ಬಾಲಿವುಡ್ನ ಜನಪ್ರಿಯ ನಟ ಶಾರುಖ್ ಖಾನ್ ಅಭಿನಯಿಸುತ್ತಿರುವ ಹೊಸ ಸಿನಿಮಾ ಜವಾನ್ ಬಗ್ಗೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ದಿನದಿಂದ ದಿನಕ್ಕೆ ಈ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಇಂದು (ಜುಲೈ 24) ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಜವಾನ್ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿರುವುದು ವಿಜಯ್ ಸೇತುಪತಿ. ಅವರ ಗೆಟಪ್ ಹೇಗಿರಲಿದೆ ಎಂಬುದು ಈ ಫೋಸ್ಟರ್ನಲ್ಲಿ ಗೊತ್ತಾಗಿದೆ. ವಿಜಯ್ ಸೇತುಪತಿ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್ ವೈರಲ್ ಆಗಿದೆ.
‘ಜವಾನ್’ ಸಿನಿಮಾದಲ್ಲಿನ ವಿಜಯ್ ಸೇತುಪತಿ ಅವರ ಫಸ್ಟ್ ಲುಕ್ ಪೋಸ್ಟರ್ ಅನ್ನು ಶಾರುಖ್ ಖಾನ್ ಅವರು ಬಿಡುಗಡೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಈ ಪೋಸ್ಟರ್ ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್ನಲ್ಲಿ ‘ಸಾವಿನ ವ್ಯಾಪಾರಿ’ ಎಂಬ ಟ್ಯಾಗ್ಲೈನ್ ಗಮನ ಸೆಳೆಯುತ್ತಿದೆ. ಆ ಮೂಲಕ ವಿಜಯ್ ಸೇತುಪತಿ ಪಾತ್ರ ಎಷ್ಟು ಭಯಂಕರವಾಗಿರಲಿದೆ ಎಂಬುದರ ಸುಳಿವು ನೀಡಲಾಗಿದೆ.
ಇದೇ ಮೊದಲ ಬಾರಿಗೆ ವಿಜಯ್ ಸೇತುಪತಿ ಮತ್ತು ಶಾರುಖ್ ಖಾನ್ ಅವರು ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇಬ್ಬರ ಮುಖಾಮುಖಿ ದೃಶ್ಯಗಳನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಇತ್ತೀಚೆಗಷ್ಟೇ ‘ಜವಾನ್’ ಸಿನಿಮಾದ ಪ್ರಿವ್ಯೂ ಬಿಡುಗಡೆ ಆಗಿತ್ತು. ಅದರಲ್ಲೂ ವಿಜಯ್ ಸೇತುಪತಿ ಅವರ ಪಾತ್ರದ ಝಲಕ್ ಕಾಣಿಸಿತ್ತು. ಈಗ ಪೋಸ್ಟರ್ ಮೂಲಕ ಇನ್ನಷ್ಟು ಕೌತುಕ ಹೆಚ್ಚಿಸುವ ಕೆಲಸ ಮಾಡಲಾಗಿದೆ. ಸೌತ್ ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿ ಸೈ ಎನಿಸಿಕೊಂಡಿರುವ ವಿಜಯ್ ಸೇತುಪತಿ ಅವರು ಶಾರುಖ್ ಖಾನ್ ಎದುರು ಹೇಗೆ ಅಬ್ಬರಿಸಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಿದೆ.
‘ಜವಾನ್’ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳಲು ಅನೇಕ ಕಾರಣಗಳಿವೆ. ಪ್ರಿವ್ಯೂ ವಿಡಿಯೋದಲ್ಲಿ ಶಾರುಖ್ ಖಾನ್ ಅವರ ಬೋಳು ತಲೆ ಗೆಟಪ್ ಗಮನ ಸೆಳೆದಿದೆ. ಹಾಗೆಯೇ ನಯನತಾರಾ ಅವರು ಆ್ಯಕ್ಷನ್ ಅವತಾರದಲ್ಲಿ ಬರುತ್ತಿದ್ದಾರೆ. ಈಗ ವಿಜಯ್ ಸೇತುಪತಿ ಅವರನ್ನು ‘ಸಾವಿನ ವ್ಯಾಪಾರಿ’ ಎಂದು ಕರೆಯುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಲಾಗಿದೆ.
ಅಟ್ಲಿ ನಿರ್ದೇಶನ ಮಾಡಿರುವ ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಶಾರುಖ್ ಖಾನ್ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್’ ಬ್ಯಾನರ್ ಮೂಲಕ ಗೌರಿ ಖಾನ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಗೌರವ ವರ್ಮಾ ಅವರು ಸಹ-ನಿರ್ಮಾಪಕನಾಗಿದ್ದಾರೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…