ಚಿತ್ರ ಮಂಜರಿ

ನನ್ನ ಮಗನಿಗೆ ಸಮಸ್ಯೆ ಬಂದಿದೆ, ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ: ಸುದೀಪ್ ಬೆಂಬಲಕ್ಕೆ ರವಿಚಂದ್ರನ್

ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಎಂಎನ್ ಕುಮಾರ್ ನಡುವಿನ ಜಟಾಪಟಿ ಮುಂದುವರಿದಿದೆ. ಈ ಪ್ರಕರಣವನ್ನು ಕೋರ್ಟ್​​ನಲ್ಲಿ ಬಗೆಹರಿಸಿಕೊಳ್ಳಲು ಸುದೀಪ್ ಮುಂದಾಗಿದ್ದಾರೆ. ಇದಕ್ಕೆ ಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ಕುಮಾರ್ ಅವರು ಇಂದು (ಜುಲೈ 19) ರವಿಚಂದ್ರನ್​ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ನಟ ‘ಕಿಚ್ಚ’ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂ ಎನ್ ಕುಮಾರ್ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಅತ್ತ ಕುಮಾರ್ ವಿರುದ್ಧ ಸುದೀಪ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿರುವ ನಟ ರವಿಚಂದ್ರನ್, ‘ನನ್ನ ಮಗನ (ಸುದೀಪ್‌) ಮೇಲೆ ಆರೋಪ ಬಂದಿದೆ, ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ. ಮೊದಲು ಎಲ್ಲರೂ ಕೂಲ್ ಆಗಬೇಕು’ ಎಂದು ಹೇಳಿದ್ದಾರೆ.
‘ಪರಿಸ್ಥಿತಿ ಸರಿ ಇಲ್ಲದೇ ಇರುವಾಗ ಮನಸ್ಥಿತಿಯೂ ಸರಿ ಇರಲ್ಲ. ಅವೆರಡನ್ನೂ ಬ್ಯಾಲೆನ್ಸ್ ಮಾಡುವುದೇ ಜೀವನ. ಸದ್ಯ ಎಲ್ಲರೂ ತಣ್ಣಗಾಗಬೇಕು. ನಮಗೆ ಇದರ ಬಗ್ಗೆ ಪೂರ್ತಿ ಸ್ಟೋರಿ ಗೊತ್ತಿರುವುದಿಲ್ಲ. ಆದರೆ ಸುದೀಪ್‌ಗೆ ಬೇಸರವಾಗಿರುವುದು ನಿಜ. ಬರೀ ಇಬ್ಬರ ಮಾತುಗಳನ್ನು ಕೇಳಿಕೊಂಡು ಯಾವ ತೀರ್ಮಾನವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರೂ ನಮ್ಮವರೆ, ನಮ್ಮ ಮನೆಯವರೇ. ಈಗ ನಿರ್ಮಾಪಕರು ನನ್ನ ಬಳಿ ಬಂದಿದ್ದಾರೆ. ಮೊದಲು ಎಲ್ಲರೂ ಕೂಲ್ ಆಗಬೇಕು. ಆಮೇಲೆ ನಾನು ಯೋಚನೆ ಮಾಡಬಹುದು. ನಾನು ಮಾತುಗಳನ್ನು ನಂಬುವುದಿಲ್ಲ. ದಾಖಲೆಗಳು ಬೇಕು’ ಎಂದು ರವಿಚಂದ್ರನ್‌ ಹೇಳಿದ್ದಾರೆ.

ನಾನು ದಾಖಲೆಗಳನ್ನು ನೋಡಿದ ಮೇಲೆ, ಅದರಲ್ಲಿ ಎಷ್ಟು ಸತ್ಯ ಇದೆ? ಏನೆಲ್ಲ ಮಾತುಕತೆ ಆಗಿದೆ ಎಂಬುದುನ್ನು ನಾನು ಪರಿಶೀಲಿಸಬೇಕು. ನಿರ್ಧಾರವನ್ನು ನನ್ನ ತಿಳುವಳಿಕೆಗೆ ಬಿಡಬೇಕು. ಇವರು ನನಗೆ ನಿಡುವ ದಾಖಲೆಗಳು ಮೇಲೆ ನಾನು ಸುದೀಪ್‌ ಬಳಿ ಮಾತನಾಡಬೇಕಾ? ಬೇಡ್ವಾ ಅಂತ ನಾನು ತೀರ್ಮಾನ ಮಾಡ್ತಿನಿ. ಮೊದಲು ನಾನು ಹೇಳುವುದೇನೆಂದರೆ, ಕುಮಾರ್‌ ಧರಣಿಯನ್ನು ನಿಲ್ಲಿಸಬೇಕು’ ಎಂದು ಅವರು ಹೇಳಿದ್ದಾರೆ.

ನನಗಿಂತಲೂ ಮೊದಲು ಸುದೀಪ್‌ಗೆ ಹೆಚ್ಚು ಆಪ್ತರಾಗಿರುವುದು ಕುಮಾರ್. ಇಬ್ಬರು ಜೊತೆಗೆ ಸಿನಿಮಾಗಳನ್ನು ಮಾಡಿದ್ದಾರೆ. ಇದು ಗಂಡ-ಹೆಂಡತಿ ಜಗಳ ಇದ್ದಂಗೆ. ಇದರಲ್ಲಿ ಮೂರನೇಯವರು ಬಂದಾಗ ಏನಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಬೀದಿಗೆ ಬಂದಿರುವುದರಿಂದ ಏನೂ ಮಾಡೋಕಾಗಲ್ಲ. ಈ ವಿಷಯದಲ್ಲಿ ಎಂಟ್ರಿಯಾಗೋದು ಬೇಡ ಎಂದು ತಪ್ಪಿಸಿಕೊಂಡು ಓಡಾಡುತ್ತಿದ್ದೆ. ಮೊದಲು ಕುಮಾರ್ ಪ್ರತಿಭಟನೆ ನಲ್ಲಿಸಲಿ ಎಂದಿದ್ದಾರೆ.

ಆದರೆ ಇವರೆಲ್ಲ (ನಿರ್ಮಾಪಕರು) ಬಂದಿದ್ದಾರೆ. ನನಗೆ ಇಂಡಸ್ಟ್ರೀ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಇದನ್ನು ಸರಿ ಮಾಡಲು ಸಾಧ್ಯವಾದರೆ, ಅದಕ್ಕಿಂತ ಖುಷಿಯಾದ ವಿಚಾರ ಇನ್ನೊಂದಿಲ್ಲ. ರವಿಚಂದ್ರನ್ ಮನೆಗೆ ಸುದೀಪ್‌ ಕೂಡ ಬರ್ತಾರೆ, ಕುಮಾರ್ ಕೂಡ ಬರ್ತಾರೆ.. ಮೊದಲು ಎಲ್ಲರನ್ನೂ ಕೂಲ್ ಮಾಡೋಣ’ ಎಂದು ರವಿಚಂದ್ರನ್ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago