ಖ್ಯಾತ ಶಾಸ್ತ್ರೀಯ ಸಂಗೀತಗಾರ, ಸಂಗೀತ ಮಾಂತ್ರಿಕ ರಶೀದ್ ಖಾನ್ ಇಂದು ( ಜನವರಿ 9 ) ಕೊಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಸೆರೆಬ್ರಲ್ ಅಟ್ಯಾಕ್ಗೆ ಒಳಗಾಗಿದ್ದ ರಶೀದ್ ಖಾನ್ ಕಳೆದ ಕೆಲ ತಿಂಗಳುಗಳಿಂದ ವೆಂಟಿಲೇಟರ್ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳಿಂದ ಚೆನ್ನಾಗಿಯೇ ಚಿಕಿತ್ಸೆಗೆ ಸ್ಪಂದಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು 55 ವರ್ಷಕ್ಕೆ ಬಾಳಪಯಣವನ್ನು ಅಂತ್ಯಗೊಳಿಸಿದ್ದಾರೆ.
ಉತ್ತರ ಪ್ರದೇಶದ ಬಡಾಯುನ್ನಲ್ಲಿ ಜುಲೈ 1, 1968ರಲ್ಲಿ ಜನಿಸಿದ್ದ ರಶೀದ್ ಖಾನ್ ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳ ಜತೆಗೆ ಸಂಗೀತ್ ನಾಟಕ್ ಅಕಾಡೆಮಿ ಗೌರವವನ್ನೂ ಸಹ ಪಡೆದಿದ್ದಾರೆ. ಹಿಂದೂಸ್ತಾನಿ ಸಂಗೀತ ಸಂಪ್ರದಾಯದ ಶಾಸ್ತ್ರೀಯ ಸಂಗೀತಗಾರರಾಗಿದ್ದ ರಶೀದ್ ಖಾನ್ ನಿಧನ ಸುದ್ದಿಗೆ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದು, ಸಂಜೆ 6 ಗಂಟೆಯವರೆಗೆ ಪೀರ್ಲೆಸ್ ಆಸ್ಪತ್ರೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಪಾರ್ಥಿವ ಶರೀರವನ್ನು ಕೊಲ್ಕತ್ತಾದ ಪೀಸ್ ಹೆವನ್ಗೆ ಕಳುಹಿಸಲಾಗುವುದು ಹಾಗೂ ನಾಳೆ ( ಜನವರಿ 10 ) ಅಂತ್ಯಕ್ರಿಯೆ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…