ಚಿತ್ರ ಮಂಜರಿ

ಪದ್ಮಶ್ರೀ ಪುರಸ್ಕೃತ ಸಂಗೀತ ಮಾಂತ್ರಿಕ ರಶೀದ್‌ ಖಾನ್‌ ನಿಧನ

ಖ್ಯಾತ ಶಾಸ್ತ್ರೀಯ ಸಂಗೀತಗಾರ, ಸಂಗೀತ ಮಾಂತ್ರಿಕ ರಶೀದ್‌ ಖಾನ್‌ ಇಂದು ( ಜನವರಿ 9 ) ಕೊಲ್ಕತ್ತಾದ ಪೀರ್ಲೆಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಸೆರೆಬ್ರಲ್‌ ಅಟ್ಯಾಕ್‌ಗೆ ಒಳಗಾಗಿದ್ದ ರಶೀದ್‌ ಖಾನ್‌ ಕಳೆದ ಕೆಲ ತಿಂಗಳುಗಳಿಂದ ವೆಂಟಿಲೇಟರ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳಿಂದ ಚೆನ್ನಾಗಿಯೇ ಚಿಕಿತ್ಸೆಗೆ ಸ್ಪಂದಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು 55 ವರ್ಷಕ್ಕೆ ಬಾಳಪಯಣವನ್ನು ಅಂತ್ಯಗೊಳಿಸಿದ್ದಾರೆ.

ಉತ್ತರ ಪ್ರದೇಶದ ಬಡಾಯುನ್‌ನಲ್ಲಿ ಜುಲೈ 1, 1968ರಲ್ಲಿ ಜನಿಸಿದ್ದ ರಶೀದ್‌ ಖಾನ್‌ ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳ ಜತೆಗೆ ಸಂಗೀತ್‌ ನಾಟಕ್‌ ಅಕಾಡೆಮಿ ಗೌರವವನ್ನೂ ಸಹ ಪಡೆದಿದ್ದಾರೆ. ಹಿಂದೂಸ್ತಾನಿ ಸಂಗೀತ ಸಂಪ್ರದಾಯದ ಶಾಸ್ತ್ರೀಯ ಸಂಗೀತಗಾರರಾಗಿದ್ದ ರಶೀದ್ ಖಾನ್‌ ನಿಧನ ಸುದ್ದಿಗೆ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದು, ಸಂಜೆ 6 ಗಂಟೆಯವರೆಗೆ ಪೀರ್ಲೆಸ್‌ ಆಸ್ಪತ್ರೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಪಾರ್ಥಿವ ಶರೀರವನ್ನು ಕೊಲ್ಕತ್ತಾದ ಪೀಸ್‌ ಹೆವನ್‌ಗೆ ಕಳುಹಿಸಲಾಗುವುದು ಹಾಗೂ ನಾಳೆ ( ಜನವರಿ 10 ) ಅಂತ್ಯಕ್ರಿಯೆ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

 

andolana

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

2 hours ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

2 hours ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

2 hours ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

2 hours ago