ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಎಂಎನ್ ಕುಮಾರ್ ನಡುವಿನ ಜಟಾಪಟಿ ಮುಂದುವರಿದಿದೆ. ಈ ಪ್ರಕರಣವನ್ನು ಕೋರ್ಟ್ನಲ್ಲಿ ಬಗೆಹರಿಸಿಕೊಳ್ಳಲು ಸುದೀಪ್ ಮುಂದಾಗಿದ್ದಾರೆ. ಇದಕ್ಕೆ ಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ಕುಮಾರ್ ಅವರು ಇಂದು (ಜುಲೈ 19) ರವಿಚಂದ್ರನ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ನಾನು ದಾಖಲೆಗಳನ್ನು ನೋಡಿದ ಮೇಲೆ, ಅದರಲ್ಲಿ ಎಷ್ಟು ಸತ್ಯ ಇದೆ? ಏನೆಲ್ಲ ಮಾತುಕತೆ ಆಗಿದೆ ಎಂಬುದುನ್ನು ನಾನು ಪರಿಶೀಲಿಸಬೇಕು. ನಿರ್ಧಾರವನ್ನು ನನ್ನ ತಿಳುವಳಿಕೆಗೆ ಬಿಡಬೇಕು. ಇವರು ನನಗೆ ನಿಡುವ ದಾಖಲೆಗಳು ಮೇಲೆ ನಾನು ಸುದೀಪ್ ಬಳಿ ಮಾತನಾಡಬೇಕಾ? ಬೇಡ್ವಾ ಅಂತ ನಾನು ತೀರ್ಮಾನ ಮಾಡ್ತಿನಿ. ಮೊದಲು ನಾನು ಹೇಳುವುದೇನೆಂದರೆ, ಕುಮಾರ್ ಧರಣಿಯನ್ನು ನಿಲ್ಲಿಸಬೇಕು’ ಎಂದು ಅವರು ಹೇಳಿದ್ದಾರೆ.
ನನಗಿಂತಲೂ ಮೊದಲು ಸುದೀಪ್ಗೆ ಹೆಚ್ಚು ಆಪ್ತರಾಗಿರುವುದು ಕುಮಾರ್. ಇಬ್ಬರು ಜೊತೆಗೆ ಸಿನಿಮಾಗಳನ್ನು ಮಾಡಿದ್ದಾರೆ. ಇದು ಗಂಡ-ಹೆಂಡತಿ ಜಗಳ ಇದ್ದಂಗೆ. ಇದರಲ್ಲಿ ಮೂರನೇಯವರು ಬಂದಾಗ ಏನಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಬೀದಿಗೆ ಬಂದಿರುವುದರಿಂದ ಏನೂ ಮಾಡೋಕಾಗಲ್ಲ. ಈ ವಿಷಯದಲ್ಲಿ ಎಂಟ್ರಿಯಾಗೋದು ಬೇಡ ಎಂದು ತಪ್ಪಿಸಿಕೊಂಡು ಓಡಾಡುತ್ತಿದ್ದೆ. ಮೊದಲು ಕುಮಾರ್ ಪ್ರತಿಭಟನೆ ನಲ್ಲಿಸಲಿ ಎಂದಿದ್ದಾರೆ.
ಆದರೆ ಇವರೆಲ್ಲ (ನಿರ್ಮಾಪಕರು) ಬಂದಿದ್ದಾರೆ. ನನಗೆ ಇಂಡಸ್ಟ್ರೀ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಇದನ್ನು ಸರಿ ಮಾಡಲು ಸಾಧ್ಯವಾದರೆ, ಅದಕ್ಕಿಂತ ಖುಷಿಯಾದ ವಿಚಾರ ಇನ್ನೊಂದಿಲ್ಲ. ರವಿಚಂದ್ರನ್ ಮನೆಗೆ ಸುದೀಪ್ ಕೂಡ ಬರ್ತಾರೆ, ಕುಮಾರ್ ಕೂಡ ಬರ್ತಾರೆ.. ಮೊದಲು ಎಲ್ಲರನ್ನೂ ಕೂಲ್ ಮಾಡೋಣ’ ಎಂದು ರವಿಚಂದ್ರನ್ ಹೇಳಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…