ಚಿತ್ರ ಮಂಜರಿ

‘ಜವಾನ್​’ ಚಿತ್ರತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ: ʼಸಾವಿನ ವ್ಯಾಪಾರಿʼಯಾಗಿ ವಿಜಯ್​ ಸೇತುಪತಿ

ಬಾಲಿವುಡ್​ನ ಜನಪ್ರಿಯ ನಟ ಶಾರುಖ್‌ ಖಾನ್‌ ಅಭಿನಯಿಸುತ್ತಿರುವ ಹೊಸ ಸಿನಿಮಾ ಜವಾನ್ ಬಗ್ಗೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ದಿನದಿಂದ ದಿನಕ್ಕೆ ಈ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಇಂದು (ಜುಲೈ 24) ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

ಜವಾನ್‌ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿರುವುದು ವಿಜಯ್​ ಸೇತುಪತಿ. ಅವರ ಗೆಟಪ್​ ಹೇಗಿರಲಿದೆ ಎಂಬುದು ಈ ಫೋಸ್ಟರ್​ನಲ್ಲಿ ಗೊತ್ತಾಗಿದೆ. ವಿಜಯ್‌ ಸೇತುಪತಿ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

‘ಜವಾನ್​’ ಸಿನಿಮಾದಲ್ಲಿನ ವಿಜಯ್ ಸೇತುಪತಿ ಅವರ ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಶಾರುಖ್ ಖಾನ್ ಅವರು ಬಿಡುಗಡೆ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ‘ಸಾವಿನ ವ್ಯಾಪಾರಿ’ ಎಂಬ ಟ್ಯಾಗ್​ಲೈನ್​ ಗಮನ ಸೆಳೆಯುತ್ತಿದೆ. ಆ ಮೂಲಕ ವಿಜಯ್ ಸೇತುಪತಿ ಪಾತ್ರ ಎಷ್ಟು ಭಯಂಕರವಾಗಿರಲಿದೆ ಎಂಬುದರ ಸುಳಿವು ನೀಡಲಾಗಿದೆ.

ಇದೇ ಮೊದಲ ಬಾರಿಗೆ ವಿಜಯ್ ಸೇತುಪತಿ ಮತ್ತು ಶಾರುಖ್​ ಖಾನ್​ ಅವರು ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇಬ್ಬರ ಮುಖಾಮುಖಿ ದೃಶ್ಯಗಳನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. ಇತ್ತೀಚೆಗಷ್ಟೇ ‘ಜವಾನ್​’ ಸಿನಿಮಾದ ಪ್ರಿವ್ಯೂ ಬಿಡುಗಡೆ ಆಗಿತ್ತು. ಅದರಲ್ಲೂ ವಿಜಯ್​ ಸೇತುಪತಿ ಅವರ ಪಾತ್ರದ ಝಲಕ್​ ಕಾಣಿಸಿತ್ತು. ಈಗ ಪೋಸ್ಟರ್​ ಮೂಲಕ ಇನ್ನಷ್ಟು ಕೌತುಕ ಹೆಚ್ಚಿಸುವ ಕೆಲಸ ಮಾಡಲಾಗಿದೆ. ಸೌತ್​ ಸಿನಿಮಾಗಳಲ್ಲಿ ವಿಲನ್​ ಪಾತ್ರ ಮಾಡಿ ಸೈ ಎನಿಸಿಕೊಂಡಿರುವ ವಿಜಯ್​ ಸೇತುಪತಿ ಅವರು ಶಾರುಖ್​ ಖಾನ್​ ಎದುರು ಹೇಗೆ ಅಬ್ಬರಿಸಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಿದೆ.

‘ಜವಾನ್’ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳಲು ಅನೇಕ ಕಾರಣಗಳಿವೆ. ಪ್ರಿವ್ಯೂ ವಿಡಿಯೋದಲ್ಲಿ ಶಾರುಖ್ ಖಾನ್ ಅವರ ಬೋಳು ತಲೆ ಗೆಟಪ್​ ಗಮನ ಸೆಳೆದಿದೆ. ಹಾಗೆಯೇ ನಯನತಾರಾ ಅವರು ಆ್ಯಕ್ಷನ್​ ಅವತಾರದಲ್ಲಿ ಬರುತ್ತಿದ್ದಾರೆ. ಈಗ ವಿಜಯ್ ಸೇತುಪತಿ ಅವರನ್ನು ‘ಸಾವಿನ ವ್ಯಾಪಾರಿ’ ಎಂದು ಕರೆಯುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಲಾಗಿದೆ.

ಅಟ್ಲಿ ನಿರ್ದೇಶನ ಮಾಡಿರುವ ‘ಜವಾನ್​’ ಸಿನಿಮಾ ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್​ಟೇನ್ಮೆಂಟ್’ ಬ್ಯಾನರ್​ ಮೂಲಕ ಗೌರಿ ಖಾನ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಗೌರವ ವರ್ಮಾ ಅವರು ಸಹ-ನಿರ್ಮಾಪಕನಾಗಿದ್ದಾರೆ.

andolanait

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

10 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

11 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

16 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

17 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

23 hours ago