ಜೀ ಕುಂಟುಂಬ ಅವಾಡ್ಸ್ 2023 ವೇದಿಕೆಯಲ್ಲಿ ನಟ ಅಶೋಕ್ ಬಾಲ್ಯದ ಗೆಳೆಯ ಯಶ್ ಹಾಗೂ ತಮ್ಮ ನಡುವಿನ ಸ್ನೇಹವನ್ನು ನೆನೆದಿದ್ದಾರೆ.
ಜೀ ಕುಟುಂಬ ಅವಾರ್ಡ್ಸ್ 2023 ರಲ್ಲಿ ನೆಚ್ಚಿನ ಸ್ನೇಹಿತ ಅವಾರ್ಡ್ ಸ್ವೀಕರಿಸಿದ ಬಳಿಕ ಮಾತನಾಡಿದ ಅಶೋಕ್ ತಮ್ಮ ಆತ್ಮೀಯ ಗೆಳೆಯ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದು,ಇವತ್ತು ಸಿನಿಮಾ ರಂಗದಲ್ಲಿ ನನಗೊಂದು ಹೆಸರು ಬಂದಿದೆ ಅಂದ್ರೆ ಅದಕ್ಕೆ ನನ್ನ ಗಳೆಯ ಯಶ್ ಕಾರಣ. ನನ್ನ ಹಾಗೂ ಯಶ್ ಸ್ನೇಹ ಬಹಳ ಹಳೆಯದು. ಯಶ್ ನನಗಿಂತ ಎರಡು ವರ್ಷ ಚಿಕ್ಕವನು, ನಾನು ಫಸ್ಟ್ ಇಯರ್ ಬಿ.ಕಾಂ ನಲ್ಲಿದ್ದಾಗ ಅವನು ಫಸ್ಟ್ ಪಿಯುಸಿ ಓದುತ್ತಿದ್ದ. ನಾವಿಬ್ರೂ ಒಂದೇ ಡ್ಯಾನ್ಸ್ ಗ್ರೂಪ್ ನಲ್ಲಿ ಡ್ಯಾನ್ಸ್ ಮಾಡ್ತಿದ್ವಿ. ಲಗಾನ್ ಚಿತ್ರದ ಮಿತ್ವಾ ಓ ಮಿತ್ವಾ ಹಾಡಿಗೆ ನಾವಿಬ್ರೂ ಡ್ಯಾನ್ಸ್ ಮಾಡಿದ್ವಿ. ಆ ಹಾಡಿನಲ್ಲಿ ಅಮೀರ್ ಖಾನ್ ಒಬ್ಬ ಹುಡುಗನನ್ನು ತಮ್ಮ ತೊಡೆಯ ಮೇಲೆ ಕೂರಿಸಿಕೊಳ್ಳುತ್ತಾರೆ. ಅದೇ ರೀತಿ ನಾನು ಯಶ್ ನ ನನ್ನ ತೊಡೆ ಮೇಲೆ ಕುರಿಸಿಕೊಂಡಿದ್ದೆ. ಎಂದು ತಮ್ಮ ಸ್ನೇಹವನ್ನು ಮೆಲುಕು ಹಾಕಿದ್ದಾರೆ.
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸೀತಾ ರಾಮ ಧಾರಾವಾಹಿ ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಪ್ರೇಕ್ಷಕರು ಪ್ರತಿಯೋಂದು ಪಾತ್ರವನ್ನೂ ಕೂಡ ಬಿಗಿದಪ್ಪಿಕೊಳ್ಳುತ್ತಿದ್ದಾರೆ. ಸೀತಾ ರಾಮ ಧಾರವಾಹಿಯಲ್ಲಿನ ರಾಮ್ ಹಾಗೂ ಅಶೋಕ್ ಸ್ನೇಹ ನೋಡುಗರನ್ನು ಮೋಡಿ ಮಾಡಿದೆ. ಸೋಶಿಯಲ್ ಮೀಡಿಯಾದಲ್ಲಿ ಸ್ನೇಹ ಅಂದ್ರೆ ಹೀಗಿರ್ಬೇಕು ಆಂತಾ ಇವರಿಬ್ಬರ ವಿಡಿಯೋ ತುಣುಕುಗಳು ಹರಿದಾಡುತ್ತಿರುತ್ತವೆ.
ಅಂತೆಯೇ ಈ ಬಾರಿಯ ಜೀ ಕುಟುಂಬ ಅವಾರ್ಡ್ಸ್ 2023 ಕಾರ್ಯಕ್ರಮದಲ್ಲಿ ಅಶೋಕ್ ಅವರು ನೆಚ್ಚಿನ ಸ್ನೇಹಿತ ಅವಾರ್ಡ್ ಪಡೆದುಕೊಂಡಿದ್ದಾರೆ.ಈ ವೇಳೆ ತಮ್ಮ ಬಾಲ್ಯದ ಗೆಳೆಯ ಯಶ್ ಜೊತೆಗಿನ ತಮ್ಮ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…