ಚಿತ್ರ ಮಂಜರಿ

‘ಜವಾನ್​’ ಚಿತ್ರತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ: ʼಸಾವಿನ ವ್ಯಾಪಾರಿʼಯಾಗಿ ವಿಜಯ್​ ಸೇತುಪತಿ

ಬಾಲಿವುಡ್​ನ ಜನಪ್ರಿಯ ನಟ ಶಾರುಖ್‌ ಖಾನ್‌ ಅಭಿನಯಿಸುತ್ತಿರುವ ಹೊಸ ಸಿನಿಮಾ ಜವಾನ್ ಬಗ್ಗೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ದಿನದಿಂದ ದಿನಕ್ಕೆ ಈ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಇಂದು (ಜುಲೈ 24) ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

ಜವಾನ್‌ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿರುವುದು ವಿಜಯ್​ ಸೇತುಪತಿ. ಅವರ ಗೆಟಪ್​ ಹೇಗಿರಲಿದೆ ಎಂಬುದು ಈ ಫೋಸ್ಟರ್​ನಲ್ಲಿ ಗೊತ್ತಾಗಿದೆ. ವಿಜಯ್‌ ಸೇತುಪತಿ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

‘ಜವಾನ್​’ ಸಿನಿಮಾದಲ್ಲಿನ ವಿಜಯ್ ಸೇತುಪತಿ ಅವರ ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಶಾರುಖ್ ಖಾನ್ ಅವರು ಬಿಡುಗಡೆ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ‘ಸಾವಿನ ವ್ಯಾಪಾರಿ’ ಎಂಬ ಟ್ಯಾಗ್​ಲೈನ್​ ಗಮನ ಸೆಳೆಯುತ್ತಿದೆ. ಆ ಮೂಲಕ ವಿಜಯ್ ಸೇತುಪತಿ ಪಾತ್ರ ಎಷ್ಟು ಭಯಂಕರವಾಗಿರಲಿದೆ ಎಂಬುದರ ಸುಳಿವು ನೀಡಲಾಗಿದೆ.

ಇದೇ ಮೊದಲ ಬಾರಿಗೆ ವಿಜಯ್ ಸೇತುಪತಿ ಮತ್ತು ಶಾರುಖ್​ ಖಾನ್​ ಅವರು ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇಬ್ಬರ ಮುಖಾಮುಖಿ ದೃಶ್ಯಗಳನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. ಇತ್ತೀಚೆಗಷ್ಟೇ ‘ಜವಾನ್​’ ಸಿನಿಮಾದ ಪ್ರಿವ್ಯೂ ಬಿಡುಗಡೆ ಆಗಿತ್ತು. ಅದರಲ್ಲೂ ವಿಜಯ್​ ಸೇತುಪತಿ ಅವರ ಪಾತ್ರದ ಝಲಕ್​ ಕಾಣಿಸಿತ್ತು. ಈಗ ಪೋಸ್ಟರ್​ ಮೂಲಕ ಇನ್ನಷ್ಟು ಕೌತುಕ ಹೆಚ್ಚಿಸುವ ಕೆಲಸ ಮಾಡಲಾಗಿದೆ. ಸೌತ್​ ಸಿನಿಮಾಗಳಲ್ಲಿ ವಿಲನ್​ ಪಾತ್ರ ಮಾಡಿ ಸೈ ಎನಿಸಿಕೊಂಡಿರುವ ವಿಜಯ್​ ಸೇತುಪತಿ ಅವರು ಶಾರುಖ್​ ಖಾನ್​ ಎದುರು ಹೇಗೆ ಅಬ್ಬರಿಸಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಿದೆ.

‘ಜವಾನ್’ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳಲು ಅನೇಕ ಕಾರಣಗಳಿವೆ. ಪ್ರಿವ್ಯೂ ವಿಡಿಯೋದಲ್ಲಿ ಶಾರುಖ್ ಖಾನ್ ಅವರ ಬೋಳು ತಲೆ ಗೆಟಪ್​ ಗಮನ ಸೆಳೆದಿದೆ. ಹಾಗೆಯೇ ನಯನತಾರಾ ಅವರು ಆ್ಯಕ್ಷನ್​ ಅವತಾರದಲ್ಲಿ ಬರುತ್ತಿದ್ದಾರೆ. ಈಗ ವಿಜಯ್ ಸೇತುಪತಿ ಅವರನ್ನು ‘ಸಾವಿನ ವ್ಯಾಪಾರಿ’ ಎಂದು ಕರೆಯುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಲಾಗಿದೆ.

ಅಟ್ಲಿ ನಿರ್ದೇಶನ ಮಾಡಿರುವ ‘ಜವಾನ್​’ ಸಿನಿಮಾ ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್​ಟೇನ್ಮೆಂಟ್’ ಬ್ಯಾನರ್​ ಮೂಲಕ ಗೌರಿ ಖಾನ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಗೌರವ ವರ್ಮಾ ಅವರು ಸಹ-ನಿರ್ಮಾಪಕನಾಗಿದ್ದಾರೆ.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago