ಚಿತ್ರ ಮಂಜರಿ

ಮೈಸೂರು: ವಾಸುಕಿ ಗಾಯನ ‘ವೈಭವ’

ಮೈಸೂರು: ಅರಮನೆ ಆವರಣದಲ್ಲಿ ಅರಮನೆ ಮಂಡಳಿ ವತಿಯಿಂದ ಆಯೋಜಿಸಿರುವ ಯುಗಾದಿ ಸಂಗೀತೋತ್ಸವದಲ್ಲಿ ಶುಕ್ರವಾರ ಗಾಯಕ ವಾಸುಕಿ ವೈಭವ್ ಅವರು ಸಹೃದಯರನ್ನು ಸಂಗೀತದ ಅಲೆಯಲ್ಲಿ ತೇಲಿಸಿದರು.

ಗಾಯನದ ಮೋಡಿಗೆ ಯುವ ಸಮೂಹ ಹುಚ್ಚೆದ್ದು ಕುಣಿದರೆ, ಹಿರಿಯರು ಮಾಧುರ್ಯ ಗೀತೆಗಳಿಗೆ ಮನಸೋತರು.

ಸಂಗೀತೋತ್ಸವದ ಕಡೇ ದಿನವಾದ ಶುಕ್ರವಾರ ವಾಸುಕಿ ವೈವಿಧ್ಯದ ಗಾನ ಲಹರಿ ಹರಿಸಿದರು. ಮಾತುಗಳಲ್ಲೂ ಮೋಡಿ ಮಾಡಿದ್ದು ವಿಶೇಷ!

‘ಮೈಸೂರು ಎಂದರೆ ಸಾಂಸ್ಕೃತಿಕ ನಗರಿ. ಇಲ್ಲಿ ರಂಗಾಯಣ ಮತ್ತು ನಮ್ಮ ಗುರುಗಳಾದ ಬಿ.ವಿ.ಕಾರಂತರು ನೆನೆಪಾಗುತ್ತಾರೆ’ ಎನ್ನುತ್ತಲೇ ನಾಟಕಕಾರ ಗಿರೀಶ್ ಕಾರ್ನಾಡ್ ಅವರ ‘ಹಯವದನ’ ನಾಟಕದ ಬಿ.ವಿ.ಕಾರಂತ ಸಂಗೀತ ನೀಡಿರುವ ‘ಗಜವದನ ಹೇರಂಭ’ ರಂಗಗೀತೆ ಹಾಡುವ ಮೂಲಕ ಎಲ್ಲರನ್ನು ಸೆಳೆದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ‘ಅರರೇ ಅವಳ ನಗೆಯಾ’… ಎಂದು ಹಾಡಲು ಆರಂಭಿಸುತ್ತಿದ್ದಂತೆ ಯುವ ಸಮೂಹ ಶಿಳ್ಳೆ, ಚಪ್ಪಾಳೆಗಳ ಮಳೆ ಸುರಿಸಿತು. ನಂತರ ಶಂಕರ್ ನಾಗ್ ನಟಿಸಿರುವ ಎಸ್.ಪಿ.ಸಾಂಗ್ಲಿಯಾನ ಚಿತ್ರದ ‘ಗೀತಾಂಜಲಿ’ ಹಾಡಿ ಸಮ್ಮೋಹನಗೊಳಿಸಿದರು.

ಅರಮನೆಯ ಆವರಣದಲ್ಲಿ ತಂಪಾಗಿ ಬೀಸುತ್ತಿದ್ದ ಗಾಳಿಯ ನಡುವೆ ವಾಸುಕಿ ವೈಭವ್ ತಮ್ಮದೇ ಸಂಗೀತ ನಿರ್ದೇಶನ ಬಡವ ರಾಸ್ಕಲ್, ಕರಿಮಾಯಿ ನಾಟಕ, ಇನ್ನೇನೂ ಬೇಕಾಗಿದೆ ಸೇರಿದಂತೆ 10ಕ್ಕೂ ಹೆಚ್ಚು ಗೀತೆಗಳನ್ನು ಹಾಡುವ ಮೂಲಕ ಎಲ್ಲರನ್ನು ಸಂಗೀತ ಲೋಕಕ್ಕೆ ಕರೆದೊಯ್ದರು. ಗಾಯಕರಾದ ದರ್ಶನ್ ನಾರಾಯಣ್, ಭರತ್ ನಾಯಕ್, ಮಾಧುರಿ ಶೇಷಾದ್ರಿ ಸಾಥ್ ನೀಡಿದರು.

ಇದಕ್ಕೂ ಮೊದಲು ಕರ್ನಾಟಕ ಪೊಲೀಸ್‌ ಬ್ಯಾಂಡ್ ತಂಡವೂ ಬ್ಯಾಂಡ್ ಮಾಸ್ಟರ್ ಮಂಜುನಾಥ್ ಅವರ ಸಾರಥ್ಯದಲ್ಲಿ ಸ್ಲಂ ಡಾಗ್ ಮಿಲೇನಿಯರ್ ಚಿತ್ರದ ಜೈ ಹೋ.. ಮೇಡ್‌ ಇನ್‌ ಇಂಡಿಯಾ.. ಮತ್ತು ಶಂಕರ್‌ ನಾಗ್‌ ಚಿತ್ರದ ನೋಡಿ ಸ್ವಾಮಿ ನಾವಿರೋದು ಹೀಗೆ.. ಗೀತೆಗಳನ್ನು ನುಡಿಸಿದರು.

andolanait

Recent Posts

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

10 mins ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

39 mins ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

1 hour ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

1 hour ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

2 hours ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

2 hours ago