ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಎಂಎನ್ ಕುಮಾರ್ ನಡುವಿನ ಜಟಾಪಟಿ ಮುಂದುವರಿದಿದೆ. ಈ ಪ್ರಕರಣವನ್ನು ಕೋರ್ಟ್ನಲ್ಲಿ ಬಗೆಹರಿಸಿಕೊಳ್ಳಲು ಸುದೀಪ್ ಮುಂದಾಗಿದ್ದಾರೆ. ಇದಕ್ಕೆ ಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ಕುಮಾರ್ ಅವರು ಇಂದು (ಜುಲೈ 19) ರವಿಚಂದ್ರನ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ನಾನು ದಾಖಲೆಗಳನ್ನು ನೋಡಿದ ಮೇಲೆ, ಅದರಲ್ಲಿ ಎಷ್ಟು ಸತ್ಯ ಇದೆ? ಏನೆಲ್ಲ ಮಾತುಕತೆ ಆಗಿದೆ ಎಂಬುದುನ್ನು ನಾನು ಪರಿಶೀಲಿಸಬೇಕು. ನಿರ್ಧಾರವನ್ನು ನನ್ನ ತಿಳುವಳಿಕೆಗೆ ಬಿಡಬೇಕು. ಇವರು ನನಗೆ ನಿಡುವ ದಾಖಲೆಗಳು ಮೇಲೆ ನಾನು ಸುದೀಪ್ ಬಳಿ ಮಾತನಾಡಬೇಕಾ? ಬೇಡ್ವಾ ಅಂತ ನಾನು ತೀರ್ಮಾನ ಮಾಡ್ತಿನಿ. ಮೊದಲು ನಾನು ಹೇಳುವುದೇನೆಂದರೆ, ಕುಮಾರ್ ಧರಣಿಯನ್ನು ನಿಲ್ಲಿಸಬೇಕು’ ಎಂದು ಅವರು ಹೇಳಿದ್ದಾರೆ.
ನನಗಿಂತಲೂ ಮೊದಲು ಸುದೀಪ್ಗೆ ಹೆಚ್ಚು ಆಪ್ತರಾಗಿರುವುದು ಕುಮಾರ್. ಇಬ್ಬರು ಜೊತೆಗೆ ಸಿನಿಮಾಗಳನ್ನು ಮಾಡಿದ್ದಾರೆ. ಇದು ಗಂಡ-ಹೆಂಡತಿ ಜಗಳ ಇದ್ದಂಗೆ. ಇದರಲ್ಲಿ ಮೂರನೇಯವರು ಬಂದಾಗ ಏನಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಬೀದಿಗೆ ಬಂದಿರುವುದರಿಂದ ಏನೂ ಮಾಡೋಕಾಗಲ್ಲ. ಈ ವಿಷಯದಲ್ಲಿ ಎಂಟ್ರಿಯಾಗೋದು ಬೇಡ ಎಂದು ತಪ್ಪಿಸಿಕೊಂಡು ಓಡಾಡುತ್ತಿದ್ದೆ. ಮೊದಲು ಕುಮಾರ್ ಪ್ರತಿಭಟನೆ ನಲ್ಲಿಸಲಿ ಎಂದಿದ್ದಾರೆ.
ಆದರೆ ಇವರೆಲ್ಲ (ನಿರ್ಮಾಪಕರು) ಬಂದಿದ್ದಾರೆ. ನನಗೆ ಇಂಡಸ್ಟ್ರೀ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಇದನ್ನು ಸರಿ ಮಾಡಲು ಸಾಧ್ಯವಾದರೆ, ಅದಕ್ಕಿಂತ ಖುಷಿಯಾದ ವಿಚಾರ ಇನ್ನೊಂದಿಲ್ಲ. ರವಿಚಂದ್ರನ್ ಮನೆಗೆ ಸುದೀಪ್ ಕೂಡ ಬರ್ತಾರೆ, ಕುಮಾರ್ ಕೂಡ ಬರ್ತಾರೆ.. ಮೊದಲು ಎಲ್ಲರನ್ನೂ ಕೂಲ್ ಮಾಡೋಣ’ ಎಂದು ರವಿಚಂದ್ರನ್ ಹೇಳಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…