ಬಾಲಿವುಡ್ನ ಜನಪ್ರಿಯ ನಟ ಶಾರುಖ್ ಖಾನ್ ಅಭಿನಯಿಸುತ್ತಿರುವ ಹೊಸ ಸಿನಿಮಾ ಜವಾನ್ ಬಗ್ಗೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ದಿನದಿಂದ ದಿನಕ್ಕೆ ಈ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಇಂದು (ಜುಲೈ 24) ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಜವಾನ್ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿರುವುದು ವಿಜಯ್ ಸೇತುಪತಿ. ಅವರ ಗೆಟಪ್ ಹೇಗಿರಲಿದೆ ಎಂಬುದು ಈ ಫೋಸ್ಟರ್ನಲ್ಲಿ ಗೊತ್ತಾಗಿದೆ. ವಿಜಯ್ ಸೇತುಪತಿ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್ ವೈರಲ್ ಆಗಿದೆ.
‘ಜವಾನ್’ ಸಿನಿಮಾದಲ್ಲಿನ ವಿಜಯ್ ಸೇತುಪತಿ ಅವರ ಫಸ್ಟ್ ಲುಕ್ ಪೋಸ್ಟರ್ ಅನ್ನು ಶಾರುಖ್ ಖಾನ್ ಅವರು ಬಿಡುಗಡೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಈ ಪೋಸ್ಟರ್ ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್ನಲ್ಲಿ ‘ಸಾವಿನ ವ್ಯಾಪಾರಿ’ ಎಂಬ ಟ್ಯಾಗ್ಲೈನ್ ಗಮನ ಸೆಳೆಯುತ್ತಿದೆ. ಆ ಮೂಲಕ ವಿಜಯ್ ಸೇತುಪತಿ ಪಾತ್ರ ಎಷ್ಟು ಭಯಂಕರವಾಗಿರಲಿದೆ ಎಂಬುದರ ಸುಳಿವು ನೀಡಲಾಗಿದೆ.
ಇದೇ ಮೊದಲ ಬಾರಿಗೆ ವಿಜಯ್ ಸೇತುಪತಿ ಮತ್ತು ಶಾರುಖ್ ಖಾನ್ ಅವರು ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇಬ್ಬರ ಮುಖಾಮುಖಿ ದೃಶ್ಯಗಳನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಇತ್ತೀಚೆಗಷ್ಟೇ ‘ಜವಾನ್’ ಸಿನಿಮಾದ ಪ್ರಿವ್ಯೂ ಬಿಡುಗಡೆ ಆಗಿತ್ತು. ಅದರಲ್ಲೂ ವಿಜಯ್ ಸೇತುಪತಿ ಅವರ ಪಾತ್ರದ ಝಲಕ್ ಕಾಣಿಸಿತ್ತು. ಈಗ ಪೋಸ್ಟರ್ ಮೂಲಕ ಇನ್ನಷ್ಟು ಕೌತುಕ ಹೆಚ್ಚಿಸುವ ಕೆಲಸ ಮಾಡಲಾಗಿದೆ. ಸೌತ್ ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿ ಸೈ ಎನಿಸಿಕೊಂಡಿರುವ ವಿಜಯ್ ಸೇತುಪತಿ ಅವರು ಶಾರುಖ್ ಖಾನ್ ಎದುರು ಹೇಗೆ ಅಬ್ಬರಿಸಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಿದೆ.
‘ಜವಾನ್’ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳಲು ಅನೇಕ ಕಾರಣಗಳಿವೆ. ಪ್ರಿವ್ಯೂ ವಿಡಿಯೋದಲ್ಲಿ ಶಾರುಖ್ ಖಾನ್ ಅವರ ಬೋಳು ತಲೆ ಗೆಟಪ್ ಗಮನ ಸೆಳೆದಿದೆ. ಹಾಗೆಯೇ ನಯನತಾರಾ ಅವರು ಆ್ಯಕ್ಷನ್ ಅವತಾರದಲ್ಲಿ ಬರುತ್ತಿದ್ದಾರೆ. ಈಗ ವಿಜಯ್ ಸೇತುಪತಿ ಅವರನ್ನು ‘ಸಾವಿನ ವ್ಯಾಪಾರಿ’ ಎಂದು ಕರೆಯುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಲಾಗಿದೆ.
ಅಟ್ಲಿ ನಿರ್ದೇಶನ ಮಾಡಿರುವ ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಶಾರುಖ್ ಖಾನ್ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್’ ಬ್ಯಾನರ್ ಮೂಲಕ ಗೌರಿ ಖಾನ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಗೌರವ ವರ್ಮಾ ಅವರು ಸಹ-ನಿರ್ಮಾಪಕನಾಗಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…