ಚಿತ್ರ ಮಂಜರಿ

ನಯನ ತಾರಾಗೆ ಸಿಕ್ತು ಮೂರು ಕೋಟಿ ಬೆಲೆ ಬಾಳುವ ಗಿಫ್ಟ್

ಲೇಡಿ ಸೂಪರ್‌ ಸ್ಟಾರ್‌ ನಯನ ತಾರಾ ಅವರು ಇತ್ತೀಚೆಗಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ನಯನತಾರ ಅವರಿಗೆ ಅಭಿಮಾನಿಗಳಿಂದ ಶುಭಾಷಯಗಳ ಮಹಾಪೂರವೇ ಹರಿದು ಬಂದಿತ್ತು.

ನಯನ ತಾರಾ ಅವರ ಹುಟ್ಟುಹಬ್ಬಕ್ಕೆ ಅವರ ಪತಿ ವಿಘ್ನೇಶ್‌ ಶಿವನ್‌ ಅವರು ಬರೋಬ್ಬರಿ ಮೂರು ಕೋಟಿ ರೂ. ಬೆಲೆಬಾಳುವ ಐಶಾರಾಮಿ ಮರ್ಸಿಡಿಸ್‌ ಮೇಬ್ಯಾಕ್‌ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ಈ ವಿಷಯವನ್ನು ತಡವಾಗಿ ಹಂಚಿಕೊಂಡಿರುವ ನಯನತಾರ ಅವರು ಕಾರಿನ ಲೋಗೋದ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿದ್ದು, ಮನೆಗೆ ಸ್ವಾಗತ ಬ್ಯೂಟಿ. ಸ್ವೀಟೆಸ್ಟ್‌ ಗಿಫ್ಟ್‌ ನೀಡಿದ ಪತಿಗೆ ಧನ್ಯವಾದ. ಲವ್‌ ಯೂ ಎಂದು ಬರೆದುಕೊಂಡಿದ್ದಾರೆ.

ಮರ್ಸೀಡಿಸ್‌ ಕಾರಿನ ಆರಂಭಿಕ ಬೆಲೆ 2.69 ಕೋಟಿ ರೂ. ಇದ್ದು, ಸಾಕಷ್ಟು ಐಶಾರಾಮಿ ಫೀಚರ್‌ ಹೊಂದಿರುವ ಈ ಕಾರಿನ ಬೆಲೆ 3.40 ಕೋಟಿ ವರೆಗೂ ಇದೆ. ಇದೀಗ ಈ ದುಬಾರಿ ಕಾರು ನಯನತಾರ ಅವರಿಗೆ ಉಡುಗೊರೆಯಾಗಿ ಸಿಕ್ಕಿದೆ.

ಇತ್ತೀಚೆಗೆ ನಯನತಾರ ಅವರು ಹಂಚಿಕೊಂಡಿದ್ದ ಫೋಟೊವೊಂದು ಸಿನಿರಂಗದಲ್ಲಿ ಹಲ್‌ ಚಲ್‌ ಎಬ್ಬಿಸಿತ್ತು. ಲೇಡಿ ಸೂಪರ್‌ ಸ್ಟಾರ್‌ ನಟನೆ ಬಿಟ್ಟು ಡೈರೆಕ್ಷನ್‌ ಗೆ ಇಳಿತಾರಾ ಅನ್ನೋ ಅನುಮಾನ ಸೃಷ್ಟಿಸಿತ್ತು.

ನಯನತಾರ ಅವರು ಸೊಶಿಯಲ್‌ ಮೀಡಿಯಾದಲ್ಲಿ ಹಾಕಿದ್ದ ಫೋಟೊದಿಂದ ನಯನ ತಾರಾ ನಿರ್ದೇಶನದತ್ತ ಮುಖ ಮಾಡಲಿದ್ದಾರೆ ಎನ್ನುವ ಮಾತು ಜೋರಾಗಿತ್ತು. ಆ ಫೋಟೋದಲ್ಲಿ ನಯನ ತಾರಾ ಅವರು ಕ್ಯಾಮೆರಾ ಹಿಂದೆ ನಿಂತಿದ್ದರು. ನಟಿ ಹಂಚಿಕೊಂಡಿದ್ದ ಆ ಒಂದು ಫೋಟೊದಿಂದ ಅಭಿಮಾನಿಗಳಲ್ಲಿ ಹಲವಾರು ಪ್ರಶ್ನೆಗಳು ಮೂಡಿದ್ದವು.

ನಯನ ತಾರ ಅವರು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ. ತ್ರಿಶಾ, ಅನುಷ್ಕಾ ಶೆಟ್ಟಿ, ಸಮಂತಾ ಸೇರಿದಂತೆ ಇನ್ನೂ ಹಲವು ಜನ ಪ್ರಿಯ ನಟಿಯರಿಗೂ ಕೂಡ ನಯನ ತಾರ ಅವರು ಪಡೆಯುವ ಸಂಭಾವನೆಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.

lokesh

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

5 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

8 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

8 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

10 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

11 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

12 hours ago