ಚಿತ್ರ ಮಂಜರಿ

ಖ್ಯಾತ ಸಂಗೀತ ನಿರ್ದೇಶಕ ಮನೋರಂಜನ್‌ ಪ್ರಭಾಕರ್‌ ನಿಧನ

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಮನೋರಂಜನ್‌ ಪ್ರಭಾಕರ್‌ ಅವರು ಬುಧವಾರ ನಿಧನರಾದರು. ಅವರು ಕೆಲಕಾಲದಿಂದ ಅನಾರೋಗ್ಯ ದಿಂದ ಬಳಲುತ್ತಿದ್ದರು.

ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಗುರುವಾರ (ಡಿ.15)ನಡೆಯಲಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಸಂಗೀತ ಪರಂಪರೆಯ ಕುಟುಂಬ ದಲ್ಲಿ ಜನಿಸಿದ್ದ (ತಂದೆ ಪಂಡಿತ್‌ ಬಿ.ಎನ್‌. ಪಾರ್ಥಸಾರಥಿ ನಾಯ್ಡು, ತಾಯಿ ಗೋವಿಂದಮ್ಮ) ಅವರು 70ರ ದಶಕದ ಆರಂಭದಲ್ಲಿ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟರು. ಮನೋರಂಜನ್‌ ಮತ್ತು ತಂಡ ಹೆಸರಿನಲ್ಲಿ ಕಾರ್ಯಕ್ರಮ ನೀಡುತ್ತಿದ್ದರು. 1980ರ ಅವಧಿಯಲ್ಲಿ ಇದು ಹೆಸರಾಂತ ತಂಡವಾಗಿತ್ತು. ಅವರು ಸುಮಾರು 800ಕ್ಕೂ ಹೆಚ್ಚು ಸಂಗೀತ ಆಲ್ಬಂ ಹೊರತಂದಿದ್ದಾರೆ.

90ರ ದಶಕದಲ್ಲಿ ಅವರು ಕೆಲಕಾಲ ಆದರ್ಶ ಫಿಲ್ಮ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಿಕ್ಷಕರಾಗಿದ್ದರು. 2003ರಲ್ಲಿ ತಮ್ಮದೇ ಆದ ಶ್ರುತಿಲಯ ಕಲ್ಚರಲ್‌ ಅಕಾಡೆಮಿ, ಶ್ರುತಿಲಯ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯೂಸಿಕ್‌ ಮೂಲಕ ಸಂಗೀತಾಸಕ್ತರಿಗೆ ತರಬೇತಿ ನೀಡುತ್ತಿದ್ದರು.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago