ಚಿತ್ರ ಮಂಜರಿ

Nandi Awards: ನಂದಿ ಪ್ರಶಸ್ತಿ ಗೆದ್ದ ಕಲಾವಿದರು ಹಾಗೂ ಚಿತ್ರಗಳ ಸಂಪೂರ್ಣ ಪಟ್ಟಿ

ಬೆಂಗಳೂರು: ಕನ್ನಡದ ಅತ್ಯುತ್ತಮ ಚಿತ್ರಗಳನ್ನು ಹಾಗೂ ಕಲಾವಿದರನ್ನು ಗುರುತಿಸಿ ಪ್ರಶಸ್ತಿಗಳನ್ನು ಸೈಮಾ, ಐಫಾ, ಫಿಲ್ಮ್‌ಫೇರ್‌ ಹೆಸರಿನಡಿಯಲ್ಲಿ ನೀಡಲಾಗುತ್ತಿತ್ತು. ಆದರೆ ಕನ್ನಡದವರಿಗೆಂದೇ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಲ್ಲ ಎಂಬ ಕೂಗು, ಕೊರಗು ಈ ಹಿಂದಿನಿಂದಲೂ ಸಹ ಕೇಳಿಬಂದಿತ್ತು.

ಈ ಕೊರಗಿಗೆ ಇದೀಗ ಫುಲ್‌ಸ್ಟಾಪ್‌ ಬಿದ್ದಿದ್ದು ನಂದಿ ಅವಾರ್ಡ್ಸ್‌ ಕಾರ್ಯಕ್ರಮವನ್ನು ಈ ವರ್ಷದಿಂದ ಆರಂಭಿಸಲಾಗಿದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿವಿಧ ಕೆಟಗರಿಗಳ ಅಡಿಯಲ್ಲಿ ಪ್ರಶಸ್ತಿಗಳನ್ನು ನೀಡಿ ಕಲಾವಿದರನ್ನು ಪ್ರಶಂಸಿಸಲಾಗುತ್ತಿದೆ. ಮೊದಲ ನಂದಿ ಅವಾರ್ಡ್ಸ್‌ ಕಾರ್ಯಕ್ರಮ ಡಿಸೆಂಬರ್‌ 6ರಂದು ನಗರದ ಒರಾಯನ್‌ ಮಾಲ್‌ನಲ್ಲಿ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಯಾವ ಯಾವ ಕಲಾವಿದರು ಹಾಗೂ ಚಿತ್ರಗಳಿಗೆ ಯಾವ ಕೆಟಗರಿ ಅಡಿಯಲ್ಲಿ ಪ್ರಶಸ್ತಿ ಲಭಿಸಿತು ಎಂಬ ಮಾಹಿತಿ ಈ ಕೆಳಕಂಡಂತಿದೆ..

1. ಅತ್ಯುತ್ತಮ ಬಯೋಪಿಕ್‌: ವಿಜಯಾನಂದ
2. ಲೆಜೆಂಡರಿ ನಾಯಕಿ : ಲೀಲಾವತಿ
3. ಜೀವಮಾನ ಸಾಧನೆ ಪ್ರಶಸ್ತಿ : ಶ್ರೀನಾಥ್‌ ಹಾಗೂ ಭಾರತಿ ವಿಷ್ಣುವರ್ಧನ್‌
4. ಅತ್ಯುತ್ತಮ ಡಾಕ್ಯುಮೆಂಟರಿ: ಗಂಧದಗುಡಿ
5. ಅತ್ಯುತ್ತಮ ಉದಯೋನ್ಮುಖ ನಟ: ವಿಕ್ರಮ್ ರವಿಚಂದ್ರನ್‌
6. ಅತ್ಯುತ್ತಮ ಉದಯೋನ್ಮುಖ ನಟಿ: ರೀಷ್ಮ ನಾಣಯ್ಯ
7. ಅತ್ಯುತ್ತಮ ಹಾಸ್ಯನಟ: ರಂಗಾಯಣ ರಘು
8. ಅತ್ಯುತ್ತಮ ಹಾಸ್ಯನಟಿ: ಹೇಮಾದತ್‌
9. ಅತ್ಯುತ್ತಮ ಪೋಷಕನಟಿ – ವೀಣಾ ಸುಂದರ್‌
10. ಅತ್ಯುತ್ತಮ ನಟ ( ಕ್ರಿಟಿಕ್ಸ್‌ ) : ಸಂಚಾರಿ ವಿಜಯ್‌
11. ಅತ್ಯುತ್ತಮ ಸಂಭಾಷಣಾಕಾರ: ಮಾಸ್ತಿ
12. ಅತ್ಯುತ್ತಮ ಚಿತ್ರ: ಚಾರ್ಲಿ 777
13. ಅತ್ಯುತ್ತಮ ನಿರ್ದೇಶಕ: ರಿಷಬ್‌ ಶೆಟ್ಟಿ
14. ಅತ್ಯುತ್ತಮ ನಟ: ರಿಷಬ್‌ ಶೆಟ್ಟಿ
15. ಅತ್ಯುತ್ತಮ ನಟಿ: ಸಪ್ತಮಿ ಗೌಡ
16. ಅತ್ಯುತ್ತಮ ಖಳನಟ: ಡಾಲಿ ಧನಂಜಯ್‌
17. ಅತ್ಯುತ್ತಮ ಪೋಷಕನಟ: ಲೂಸ್‌ ಮಾದ ಯೋಗಿ
18. ಅತ್ಯುತ್ತಮ ನಟಿ ( ಕ್ರಿಟಿಕ್ಸ್‌ ) : ಹರಿಪ್ರಿಯಾ, ಅನು ಪ್ರಭಾಕರ್‌
19. ಬೆಸ್ಟ್‌ ಪ್ರೆಸ್‌ ಫೋಟೊಗ್ರಫರ್‌ : ಕೆಎನ್‌ ನಾಗೇಶ್ ಕುಮಾರ್‌
20. ಬೆಸ್ಟ್‌ ಪಿಆರ್‌ : ನಾಗೇಂದ್ರ

andolana

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

54 mins ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

2 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

3 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

9 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

9 hours ago