ಚಿತ್ರ ಮಂಜರಿ

6 ವರ್ಷದ ಹಿಂದೆಯೇ ಮದುವೆ ರಿಜಿಸ್ಟರ್‌ ಆಗಿತ್ತು ಎಂದು ವಿವಾದಕ್ಕೆ ತೆರೆ ಎಳೆದ ನಯನತಾರ

ಸೌತ್ ಸ್ಟಾರ್ ದಂಪತಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಇತ್ತೀಚಿಗಷ್ಟೆ ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳಿಗೆ ತಂದೆ-ತಾಯಿಯಾಗಿದ್ದಾರೆ. ಮನೆಗೆ ಮುದ್ದಾದ ಮಕ್ಕಳು ಆಗಮಿಸಿದ ಸಂತಸವನ್ನು ನಯನತಾರಾ ಮತ್ತು ವಿಘ್ನೇಶ್ ಇಬ್ಬರೂ ಬಹಿರಂಗ ಪಡಿಸುತ್ತಿದ್ದಂತೆ ವಿವಾದ ಸುತ್ತಿಕೊಂಡಿತ್ತು. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದು ನಿಯಮಗಳ ಪ್ರಕಾರವೇ ಇದಿಯಾ ಎಂದು ತಮಿಳುನಾಡು ಸರ್ಕಾರ ತನಿಖೆಗೆ ಆದೇಶಿಸಿತ್ತು. ಈ ಬಗ್ಗೆ ನಯನತಾರಾ ಪ್ರತಿಕ್ರಿಯೆ ನೀಡಿದ್ದಾರೆ. ಬಾಡಿಗೆ ತಾಯಿ ತನ್ನ ಸಂಬಂಧಿ, ನಾವು 6 ವರ್ಷಗಳ ಹಿಂದೆಯೇ ಮದುವೆ ನೋಂದಣಿ ಮಾಡಿಸಿದ್ವಿ ಎಂದು ಸ್ಪಷ್ಟನೆ ನೀಡಿದ್ದಾರೆ.

ತಮಿಳುನಾಡು ಆರೋಗ್ಯ ಇಲಾಖೆಗೆ ನೀಡಿದ ಅಫಿಡವಿಟ್‌ನಲ್ಲಿ ನಯನತಾರಾ ದಂಪತಿ ಜೂನ್ ತಿಂಗಳಲ್ಲಿ ಅದ್ದೂರಿಯಾಗಿ ಮದುವೆಯಾದೆವು ಆದರೆ 6 ವರ್ಷಗಳ ಹಿಂದೆಯೇ ರಿಜಿಸ್ಟರ್ ಆಗಿದ್ದೆವು ಎಂದು ಮದುವೆ ನೋಂದಣಿ ಸರ್ಕಿಫಿಕೇಟ್ ಅನ್ನು ಅಫಿಡವಿಟ್ ಜೊತೆಯೇ ನೀಡಿದ್ದಾರೆ. ಸ್ಟಾರ್ ಜೋಡಿ ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ, ಕಳೆದ ವರ್ಷ ಡಿಸೆಂಬರ್‌ನಲ್ಲೇ ಬಾಡಿಗೆ ತಾಯ್ತನದ ಅಗ್ರಿಮೆಂಟ್‌ಗೆ ಸಹಿ ಮಾಡಿದ್ದೆವು ಎಂದು ಹೇಳಿದ್ದಾರೆ. ಬಾಡಿಗೆ ತಾಯಿ ನಯನತಾರಾ ಅವರ ಸಂಬಂಧಿ ಆಗಿದ್ದು ದುಬೈನಲ್ಲಿ ನೆಲೆಸಿದ್ದಾರೆ. ಅವಳಿ ಮಕ್ಕಳು ಚೆನ್ನೈ ಆಸ್ಪತ್ರೆಯಲ್ಲಿ ಜನಿಸಿದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಬಾಡಿಗೆ ತಾಯ್ತನದ ನಿಯಮ

ಕಳೆದ ವರ್ಷ ಡಿಸೆಂಬರ್ ನಲ್ಲಿ ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಬಾಡಿಗೆ ತಾಯಿ ಆರೋಗ್ಯವಾಗಿರಬೇಕು, ವಯಸ್ಸು 21-35ರ ಅಂತರದಲ್ಲಿ ಇರಬೇಕು. ದಂಪತಿಗೆ ಹತ್ತರದ ಸಂಬಂಧಿ ಆಗಿರಬೇಕು. ಒಂದೇ ಸಲ ಬಾಡಿಗೆ ತಾಯಿ ಆಗಲು ಸಾಧ್ಯ ಹಾಗೂ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ.

ನಯನತಾರಾ ಮತ್ತು ವಿಘ್ನೇಶ್ ಶಿವನ್ ಈ ನಿಯಮವನ್ನು ಪಾಲಿಸಿಲ್ಲ ಎನ್ನುವ ಆರೋಪ ಕೇಳಿಬಂದಿತ್ತು. ಇದೀಗ ದಂಪತಿ ದಾಖಲೆ ಸಮೇತ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.

 

andolana

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

5 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

6 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

7 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

12 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

12 hours ago