ಖ್ಯಾತ ಶಾಸ್ತ್ರೀಯ ಸಂಗೀತಗಾರ, ಸಂಗೀತ ಮಾಂತ್ರಿಕ ರಶೀದ್ ಖಾನ್ ಇಂದು ( ಜನವರಿ 9 ) ಕೊಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಸೆರೆಬ್ರಲ್ ಅಟ್ಯಾಕ್ಗೆ ಒಳಗಾಗಿದ್ದ ರಶೀದ್ ಖಾನ್ ಕಳೆದ ಕೆಲ ತಿಂಗಳುಗಳಿಂದ ವೆಂಟಿಲೇಟರ್ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳಿಂದ ಚೆನ್ನಾಗಿಯೇ ಚಿಕಿತ್ಸೆಗೆ ಸ್ಪಂದಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು 55 ವರ್ಷಕ್ಕೆ ಬಾಳಪಯಣವನ್ನು ಅಂತ್ಯಗೊಳಿಸಿದ್ದಾರೆ.
ಉತ್ತರ ಪ್ರದೇಶದ ಬಡಾಯುನ್ನಲ್ಲಿ ಜುಲೈ 1, 1968ರಲ್ಲಿ ಜನಿಸಿದ್ದ ರಶೀದ್ ಖಾನ್ ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳ ಜತೆಗೆ ಸಂಗೀತ್ ನಾಟಕ್ ಅಕಾಡೆಮಿ ಗೌರವವನ್ನೂ ಸಹ ಪಡೆದಿದ್ದಾರೆ. ಹಿಂದೂಸ್ತಾನಿ ಸಂಗೀತ ಸಂಪ್ರದಾಯದ ಶಾಸ್ತ್ರೀಯ ಸಂಗೀತಗಾರರಾಗಿದ್ದ ರಶೀದ್ ಖಾನ್ ನಿಧನ ಸುದ್ದಿಗೆ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದು, ಸಂಜೆ 6 ಗಂಟೆಯವರೆಗೆ ಪೀರ್ಲೆಸ್ ಆಸ್ಪತ್ರೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಪಾರ್ಥಿವ ಶರೀರವನ್ನು ಕೊಲ್ಕತ್ತಾದ ಪೀಸ್ ಹೆವನ್ಗೆ ಕಳುಹಿಸಲಾಗುವುದು ಹಾಗೂ ನಾಳೆ ( ಜನವರಿ 10 ) ಅಂತ್ಯಕ್ರಿಯೆ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…