ಚಿತ್ರ ಮಂಜರಿ

ನನ್ನ ಮಗನಿಗೆ ಸಮಸ್ಯೆ ಬಂದಿದೆ, ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ: ಸುದೀಪ್ ಬೆಂಬಲಕ್ಕೆ ರವಿಚಂದ್ರನ್

ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಎಂಎನ್ ಕುಮಾರ್ ನಡುವಿನ ಜಟಾಪಟಿ ಮುಂದುವರಿದಿದೆ. ಈ ಪ್ರಕರಣವನ್ನು ಕೋರ್ಟ್​​ನಲ್ಲಿ ಬಗೆಹರಿಸಿಕೊಳ್ಳಲು ಸುದೀಪ್ ಮುಂದಾಗಿದ್ದಾರೆ. ಇದಕ್ಕೆ ಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ಕುಮಾರ್ ಅವರು ಇಂದು (ಜುಲೈ 19) ರವಿಚಂದ್ರನ್​ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ನಟ ‘ಕಿಚ್ಚ’ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂ ಎನ್ ಕುಮಾರ್ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಅತ್ತ ಕುಮಾರ್ ವಿರುದ್ಧ ಸುದೀಪ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿರುವ ನಟ ರವಿಚಂದ್ರನ್, ‘ನನ್ನ ಮಗನ (ಸುದೀಪ್‌) ಮೇಲೆ ಆರೋಪ ಬಂದಿದೆ, ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ. ಮೊದಲು ಎಲ್ಲರೂ ಕೂಲ್ ಆಗಬೇಕು’ ಎಂದು ಹೇಳಿದ್ದಾರೆ.
‘ಪರಿಸ್ಥಿತಿ ಸರಿ ಇಲ್ಲದೇ ಇರುವಾಗ ಮನಸ್ಥಿತಿಯೂ ಸರಿ ಇರಲ್ಲ. ಅವೆರಡನ್ನೂ ಬ್ಯಾಲೆನ್ಸ್ ಮಾಡುವುದೇ ಜೀವನ. ಸದ್ಯ ಎಲ್ಲರೂ ತಣ್ಣಗಾಗಬೇಕು. ನಮಗೆ ಇದರ ಬಗ್ಗೆ ಪೂರ್ತಿ ಸ್ಟೋರಿ ಗೊತ್ತಿರುವುದಿಲ್ಲ. ಆದರೆ ಸುದೀಪ್‌ಗೆ ಬೇಸರವಾಗಿರುವುದು ನಿಜ. ಬರೀ ಇಬ್ಬರ ಮಾತುಗಳನ್ನು ಕೇಳಿಕೊಂಡು ಯಾವ ತೀರ್ಮಾನವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರೂ ನಮ್ಮವರೆ, ನಮ್ಮ ಮನೆಯವರೇ. ಈಗ ನಿರ್ಮಾಪಕರು ನನ್ನ ಬಳಿ ಬಂದಿದ್ದಾರೆ. ಮೊದಲು ಎಲ್ಲರೂ ಕೂಲ್ ಆಗಬೇಕು. ಆಮೇಲೆ ನಾನು ಯೋಚನೆ ಮಾಡಬಹುದು. ನಾನು ಮಾತುಗಳನ್ನು ನಂಬುವುದಿಲ್ಲ. ದಾಖಲೆಗಳು ಬೇಕು’ ಎಂದು ರವಿಚಂದ್ರನ್‌ ಹೇಳಿದ್ದಾರೆ.

ನಾನು ದಾಖಲೆಗಳನ್ನು ನೋಡಿದ ಮೇಲೆ, ಅದರಲ್ಲಿ ಎಷ್ಟು ಸತ್ಯ ಇದೆ? ಏನೆಲ್ಲ ಮಾತುಕತೆ ಆಗಿದೆ ಎಂಬುದುನ್ನು ನಾನು ಪರಿಶೀಲಿಸಬೇಕು. ನಿರ್ಧಾರವನ್ನು ನನ್ನ ತಿಳುವಳಿಕೆಗೆ ಬಿಡಬೇಕು. ಇವರು ನನಗೆ ನಿಡುವ ದಾಖಲೆಗಳು ಮೇಲೆ ನಾನು ಸುದೀಪ್‌ ಬಳಿ ಮಾತನಾಡಬೇಕಾ? ಬೇಡ್ವಾ ಅಂತ ನಾನು ತೀರ್ಮಾನ ಮಾಡ್ತಿನಿ. ಮೊದಲು ನಾನು ಹೇಳುವುದೇನೆಂದರೆ, ಕುಮಾರ್‌ ಧರಣಿಯನ್ನು ನಿಲ್ಲಿಸಬೇಕು’ ಎಂದು ಅವರು ಹೇಳಿದ್ದಾರೆ.

ನನಗಿಂತಲೂ ಮೊದಲು ಸುದೀಪ್‌ಗೆ ಹೆಚ್ಚು ಆಪ್ತರಾಗಿರುವುದು ಕುಮಾರ್. ಇಬ್ಬರು ಜೊತೆಗೆ ಸಿನಿಮಾಗಳನ್ನು ಮಾಡಿದ್ದಾರೆ. ಇದು ಗಂಡ-ಹೆಂಡತಿ ಜಗಳ ಇದ್ದಂಗೆ. ಇದರಲ್ಲಿ ಮೂರನೇಯವರು ಬಂದಾಗ ಏನಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಬೀದಿಗೆ ಬಂದಿರುವುದರಿಂದ ಏನೂ ಮಾಡೋಕಾಗಲ್ಲ. ಈ ವಿಷಯದಲ್ಲಿ ಎಂಟ್ರಿಯಾಗೋದು ಬೇಡ ಎಂದು ತಪ್ಪಿಸಿಕೊಂಡು ಓಡಾಡುತ್ತಿದ್ದೆ. ಮೊದಲು ಕುಮಾರ್ ಪ್ರತಿಭಟನೆ ನಲ್ಲಿಸಲಿ ಎಂದಿದ್ದಾರೆ.

ಆದರೆ ಇವರೆಲ್ಲ (ನಿರ್ಮಾಪಕರು) ಬಂದಿದ್ದಾರೆ. ನನಗೆ ಇಂಡಸ್ಟ್ರೀ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಇದನ್ನು ಸರಿ ಮಾಡಲು ಸಾಧ್ಯವಾದರೆ, ಅದಕ್ಕಿಂತ ಖುಷಿಯಾದ ವಿಚಾರ ಇನ್ನೊಂದಿಲ್ಲ. ರವಿಚಂದ್ರನ್ ಮನೆಗೆ ಸುದೀಪ್‌ ಕೂಡ ಬರ್ತಾರೆ, ಕುಮಾರ್ ಕೂಡ ಬರ್ತಾರೆ.. ಮೊದಲು ಎಲ್ಲರನ್ನೂ ಕೂಲ್ ಮಾಡೋಣ’ ಎಂದು ರವಿಚಂದ್ರನ್ ಹೇಳಿದ್ದಾರೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

6 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

6 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

6 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

9 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

9 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

9 hours ago