ಮೈಸೂರು: ಅರಮನೆ ಆವರಣದಲ್ಲಿ ಅರಮನೆ ಮಂಡಳಿ ವತಿಯಿಂದ ಆಯೋಜಿಸಿರುವ ಯುಗಾದಿ ಸಂಗೀತೋತ್ಸವದಲ್ಲಿ ಶುಕ್ರವಾರ ಗಾಯಕ ವಾಸುಕಿ ವೈಭವ್ ಅವರು ಸಹೃದಯರನ್ನು ಸಂಗೀತದ ಅಲೆಯಲ್ಲಿ ತೇಲಿಸಿದರು.
ಗಾಯನದ ಮೋಡಿಗೆ ಯುವ ಸಮೂಹ ಹುಚ್ಚೆದ್ದು ಕುಣಿದರೆ, ಹಿರಿಯರು ಮಾಧುರ್ಯ ಗೀತೆಗಳಿಗೆ ಮನಸೋತರು.
ಸಂಗೀತೋತ್ಸವದ ಕಡೇ ದಿನವಾದ ಶುಕ್ರವಾರ ವಾಸುಕಿ ವೈವಿಧ್ಯದ ಗಾನ ಲಹರಿ ಹರಿಸಿದರು. ಮಾತುಗಳಲ್ಲೂ ಮೋಡಿ ಮಾಡಿದ್ದು ವಿಶೇಷ!
‘ಮೈಸೂರು ಎಂದರೆ ಸಾಂಸ್ಕೃತಿಕ ನಗರಿ. ಇಲ್ಲಿ ರಂಗಾಯಣ ಮತ್ತು ನಮ್ಮ ಗುರುಗಳಾದ ಬಿ.ವಿ.ಕಾರಂತರು ನೆನೆಪಾಗುತ್ತಾರೆ’ ಎನ್ನುತ್ತಲೇ ನಾಟಕಕಾರ ಗಿರೀಶ್ ಕಾರ್ನಾಡ್ ಅವರ ‘ಹಯವದನ’ ನಾಟಕದ ಬಿ.ವಿ.ಕಾರಂತ ಸಂಗೀತ ನೀಡಿರುವ ‘ಗಜವದನ ಹೇರಂಭ’ ರಂಗಗೀತೆ ಹಾಡುವ ಮೂಲಕ ಎಲ್ಲರನ್ನು ಸೆಳೆದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ‘ಅರರೇ ಅವಳ ನಗೆಯಾ’… ಎಂದು ಹಾಡಲು ಆರಂಭಿಸುತ್ತಿದ್ದಂತೆ ಯುವ ಸಮೂಹ ಶಿಳ್ಳೆ, ಚಪ್ಪಾಳೆಗಳ ಮಳೆ ಸುರಿಸಿತು. ನಂತರ ಶಂಕರ್ ನಾಗ್ ನಟಿಸಿರುವ ಎಸ್.ಪಿ.ಸಾಂಗ್ಲಿಯಾನ ಚಿತ್ರದ ‘ಗೀತಾಂಜಲಿ’ ಹಾಡಿ ಸಮ್ಮೋಹನಗೊಳಿಸಿದರು.
ಅರಮನೆಯ ಆವರಣದಲ್ಲಿ ತಂಪಾಗಿ ಬೀಸುತ್ತಿದ್ದ ಗಾಳಿಯ ನಡುವೆ ವಾಸುಕಿ ವೈಭವ್ ತಮ್ಮದೇ ಸಂಗೀತ ನಿರ್ದೇಶನ ಬಡವ ರಾಸ್ಕಲ್, ಕರಿಮಾಯಿ ನಾಟಕ, ಇನ್ನೇನೂ ಬೇಕಾಗಿದೆ ಸೇರಿದಂತೆ 10ಕ್ಕೂ ಹೆಚ್ಚು ಗೀತೆಗಳನ್ನು ಹಾಡುವ ಮೂಲಕ ಎಲ್ಲರನ್ನು ಸಂಗೀತ ಲೋಕಕ್ಕೆ ಕರೆದೊಯ್ದರು. ಗಾಯಕರಾದ ದರ್ಶನ್ ನಾರಾಯಣ್, ಭರತ್ ನಾಯಕ್, ಮಾಧುರಿ ಶೇಷಾದ್ರಿ ಸಾಥ್ ನೀಡಿದರು.
ಇದಕ್ಕೂ ಮೊದಲು ಕರ್ನಾಟಕ ಪೊಲೀಸ್ ಬ್ಯಾಂಡ್ ತಂಡವೂ ಬ್ಯಾಂಡ್ ಮಾಸ್ಟರ್ ಮಂಜುನಾಥ್ ಅವರ ಸಾರಥ್ಯದಲ್ಲಿ ಸ್ಲಂ ಡಾಗ್ ಮಿಲೇನಿಯರ್ ಚಿತ್ರದ ಜೈ ಹೋ.. ಮೇಡ್ ಇನ್ ಇಂಡಿಯಾ.. ಮತ್ತು ಶಂಕರ್ ನಾಗ್ ಚಿತ್ರದ ನೋಡಿ ಸ್ವಾಮಿ ನಾವಿರೋದು ಹೀಗೆ.. ಗೀತೆಗಳನ್ನು ನುಡಿಸಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…