ಚಿತ್ರ ಮಂಜರಿ

ನನಗೆ ಯಶ್‌ ಪುಶ್‌ ಗೊತ್ತಿಲ್ಲ; ರಾಕಿಂಗ್‌ ಸ್ಟಾರ್‌ ಬಗ್ಗೆ ಹೀಗಂದಿದ್ಯಾಕೆ ಅಶೋಕ್‌ ರೈ?

ಸದ್ಯ ಬೆಂಗಳೂರಿನಲ್ಲಿ ಕರಾವಳಿ ಭಾಗದ ಕ್ರೀಡಾ ಆಚರಣೆಯಾದ ಕಂಬಳವನ್ನು ಆಯೋಜಿಸಲಾಗಿದೆ. ಇದೇ ಮೊದಲ ಬಾರಿಗೆ ಉದ್ಯಾನನಗರಿಯಲ್ಲಿ ಕಂಬಳ ನಡೆಯುತ್ತಿದ್ದು ಇತಿಹಾಸ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವ ಜವಾಬ್ದಾರಿಯನ್ನು ಪುತ್ತೂರು ಶಾಸಕ ಅಶೋಕ್‌ ರೈ ಹೊತ್ತುಕೊಂಡಿದ್ದಾರೆ.

ಇನ್ನು ಕಂಬಳಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಚಾಲನೆ ನೀಡಿದ್ದು ಹಲವಾರು ತಾರೆಯರಿಗೆ ಕಂಬಳಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅಶೋಕ್‌ ರೈ ಬೆಂಗಳೂರು ಕಂಬಳಕ್ಕೆ ಯಾವೆಲ್ಲಾ ತಾರೆಯರು ಬರಲಿದ್ದಾರೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದರು.

ತುಳುವಿನಲ್ಲಿಯೇ ಹೇಳಿಕೆ ನೀಡಿದ್ದ ಅಶೋಕ್‌ ರೈ “ಅನುಷ್ಕಾ ಶೆಟ್ಟಿ ಬರ್ತಾರೆ. ಐಶ್ವರ್ಯಾ ರೈ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ. ನಮ್ಮ ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ, ಕೆ ಎಲ್ ರಾಹುಲ್ ಮತ್ತೆ ದೀಪಿಕಾ ಪಡುಕೋಣೆ ಬರುತ್ತಾರೆ. ಆ ಮೇಲೆ ರಜನಿಕಾಂತ್ ಕೂಡ ಬರುವ ಸಾಧ್ಯತೆ ಇದೆ. ಹಾಗೇ ಕನ್ನಡದಿಂದ ಯಶ್.. ನನಗೆ ಕೇವಲ ಹೆಸರಷ್ಟೇ ಗೊತ್ತು. ಯಶ್ ಪುಶ್ ಬಗ್ಗೆ ಗೊತ್ತಿಲ್ಲ” ಎಂದು ಹೇಳಿಕೆ ನೀಡಿದ್ದಾರೆ. ಇಷ್ಟಕ್ಕೆ ವಿಡಿಯೊ ಕಟ್‌ ಆಗಿದ್ದು ಇದು ಯಶ್‌ ಅಭಿಮಾನಿಗಳನ್ನು ಕೆರಳಿಸಿದೆ. ರೊಚ್ಚಿಗೆದ್ದ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಶೋಕ್‌ ರೈ ವಿರುದ್ಧ ಕಾಮೆಂಟ್‌ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಇನ್ನು ಯಶ್‌ ಗೊತ್ತಿಲ್ಲ ಎಂಬ ಹೇಳಿಕೆ ಇತ್ತೀಚೆಗೆ ಹೆಚ್ಚಾಗಿಬಿಟ್ಟಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ತೆಲುಗು ನಟ ಅಲ್ಲು ಅರ್ಜುನ್‌ ತಂದೆ ಅಲ್ಲು ಅರವಿಂದ್‌ ಕೆಜಿಎಫ್‌ ಬರುವ ಮುಂಚೆ ಯಶ್‌ ದೊಡ್ಡ ನಟನಲ್ಲ, ಯಶ್‌ ಯಾರೆಂದು ಗೊತ್ತಿರಲಿಲ್ಲ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು. ಇದಕ್ಕೂ ಮುನ್ನ ತೆಲುಗು ನಟ ರವಿತೇಜಾ ಸಹ ಇಂತಹದ್ದೇ ಹೇಳಿಕೆಯನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗೀಡಾಗಿದ್ದರು.

andolana

Recent Posts

ಆಂದೋಲನದ ವರದಿ ಬಳಿಕ ಎಚ್ಚೆತ್ತ ಜನಪ್ರತಿನಿಧಿಗಳು: ರಸ್ತೆ ಕಾಮಗಾರಿಗೆ ಶಾಸಕ ಜಿಟಿಡಿ ಗುದ್ದಲಿ ಪೂಜೆ

ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ…

2 mins ago

ರಸ್ತೆ ದಾಟುವಾಗ ಕಾರು ಡಿಕ್ಕಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ…

19 mins ago

ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ…

29 mins ago

ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ…

44 mins ago

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

1 hour ago

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…

2 hours ago