ಚಿತ್ರ ಮಂಜರಿ

ನಯನ ತಾರಾಗೆ ಸಿಕ್ತು ಮೂರು ಕೋಟಿ ಬೆಲೆ ಬಾಳುವ ಗಿಫ್ಟ್

ಲೇಡಿ ಸೂಪರ್‌ ಸ್ಟಾರ್‌ ನಯನ ತಾರಾ ಅವರು ಇತ್ತೀಚೆಗಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ನಯನತಾರ ಅವರಿಗೆ ಅಭಿಮಾನಿಗಳಿಂದ ಶುಭಾಷಯಗಳ ಮಹಾಪೂರವೇ ಹರಿದು ಬಂದಿತ್ತು.

ನಯನ ತಾರಾ ಅವರ ಹುಟ್ಟುಹಬ್ಬಕ್ಕೆ ಅವರ ಪತಿ ವಿಘ್ನೇಶ್‌ ಶಿವನ್‌ ಅವರು ಬರೋಬ್ಬರಿ ಮೂರು ಕೋಟಿ ರೂ. ಬೆಲೆಬಾಳುವ ಐಶಾರಾಮಿ ಮರ್ಸಿಡಿಸ್‌ ಮೇಬ್ಯಾಕ್‌ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ಈ ವಿಷಯವನ್ನು ತಡವಾಗಿ ಹಂಚಿಕೊಂಡಿರುವ ನಯನತಾರ ಅವರು ಕಾರಿನ ಲೋಗೋದ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿದ್ದು, ಮನೆಗೆ ಸ್ವಾಗತ ಬ್ಯೂಟಿ. ಸ್ವೀಟೆಸ್ಟ್‌ ಗಿಫ್ಟ್‌ ನೀಡಿದ ಪತಿಗೆ ಧನ್ಯವಾದ. ಲವ್‌ ಯೂ ಎಂದು ಬರೆದುಕೊಂಡಿದ್ದಾರೆ.

ಮರ್ಸೀಡಿಸ್‌ ಕಾರಿನ ಆರಂಭಿಕ ಬೆಲೆ 2.69 ಕೋಟಿ ರೂ. ಇದ್ದು, ಸಾಕಷ್ಟು ಐಶಾರಾಮಿ ಫೀಚರ್‌ ಹೊಂದಿರುವ ಈ ಕಾರಿನ ಬೆಲೆ 3.40 ಕೋಟಿ ವರೆಗೂ ಇದೆ. ಇದೀಗ ಈ ದುಬಾರಿ ಕಾರು ನಯನತಾರ ಅವರಿಗೆ ಉಡುಗೊರೆಯಾಗಿ ಸಿಕ್ಕಿದೆ.

ಇತ್ತೀಚೆಗೆ ನಯನತಾರ ಅವರು ಹಂಚಿಕೊಂಡಿದ್ದ ಫೋಟೊವೊಂದು ಸಿನಿರಂಗದಲ್ಲಿ ಹಲ್‌ ಚಲ್‌ ಎಬ್ಬಿಸಿತ್ತು. ಲೇಡಿ ಸೂಪರ್‌ ಸ್ಟಾರ್‌ ನಟನೆ ಬಿಟ್ಟು ಡೈರೆಕ್ಷನ್‌ ಗೆ ಇಳಿತಾರಾ ಅನ್ನೋ ಅನುಮಾನ ಸೃಷ್ಟಿಸಿತ್ತು.

ನಯನತಾರ ಅವರು ಸೊಶಿಯಲ್‌ ಮೀಡಿಯಾದಲ್ಲಿ ಹಾಕಿದ್ದ ಫೋಟೊದಿಂದ ನಯನ ತಾರಾ ನಿರ್ದೇಶನದತ್ತ ಮುಖ ಮಾಡಲಿದ್ದಾರೆ ಎನ್ನುವ ಮಾತು ಜೋರಾಗಿತ್ತು. ಆ ಫೋಟೋದಲ್ಲಿ ನಯನ ತಾರಾ ಅವರು ಕ್ಯಾಮೆರಾ ಹಿಂದೆ ನಿಂತಿದ್ದರು. ನಟಿ ಹಂಚಿಕೊಂಡಿದ್ದ ಆ ಒಂದು ಫೋಟೊದಿಂದ ಅಭಿಮಾನಿಗಳಲ್ಲಿ ಹಲವಾರು ಪ್ರಶ್ನೆಗಳು ಮೂಡಿದ್ದವು.

ನಯನ ತಾರ ಅವರು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ. ತ್ರಿಶಾ, ಅನುಷ್ಕಾ ಶೆಟ್ಟಿ, ಸಮಂತಾ ಸೇರಿದಂತೆ ಇನ್ನೂ ಹಲವು ಜನ ಪ್ರಿಯ ನಟಿಯರಿಗೂ ಕೂಡ ನಯನ ತಾರ ಅವರು ಪಡೆಯುವ ಸಂಭಾವನೆಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.

lokesh

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

3 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

4 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

4 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

5 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

6 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

6 hours ago