ಖ್ಯಾತ ಶಾಸ್ತ್ರೀಯ ಸಂಗೀತಗಾರ, ಸಂಗೀತ ಮಾಂತ್ರಿಕ ರಶೀದ್ ಖಾನ್ ಇಂದು ( ಜನವರಿ 9 ) ಕೊಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಸೆರೆಬ್ರಲ್ ಅಟ್ಯಾಕ್ಗೆ ಒಳಗಾಗಿದ್ದ ರಶೀದ್ ಖಾನ್ ಕಳೆದ ಕೆಲ ತಿಂಗಳುಗಳಿಂದ ವೆಂಟಿಲೇಟರ್ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳಿಂದ ಚೆನ್ನಾಗಿಯೇ ಚಿಕಿತ್ಸೆಗೆ ಸ್ಪಂದಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು 55 ವರ್ಷಕ್ಕೆ ಬಾಳಪಯಣವನ್ನು ಅಂತ್ಯಗೊಳಿಸಿದ್ದಾರೆ.
ಉತ್ತರ ಪ್ರದೇಶದ ಬಡಾಯುನ್ನಲ್ಲಿ ಜುಲೈ 1, 1968ರಲ್ಲಿ ಜನಿಸಿದ್ದ ರಶೀದ್ ಖಾನ್ ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳ ಜತೆಗೆ ಸಂಗೀತ್ ನಾಟಕ್ ಅಕಾಡೆಮಿ ಗೌರವವನ್ನೂ ಸಹ ಪಡೆದಿದ್ದಾರೆ. ಹಿಂದೂಸ್ತಾನಿ ಸಂಗೀತ ಸಂಪ್ರದಾಯದ ಶಾಸ್ತ್ರೀಯ ಸಂಗೀತಗಾರರಾಗಿದ್ದ ರಶೀದ್ ಖಾನ್ ನಿಧನ ಸುದ್ದಿಗೆ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದು, ಸಂಜೆ 6 ಗಂಟೆಯವರೆಗೆ ಪೀರ್ಲೆಸ್ ಆಸ್ಪತ್ರೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಪಾರ್ಥಿವ ಶರೀರವನ್ನು ಕೊಲ್ಕತ್ತಾದ ಪೀಸ್ ಹೆವನ್ಗೆ ಕಳುಹಿಸಲಾಗುವುದು ಹಾಗೂ ನಾಳೆ ( ಜನವರಿ 10 ) ಅಂತ್ಯಕ್ರಿಯೆ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…