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.

lokesh

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

20 mins ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

1 hour ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

2 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

2 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

2 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

3 hours ago