ಚಿತ್ರ ಮಂಜರಿ

ನಯನ ತಾರಾಗೆ ಸಿಕ್ತು ಮೂರು ಕೋಟಿ ಬೆಲೆ ಬಾಳುವ ಗಿಫ್ಟ್

ಲೇಡಿ ಸೂಪರ್‌ ಸ್ಟಾರ್‌ ನಯನ ತಾರಾ ಅವರು ಇತ್ತೀಚೆಗಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ನಯನತಾರ ಅವರಿಗೆ ಅಭಿಮಾನಿಗಳಿಂದ ಶುಭಾಷಯಗಳ ಮಹಾಪೂರವೇ ಹರಿದು ಬಂದಿತ್ತು.

ನಯನ ತಾರಾ ಅವರ ಹುಟ್ಟುಹಬ್ಬಕ್ಕೆ ಅವರ ಪತಿ ವಿಘ್ನೇಶ್‌ ಶಿವನ್‌ ಅವರು ಬರೋಬ್ಬರಿ ಮೂರು ಕೋಟಿ ರೂ. ಬೆಲೆಬಾಳುವ ಐಶಾರಾಮಿ ಮರ್ಸಿಡಿಸ್‌ ಮೇಬ್ಯಾಕ್‌ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ಈ ವಿಷಯವನ್ನು ತಡವಾಗಿ ಹಂಚಿಕೊಂಡಿರುವ ನಯನತಾರ ಅವರು ಕಾರಿನ ಲೋಗೋದ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿದ್ದು, ಮನೆಗೆ ಸ್ವಾಗತ ಬ್ಯೂಟಿ. ಸ್ವೀಟೆಸ್ಟ್‌ ಗಿಫ್ಟ್‌ ನೀಡಿದ ಪತಿಗೆ ಧನ್ಯವಾದ. ಲವ್‌ ಯೂ ಎಂದು ಬರೆದುಕೊಂಡಿದ್ದಾರೆ.

ಮರ್ಸೀಡಿಸ್‌ ಕಾರಿನ ಆರಂಭಿಕ ಬೆಲೆ 2.69 ಕೋಟಿ ರೂ. ಇದ್ದು, ಸಾಕಷ್ಟು ಐಶಾರಾಮಿ ಫೀಚರ್‌ ಹೊಂದಿರುವ ಈ ಕಾರಿನ ಬೆಲೆ 3.40 ಕೋಟಿ ವರೆಗೂ ಇದೆ. ಇದೀಗ ಈ ದುಬಾರಿ ಕಾರು ನಯನತಾರ ಅವರಿಗೆ ಉಡುಗೊರೆಯಾಗಿ ಸಿಕ್ಕಿದೆ.

ಇತ್ತೀಚೆಗೆ ನಯನತಾರ ಅವರು ಹಂಚಿಕೊಂಡಿದ್ದ ಫೋಟೊವೊಂದು ಸಿನಿರಂಗದಲ್ಲಿ ಹಲ್‌ ಚಲ್‌ ಎಬ್ಬಿಸಿತ್ತು. ಲೇಡಿ ಸೂಪರ್‌ ಸ್ಟಾರ್‌ ನಟನೆ ಬಿಟ್ಟು ಡೈರೆಕ್ಷನ್‌ ಗೆ ಇಳಿತಾರಾ ಅನ್ನೋ ಅನುಮಾನ ಸೃಷ್ಟಿಸಿತ್ತು.

ನಯನತಾರ ಅವರು ಸೊಶಿಯಲ್‌ ಮೀಡಿಯಾದಲ್ಲಿ ಹಾಕಿದ್ದ ಫೋಟೊದಿಂದ ನಯನ ತಾರಾ ನಿರ್ದೇಶನದತ್ತ ಮುಖ ಮಾಡಲಿದ್ದಾರೆ ಎನ್ನುವ ಮಾತು ಜೋರಾಗಿತ್ತು. ಆ ಫೋಟೋದಲ್ಲಿ ನಯನ ತಾರಾ ಅವರು ಕ್ಯಾಮೆರಾ ಹಿಂದೆ ನಿಂತಿದ್ದರು. ನಟಿ ಹಂಚಿಕೊಂಡಿದ್ದ ಆ ಒಂದು ಫೋಟೊದಿಂದ ಅಭಿಮಾನಿಗಳಲ್ಲಿ ಹಲವಾರು ಪ್ರಶ್ನೆಗಳು ಮೂಡಿದ್ದವು.

ನಯನ ತಾರ ಅವರು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ. ತ್ರಿಶಾ, ಅನುಷ್ಕಾ ಶೆಟ್ಟಿ, ಸಮಂತಾ ಸೇರಿದಂತೆ ಇನ್ನೂ ಹಲವು ಜನ ಪ್ರಿಯ ನಟಿಯರಿಗೂ ಕೂಡ ನಯನ ತಾರ ಅವರು ಪಡೆಯುವ ಸಂಭಾವನೆಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.

lokesh

Recent Posts

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

21 mins ago

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

3 hours ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

3 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

4 hours ago

ಮೈಸೂರು ದಸರಾ ಗಜಪಡೆ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಶ್ರೀಕಂಠನಿಗೆ ಮೊದಲ ಸ್ಥಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…

5 hours ago

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

8 hours ago