ಚಿತ್ರ ಮಂಜರಿ

ಮೈಸೂರು: ವಾಸುಕಿ ಗಾಯನ ‘ವೈಭವ’

ಮೈಸೂರು: ಅರಮನೆ ಆವರಣದಲ್ಲಿ ಅರಮನೆ ಮಂಡಳಿ ವತಿಯಿಂದ ಆಯೋಜಿಸಿರುವ ಯುಗಾದಿ ಸಂಗೀತೋತ್ಸವದಲ್ಲಿ ಶುಕ್ರವಾರ ಗಾಯಕ ವಾಸುಕಿ ವೈಭವ್ ಅವರು ಸಹೃದಯರನ್ನು ಸಂಗೀತದ ಅಲೆಯಲ್ಲಿ ತೇಲಿಸಿದರು.

ಗಾಯನದ ಮೋಡಿಗೆ ಯುವ ಸಮೂಹ ಹುಚ್ಚೆದ್ದು ಕುಣಿದರೆ, ಹಿರಿಯರು ಮಾಧುರ್ಯ ಗೀತೆಗಳಿಗೆ ಮನಸೋತರು.

ಸಂಗೀತೋತ್ಸವದ ಕಡೇ ದಿನವಾದ ಶುಕ್ರವಾರ ವಾಸುಕಿ ವೈವಿಧ್ಯದ ಗಾನ ಲಹರಿ ಹರಿಸಿದರು. ಮಾತುಗಳಲ್ಲೂ ಮೋಡಿ ಮಾಡಿದ್ದು ವಿಶೇಷ!

‘ಮೈಸೂರು ಎಂದರೆ ಸಾಂಸ್ಕೃತಿಕ ನಗರಿ. ಇಲ್ಲಿ ರಂಗಾಯಣ ಮತ್ತು ನಮ್ಮ ಗುರುಗಳಾದ ಬಿ.ವಿ.ಕಾರಂತರು ನೆನೆಪಾಗುತ್ತಾರೆ’ ಎನ್ನುತ್ತಲೇ ನಾಟಕಕಾರ ಗಿರೀಶ್ ಕಾರ್ನಾಡ್ ಅವರ ‘ಹಯವದನ’ ನಾಟಕದ ಬಿ.ವಿ.ಕಾರಂತ ಸಂಗೀತ ನೀಡಿರುವ ‘ಗಜವದನ ಹೇರಂಭ’ ರಂಗಗೀತೆ ಹಾಡುವ ಮೂಲಕ ಎಲ್ಲರನ್ನು ಸೆಳೆದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ‘ಅರರೇ ಅವಳ ನಗೆಯಾ’… ಎಂದು ಹಾಡಲು ಆರಂಭಿಸುತ್ತಿದ್ದಂತೆ ಯುವ ಸಮೂಹ ಶಿಳ್ಳೆ, ಚಪ್ಪಾಳೆಗಳ ಮಳೆ ಸುರಿಸಿತು. ನಂತರ ಶಂಕರ್ ನಾಗ್ ನಟಿಸಿರುವ ಎಸ್.ಪಿ.ಸಾಂಗ್ಲಿಯಾನ ಚಿತ್ರದ ‘ಗೀತಾಂಜಲಿ’ ಹಾಡಿ ಸಮ್ಮೋಹನಗೊಳಿಸಿದರು.

ಅರಮನೆಯ ಆವರಣದಲ್ಲಿ ತಂಪಾಗಿ ಬೀಸುತ್ತಿದ್ದ ಗಾಳಿಯ ನಡುವೆ ವಾಸುಕಿ ವೈಭವ್ ತಮ್ಮದೇ ಸಂಗೀತ ನಿರ್ದೇಶನ ಬಡವ ರಾಸ್ಕಲ್, ಕರಿಮಾಯಿ ನಾಟಕ, ಇನ್ನೇನೂ ಬೇಕಾಗಿದೆ ಸೇರಿದಂತೆ 10ಕ್ಕೂ ಹೆಚ್ಚು ಗೀತೆಗಳನ್ನು ಹಾಡುವ ಮೂಲಕ ಎಲ್ಲರನ್ನು ಸಂಗೀತ ಲೋಕಕ್ಕೆ ಕರೆದೊಯ್ದರು. ಗಾಯಕರಾದ ದರ್ಶನ್ ನಾರಾಯಣ್, ಭರತ್ ನಾಯಕ್, ಮಾಧುರಿ ಶೇಷಾದ್ರಿ ಸಾಥ್ ನೀಡಿದರು.

ಇದಕ್ಕೂ ಮೊದಲು ಕರ್ನಾಟಕ ಪೊಲೀಸ್‌ ಬ್ಯಾಂಡ್ ತಂಡವೂ ಬ್ಯಾಂಡ್ ಮಾಸ್ಟರ್ ಮಂಜುನಾಥ್ ಅವರ ಸಾರಥ್ಯದಲ್ಲಿ ಸ್ಲಂ ಡಾಗ್ ಮಿಲೇನಿಯರ್ ಚಿತ್ರದ ಜೈ ಹೋ.. ಮೇಡ್‌ ಇನ್‌ ಇಂಡಿಯಾ.. ಮತ್ತು ಶಂಕರ್‌ ನಾಗ್‌ ಚಿತ್ರದ ನೋಡಿ ಸ್ವಾಮಿ ನಾವಿರೋದು ಹೀಗೆ.. ಗೀತೆಗಳನ್ನು ನುಡಿಸಿದರು.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

3 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago