ಚಿತ್ರ ಮಂಜರಿ

ಖ್ಯಾತ ಸಂಗೀತ ನಿರ್ದೇಶಕ ಮನೋರಂಜನ್‌ ಪ್ರಭಾಕರ್‌ ನಿಧನ

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಮನೋರಂಜನ್‌ ಪ್ರಭಾಕರ್‌ ಅವರು ಬುಧವಾರ ನಿಧನರಾದರು. ಅವರು ಕೆಲಕಾಲದಿಂದ ಅನಾರೋಗ್ಯ ದಿಂದ ಬಳಲುತ್ತಿದ್ದರು.

ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಗುರುವಾರ (ಡಿ.15)ನಡೆಯಲಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಸಂಗೀತ ಪರಂಪರೆಯ ಕುಟುಂಬ ದಲ್ಲಿ ಜನಿಸಿದ್ದ (ತಂದೆ ಪಂಡಿತ್‌ ಬಿ.ಎನ್‌. ಪಾರ್ಥಸಾರಥಿ ನಾಯ್ಡು, ತಾಯಿ ಗೋವಿಂದಮ್ಮ) ಅವರು 70ರ ದಶಕದ ಆರಂಭದಲ್ಲಿ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟರು. ಮನೋರಂಜನ್‌ ಮತ್ತು ತಂಡ ಹೆಸರಿನಲ್ಲಿ ಕಾರ್ಯಕ್ರಮ ನೀಡುತ್ತಿದ್ದರು. 1980ರ ಅವಧಿಯಲ್ಲಿ ಇದು ಹೆಸರಾಂತ ತಂಡವಾಗಿತ್ತು. ಅವರು ಸುಮಾರು 800ಕ್ಕೂ ಹೆಚ್ಚು ಸಂಗೀತ ಆಲ್ಬಂ ಹೊರತಂದಿದ್ದಾರೆ.

90ರ ದಶಕದಲ್ಲಿ ಅವರು ಕೆಲಕಾಲ ಆದರ್ಶ ಫಿಲ್ಮ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಿಕ್ಷಕರಾಗಿದ್ದರು. 2003ರಲ್ಲಿ ತಮ್ಮದೇ ಆದ ಶ್ರುತಿಲಯ ಕಲ್ಚರಲ್‌ ಅಕಾಡೆಮಿ, ಶ್ರುತಿಲಯ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯೂಸಿಕ್‌ ಮೂಲಕ ಸಂಗೀತಾಸಕ್ತರಿಗೆ ತರಬೇತಿ ನೀಡುತ್ತಿದ್ದರು.

andolanait

Recent Posts

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

6 mins ago

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

2 hours ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

7 hours ago