ಚಿತ್ರ ಮಂಜರಿ

‘ಜವಾನ್​’ ಚಿತ್ರತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ: ʼಸಾವಿನ ವ್ಯಾಪಾರಿʼಯಾಗಿ ವಿಜಯ್​ ಸೇತುಪತಿ

ಬಾಲಿವುಡ್​ನ ಜನಪ್ರಿಯ ನಟ ಶಾರುಖ್‌ ಖಾನ್‌ ಅಭಿನಯಿಸುತ್ತಿರುವ ಹೊಸ ಸಿನಿಮಾ ಜವಾನ್ ಬಗ್ಗೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ದಿನದಿಂದ ದಿನಕ್ಕೆ ಈ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಇಂದು (ಜುಲೈ 24) ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

ಜವಾನ್‌ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿರುವುದು ವಿಜಯ್​ ಸೇತುಪತಿ. ಅವರ ಗೆಟಪ್​ ಹೇಗಿರಲಿದೆ ಎಂಬುದು ಈ ಫೋಸ್ಟರ್​ನಲ್ಲಿ ಗೊತ್ತಾಗಿದೆ. ವಿಜಯ್‌ ಸೇತುಪತಿ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

‘ಜವಾನ್​’ ಸಿನಿಮಾದಲ್ಲಿನ ವಿಜಯ್ ಸೇತುಪತಿ ಅವರ ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಶಾರುಖ್ ಖಾನ್ ಅವರು ಬಿಡುಗಡೆ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ‘ಸಾವಿನ ವ್ಯಾಪಾರಿ’ ಎಂಬ ಟ್ಯಾಗ್​ಲೈನ್​ ಗಮನ ಸೆಳೆಯುತ್ತಿದೆ. ಆ ಮೂಲಕ ವಿಜಯ್ ಸೇತುಪತಿ ಪಾತ್ರ ಎಷ್ಟು ಭಯಂಕರವಾಗಿರಲಿದೆ ಎಂಬುದರ ಸುಳಿವು ನೀಡಲಾಗಿದೆ.

ಇದೇ ಮೊದಲ ಬಾರಿಗೆ ವಿಜಯ್ ಸೇತುಪತಿ ಮತ್ತು ಶಾರುಖ್​ ಖಾನ್​ ಅವರು ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇಬ್ಬರ ಮುಖಾಮುಖಿ ದೃಶ್ಯಗಳನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. ಇತ್ತೀಚೆಗಷ್ಟೇ ‘ಜವಾನ್​’ ಸಿನಿಮಾದ ಪ್ರಿವ್ಯೂ ಬಿಡುಗಡೆ ಆಗಿತ್ತು. ಅದರಲ್ಲೂ ವಿಜಯ್​ ಸೇತುಪತಿ ಅವರ ಪಾತ್ರದ ಝಲಕ್​ ಕಾಣಿಸಿತ್ತು. ಈಗ ಪೋಸ್ಟರ್​ ಮೂಲಕ ಇನ್ನಷ್ಟು ಕೌತುಕ ಹೆಚ್ಚಿಸುವ ಕೆಲಸ ಮಾಡಲಾಗಿದೆ. ಸೌತ್​ ಸಿನಿಮಾಗಳಲ್ಲಿ ವಿಲನ್​ ಪಾತ್ರ ಮಾಡಿ ಸೈ ಎನಿಸಿಕೊಂಡಿರುವ ವಿಜಯ್​ ಸೇತುಪತಿ ಅವರು ಶಾರುಖ್​ ಖಾನ್​ ಎದುರು ಹೇಗೆ ಅಬ್ಬರಿಸಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಿದೆ.

‘ಜವಾನ್’ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳಲು ಅನೇಕ ಕಾರಣಗಳಿವೆ. ಪ್ರಿವ್ಯೂ ವಿಡಿಯೋದಲ್ಲಿ ಶಾರುಖ್ ಖಾನ್ ಅವರ ಬೋಳು ತಲೆ ಗೆಟಪ್​ ಗಮನ ಸೆಳೆದಿದೆ. ಹಾಗೆಯೇ ನಯನತಾರಾ ಅವರು ಆ್ಯಕ್ಷನ್​ ಅವತಾರದಲ್ಲಿ ಬರುತ್ತಿದ್ದಾರೆ. ಈಗ ವಿಜಯ್ ಸೇತುಪತಿ ಅವರನ್ನು ‘ಸಾವಿನ ವ್ಯಾಪಾರಿ’ ಎಂದು ಕರೆಯುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಲಾಗಿದೆ.

ಅಟ್ಲಿ ನಿರ್ದೇಶನ ಮಾಡಿರುವ ‘ಜವಾನ್​’ ಸಿನಿಮಾ ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್​ಟೇನ್ಮೆಂಟ್’ ಬ್ಯಾನರ್​ ಮೂಲಕ ಗೌರಿ ಖಾನ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಗೌರವ ವರ್ಮಾ ಅವರು ಸಹ-ನಿರ್ಮಾಪಕನಾಗಿದ್ದಾರೆ.

andolanait

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

27 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

53 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago