ಚಿತ್ರ ಮಂಜರಿ

ನನ್ನ ಮಗನಿಗೆ ಸಮಸ್ಯೆ ಬಂದಿದೆ, ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ: ಸುದೀಪ್ ಬೆಂಬಲಕ್ಕೆ ರವಿಚಂದ್ರನ್

ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಎಂಎನ್ ಕುಮಾರ್ ನಡುವಿನ ಜಟಾಪಟಿ ಮುಂದುವರಿದಿದೆ. ಈ ಪ್ರಕರಣವನ್ನು ಕೋರ್ಟ್​​ನಲ್ಲಿ ಬಗೆಹರಿಸಿಕೊಳ್ಳಲು ಸುದೀಪ್ ಮುಂದಾಗಿದ್ದಾರೆ. ಇದಕ್ಕೆ ಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ಕುಮಾರ್ ಅವರು ಇಂದು (ಜುಲೈ 19) ರವಿಚಂದ್ರನ್​ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ನಟ ‘ಕಿಚ್ಚ’ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂ ಎನ್ ಕುಮಾರ್ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಅತ್ತ ಕುಮಾರ್ ವಿರುದ್ಧ ಸುದೀಪ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿರುವ ನಟ ರವಿಚಂದ್ರನ್, ‘ನನ್ನ ಮಗನ (ಸುದೀಪ್‌) ಮೇಲೆ ಆರೋಪ ಬಂದಿದೆ, ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ. ಮೊದಲು ಎಲ್ಲರೂ ಕೂಲ್ ಆಗಬೇಕು’ ಎಂದು ಹೇಳಿದ್ದಾರೆ.
‘ಪರಿಸ್ಥಿತಿ ಸರಿ ಇಲ್ಲದೇ ಇರುವಾಗ ಮನಸ್ಥಿತಿಯೂ ಸರಿ ಇರಲ್ಲ. ಅವೆರಡನ್ನೂ ಬ್ಯಾಲೆನ್ಸ್ ಮಾಡುವುದೇ ಜೀವನ. ಸದ್ಯ ಎಲ್ಲರೂ ತಣ್ಣಗಾಗಬೇಕು. ನಮಗೆ ಇದರ ಬಗ್ಗೆ ಪೂರ್ತಿ ಸ್ಟೋರಿ ಗೊತ್ತಿರುವುದಿಲ್ಲ. ಆದರೆ ಸುದೀಪ್‌ಗೆ ಬೇಸರವಾಗಿರುವುದು ನಿಜ. ಬರೀ ಇಬ್ಬರ ಮಾತುಗಳನ್ನು ಕೇಳಿಕೊಂಡು ಯಾವ ತೀರ್ಮಾನವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರೂ ನಮ್ಮವರೆ, ನಮ್ಮ ಮನೆಯವರೇ. ಈಗ ನಿರ್ಮಾಪಕರು ನನ್ನ ಬಳಿ ಬಂದಿದ್ದಾರೆ. ಮೊದಲು ಎಲ್ಲರೂ ಕೂಲ್ ಆಗಬೇಕು. ಆಮೇಲೆ ನಾನು ಯೋಚನೆ ಮಾಡಬಹುದು. ನಾನು ಮಾತುಗಳನ್ನು ನಂಬುವುದಿಲ್ಲ. ದಾಖಲೆಗಳು ಬೇಕು’ ಎಂದು ರವಿಚಂದ್ರನ್‌ ಹೇಳಿದ್ದಾರೆ.

ನಾನು ದಾಖಲೆಗಳನ್ನು ನೋಡಿದ ಮೇಲೆ, ಅದರಲ್ಲಿ ಎಷ್ಟು ಸತ್ಯ ಇದೆ? ಏನೆಲ್ಲ ಮಾತುಕತೆ ಆಗಿದೆ ಎಂಬುದುನ್ನು ನಾನು ಪರಿಶೀಲಿಸಬೇಕು. ನಿರ್ಧಾರವನ್ನು ನನ್ನ ತಿಳುವಳಿಕೆಗೆ ಬಿಡಬೇಕು. ಇವರು ನನಗೆ ನಿಡುವ ದಾಖಲೆಗಳು ಮೇಲೆ ನಾನು ಸುದೀಪ್‌ ಬಳಿ ಮಾತನಾಡಬೇಕಾ? ಬೇಡ್ವಾ ಅಂತ ನಾನು ತೀರ್ಮಾನ ಮಾಡ್ತಿನಿ. ಮೊದಲು ನಾನು ಹೇಳುವುದೇನೆಂದರೆ, ಕುಮಾರ್‌ ಧರಣಿಯನ್ನು ನಿಲ್ಲಿಸಬೇಕು’ ಎಂದು ಅವರು ಹೇಳಿದ್ದಾರೆ.

ನನಗಿಂತಲೂ ಮೊದಲು ಸುದೀಪ್‌ಗೆ ಹೆಚ್ಚು ಆಪ್ತರಾಗಿರುವುದು ಕುಮಾರ್. ಇಬ್ಬರು ಜೊತೆಗೆ ಸಿನಿಮಾಗಳನ್ನು ಮಾಡಿದ್ದಾರೆ. ಇದು ಗಂಡ-ಹೆಂಡತಿ ಜಗಳ ಇದ್ದಂಗೆ. ಇದರಲ್ಲಿ ಮೂರನೇಯವರು ಬಂದಾಗ ಏನಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಬೀದಿಗೆ ಬಂದಿರುವುದರಿಂದ ಏನೂ ಮಾಡೋಕಾಗಲ್ಲ. ಈ ವಿಷಯದಲ್ಲಿ ಎಂಟ್ರಿಯಾಗೋದು ಬೇಡ ಎಂದು ತಪ್ಪಿಸಿಕೊಂಡು ಓಡಾಡುತ್ತಿದ್ದೆ. ಮೊದಲು ಕುಮಾರ್ ಪ್ರತಿಭಟನೆ ನಲ್ಲಿಸಲಿ ಎಂದಿದ್ದಾರೆ.

ಆದರೆ ಇವರೆಲ್ಲ (ನಿರ್ಮಾಪಕರು) ಬಂದಿದ್ದಾರೆ. ನನಗೆ ಇಂಡಸ್ಟ್ರೀ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಇದನ್ನು ಸರಿ ಮಾಡಲು ಸಾಧ್ಯವಾದರೆ, ಅದಕ್ಕಿಂತ ಖುಷಿಯಾದ ವಿಚಾರ ಇನ್ನೊಂದಿಲ್ಲ. ರವಿಚಂದ್ರನ್ ಮನೆಗೆ ಸುದೀಪ್‌ ಕೂಡ ಬರ್ತಾರೆ, ಕುಮಾರ್ ಕೂಡ ಬರ್ತಾರೆ.. ಮೊದಲು ಎಲ್ಲರನ್ನೂ ಕೂಲ್ ಮಾಡೋಣ’ ಎಂದು ರವಿಚಂದ್ರನ್ ಹೇಳಿದ್ದಾರೆ.

andolanait

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

3 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

3 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

3 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

4 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

4 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

5 hours ago