ಚಿತ್ರ ಮಂಜರಿ

ನನಗೆ ಯಶ್‌ ಪುಶ್‌ ಗೊತ್ತಿಲ್ಲ; ರಾಕಿಂಗ್‌ ಸ್ಟಾರ್‌ ಬಗ್ಗೆ ಹೀಗಂದಿದ್ಯಾಕೆ ಅಶೋಕ್‌ ರೈ?

ಸದ್ಯ ಬೆಂಗಳೂರಿನಲ್ಲಿ ಕರಾವಳಿ ಭಾಗದ ಕ್ರೀಡಾ ಆಚರಣೆಯಾದ ಕಂಬಳವನ್ನು ಆಯೋಜಿಸಲಾಗಿದೆ. ಇದೇ ಮೊದಲ ಬಾರಿಗೆ ಉದ್ಯಾನನಗರಿಯಲ್ಲಿ ಕಂಬಳ ನಡೆಯುತ್ತಿದ್ದು ಇತಿಹಾಸ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವ ಜವಾಬ್ದಾರಿಯನ್ನು ಪುತ್ತೂರು ಶಾಸಕ ಅಶೋಕ್‌ ರೈ ಹೊತ್ತುಕೊಂಡಿದ್ದಾರೆ.

ಇನ್ನು ಕಂಬಳಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಚಾಲನೆ ನೀಡಿದ್ದು ಹಲವಾರು ತಾರೆಯರಿಗೆ ಕಂಬಳಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅಶೋಕ್‌ ರೈ ಬೆಂಗಳೂರು ಕಂಬಳಕ್ಕೆ ಯಾವೆಲ್ಲಾ ತಾರೆಯರು ಬರಲಿದ್ದಾರೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದರು.

ತುಳುವಿನಲ್ಲಿಯೇ ಹೇಳಿಕೆ ನೀಡಿದ್ದ ಅಶೋಕ್‌ ರೈ “ಅನುಷ್ಕಾ ಶೆಟ್ಟಿ ಬರ್ತಾರೆ. ಐಶ್ವರ್ಯಾ ರೈ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ. ನಮ್ಮ ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ, ಕೆ ಎಲ್ ರಾಹುಲ್ ಮತ್ತೆ ದೀಪಿಕಾ ಪಡುಕೋಣೆ ಬರುತ್ತಾರೆ. ಆ ಮೇಲೆ ರಜನಿಕಾಂತ್ ಕೂಡ ಬರುವ ಸಾಧ್ಯತೆ ಇದೆ. ಹಾಗೇ ಕನ್ನಡದಿಂದ ಯಶ್.. ನನಗೆ ಕೇವಲ ಹೆಸರಷ್ಟೇ ಗೊತ್ತು. ಯಶ್ ಪುಶ್ ಬಗ್ಗೆ ಗೊತ್ತಿಲ್ಲ” ಎಂದು ಹೇಳಿಕೆ ನೀಡಿದ್ದಾರೆ. ಇಷ್ಟಕ್ಕೆ ವಿಡಿಯೊ ಕಟ್‌ ಆಗಿದ್ದು ಇದು ಯಶ್‌ ಅಭಿಮಾನಿಗಳನ್ನು ಕೆರಳಿಸಿದೆ. ರೊಚ್ಚಿಗೆದ್ದ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಶೋಕ್‌ ರೈ ವಿರುದ್ಧ ಕಾಮೆಂಟ್‌ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಇನ್ನು ಯಶ್‌ ಗೊತ್ತಿಲ್ಲ ಎಂಬ ಹೇಳಿಕೆ ಇತ್ತೀಚೆಗೆ ಹೆಚ್ಚಾಗಿಬಿಟ್ಟಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ತೆಲುಗು ನಟ ಅಲ್ಲು ಅರ್ಜುನ್‌ ತಂದೆ ಅಲ್ಲು ಅರವಿಂದ್‌ ಕೆಜಿಎಫ್‌ ಬರುವ ಮುಂಚೆ ಯಶ್‌ ದೊಡ್ಡ ನಟನಲ್ಲ, ಯಶ್‌ ಯಾರೆಂದು ಗೊತ್ತಿರಲಿಲ್ಲ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು. ಇದಕ್ಕೂ ಮುನ್ನ ತೆಲುಗು ನಟ ರವಿತೇಜಾ ಸಹ ಇಂತಹದ್ದೇ ಹೇಳಿಕೆಯನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗೀಡಾಗಿದ್ದರು.

andolana

Recent Posts

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

11 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

11 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

12 hours ago