ಚಿತ್ರ ಮಂಜರಿ

ಯೋಗಿಗಳ ಕಾಲು ಹಿಡಿಯುವುದು ನನ್ನ ಅಭ್ಯಾಸ-ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ : ರಜನಿಕಾಂತ್

ಉತ್ತರ ಭಾರತ ಪ್ರವಾಸದ ವೇಳೆ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದರು ಸೂಪರ್ ಸ್ಟಾರ್ ರಜನಿಕಾಂತ್. ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ವಯಸ್ಸಿನ ಅಂತರವಿರು ವ್ಯಕ್ತಿಯ ಕಾಲಿಗೆ ಬಿದ್ದದ್ದು ಒಂದು ಕಡೆಯಾಗಿದ್ದರೆ, ತಮಿಳಿನ ಅಸ್ಮಿತೆಯನ್ನೇ ಯೋಗಿ ಪಾದಕ್ಕೆ ಇಟ್ಟಿದ್ದಾರೆ ಎಂದು ಕೆಲವರು ಕಾಮೆಂಟ್ ಮಾಡಿದ್ದರು. ಅದಕ್ಕೀಯ ರಜನಿ ಉತ್ತರಿಸಿದ್ದಾರೆ.

ಪ್ರವಾಸ ಮುಗಿಸಿಕೊಂಡು ಚೆನ್ನೈಗೆ ವಾಪಸ್ಸಾಗಿರುವ ರಜನಿಕಾಂತ್, ಮಾಧ್ಯಮಗಳ ಜೊತೆ ಮಾತನಾಡಿ ಯೋಗಿಗಳು, ತಪಸ್ವಿಗಳು, ಮಹಾತ್ಮರು ನನಗಿಂತ ಎಷ್ಟೇ ಚಿಕ್ಕವರಾಗಿದ್ದರೂ, ಅವರ ಕಾಲು ಹಿಡಿದುಕೊಂಡು ಆಶೀರ್ವಾದ ಪಡೆಯುವುದು ನನ್ನ ಅಭ್ಯಾಸ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ರಜನಿ ಹೇಳಿದ್ದಾರೆ. ಈ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಜೈಲರ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ರಜನಿಕಾಂತ್ ಟೆಂಪಲ್ ರನ್ ಮಾಡುತ್ತಿದ್ದರು. ಸಿನಿಮಾ ರಿಲೀಸ್ ವೇಳೆ ಅವರು ಹಿಮಾಲಯಕ್ಕೆ ಹಾರಿದ್ದರು. ಅಲ್ಲಿ ಧ್ಯಾನಕ್ಕೆ ಶರಣಾಗಿದ್ದರು. ಅಲ್ಲಿಂದ ಹೊರಟು ಇದೀಗ ಉತ್ತರ ಪ್ರದೇಶದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಅಯೋಧ್ಯಗೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ನಿರ್ಮಾಣ ಹಂತದಲ್ಲಿರುವ ದೇವಸ್ಥಾನವನ್ನೂ ಅವರು ವೀಕ್ಷಣೆ ಮಾಡಿದ್ದಾರೆ.

ಈ ವೇಳೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾಗಿದ್ದರು. ಅವರ ಕಾಲು ಹಿಡಿದು ನಮಸ್ಕರಿಸಿದ್ದರು. ನಂತರ ಆಗಸ್ಟ್ 19ರಂದು ಜೈಲರ್ ಚಿತ್ರವನ್ನು ಅವರೊಂದಿಗೆ ವೀಕ್ಷಿಸಿದ್ದರು. ಯೋಗಿಯ ಕಾಲು ಹಿಡಿದದ್ದು ಟೀಕೆಗೆ ಗುರಿಯಾಗಿತ್ತು. ಸಖತ್ ಟ್ರೋಲ್ ಕೂಡ ಆಗಿತ್ತು.

ತಲೈವಾ-ಶಿವಣ್ಣ ಕಾಂಬಿನೇಷನ್‌ ನ ಜೈಲರ್ ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ತಲೈವಾ ಸಿನಿಮಾವನ್ನ ಒಪ್ಪಿ ಜನ ಮೆಚ್ಚಿಕೊಂಡಿದ್ದಾರೆ. ಸಿನಿಮಾ ಕಥೆ, ಡೈಲಾಗ್, ಸಾಂಗ್ಸ್ ಎಲ್ಲವೂ ಫ್ಯಾನ್ಸ್‌ಗೆ ಮೋಡಿ ಮಾಡಿದೆ. ಆಗಸ್ಟ್ 10ಕ್ಕೆ ರಿಲೀಸ್ ಆಗಿದ್ದು, ಐನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಮೂಲಕ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.

lokesh

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago