ಚಿತ್ರ ಮಂಜರಿ

‘ಜವಾನ್​’ ಚಿತ್ರತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ: ʼಸಾವಿನ ವ್ಯಾಪಾರಿʼಯಾಗಿ ವಿಜಯ್​ ಸೇತುಪತಿ

ಬಾಲಿವುಡ್​ನ ಜನಪ್ರಿಯ ನಟ ಶಾರುಖ್‌ ಖಾನ್‌ ಅಭಿನಯಿಸುತ್ತಿರುವ ಹೊಸ ಸಿನಿಮಾ ಜವಾನ್ ಬಗ್ಗೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ದಿನದಿಂದ ದಿನಕ್ಕೆ ಈ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಇಂದು (ಜುಲೈ 24) ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

ಜವಾನ್‌ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿರುವುದು ವಿಜಯ್​ ಸೇತುಪತಿ. ಅವರ ಗೆಟಪ್​ ಹೇಗಿರಲಿದೆ ಎಂಬುದು ಈ ಫೋಸ್ಟರ್​ನಲ್ಲಿ ಗೊತ್ತಾಗಿದೆ. ವಿಜಯ್‌ ಸೇತುಪತಿ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

‘ಜವಾನ್​’ ಸಿನಿಮಾದಲ್ಲಿನ ವಿಜಯ್ ಸೇತುಪತಿ ಅವರ ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಶಾರುಖ್ ಖಾನ್ ಅವರು ಬಿಡುಗಡೆ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ‘ಸಾವಿನ ವ್ಯಾಪಾರಿ’ ಎಂಬ ಟ್ಯಾಗ್​ಲೈನ್​ ಗಮನ ಸೆಳೆಯುತ್ತಿದೆ. ಆ ಮೂಲಕ ವಿಜಯ್ ಸೇತುಪತಿ ಪಾತ್ರ ಎಷ್ಟು ಭಯಂಕರವಾಗಿರಲಿದೆ ಎಂಬುದರ ಸುಳಿವು ನೀಡಲಾಗಿದೆ.

ಇದೇ ಮೊದಲ ಬಾರಿಗೆ ವಿಜಯ್ ಸೇತುಪತಿ ಮತ್ತು ಶಾರುಖ್​ ಖಾನ್​ ಅವರು ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇಬ್ಬರ ಮುಖಾಮುಖಿ ದೃಶ್ಯಗಳನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. ಇತ್ತೀಚೆಗಷ್ಟೇ ‘ಜವಾನ್​’ ಸಿನಿಮಾದ ಪ್ರಿವ್ಯೂ ಬಿಡುಗಡೆ ಆಗಿತ್ತು. ಅದರಲ್ಲೂ ವಿಜಯ್​ ಸೇತುಪತಿ ಅವರ ಪಾತ್ರದ ಝಲಕ್​ ಕಾಣಿಸಿತ್ತು. ಈಗ ಪೋಸ್ಟರ್​ ಮೂಲಕ ಇನ್ನಷ್ಟು ಕೌತುಕ ಹೆಚ್ಚಿಸುವ ಕೆಲಸ ಮಾಡಲಾಗಿದೆ. ಸೌತ್​ ಸಿನಿಮಾಗಳಲ್ಲಿ ವಿಲನ್​ ಪಾತ್ರ ಮಾಡಿ ಸೈ ಎನಿಸಿಕೊಂಡಿರುವ ವಿಜಯ್​ ಸೇತುಪತಿ ಅವರು ಶಾರುಖ್​ ಖಾನ್​ ಎದುರು ಹೇಗೆ ಅಬ್ಬರಿಸಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಿದೆ.

‘ಜವಾನ್’ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳಲು ಅನೇಕ ಕಾರಣಗಳಿವೆ. ಪ್ರಿವ್ಯೂ ವಿಡಿಯೋದಲ್ಲಿ ಶಾರುಖ್ ಖಾನ್ ಅವರ ಬೋಳು ತಲೆ ಗೆಟಪ್​ ಗಮನ ಸೆಳೆದಿದೆ. ಹಾಗೆಯೇ ನಯನತಾರಾ ಅವರು ಆ್ಯಕ್ಷನ್​ ಅವತಾರದಲ್ಲಿ ಬರುತ್ತಿದ್ದಾರೆ. ಈಗ ವಿಜಯ್ ಸೇತುಪತಿ ಅವರನ್ನು ‘ಸಾವಿನ ವ್ಯಾಪಾರಿ’ ಎಂದು ಕರೆಯುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಲಾಗಿದೆ.

ಅಟ್ಲಿ ನಿರ್ದೇಶನ ಮಾಡಿರುವ ‘ಜವಾನ್​’ ಸಿನಿಮಾ ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್​ಟೇನ್ಮೆಂಟ್’ ಬ್ಯಾನರ್​ ಮೂಲಕ ಗೌರಿ ಖಾನ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಗೌರವ ವರ್ಮಾ ಅವರು ಸಹ-ನಿರ್ಮಾಪಕನಾಗಿದ್ದಾರೆ.

andolanait

Recent Posts

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

9 mins ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

30 mins ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

51 mins ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

60 mins ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

1 hour ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

3 hours ago