ಕರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು ನಟ ನಿಖಿಲ್ ಕುಮಾರಸ್ವಾಮಿ. ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡುತ್ತಿದ್ದಾರೆ.
ಸೀತಾ ರಾಮ್ ಕಲ್ಯಾಣ್ ಸಿನಿಮಾದ ನಂತರ ಧನುಷ್ ಮತ್ತು ಯದುವೀರ ಎಂಬೆರಡು ಚಿತ್ರಗಳನ್ನು ನಿಖಿಲ್ ಒಪ್ಪಿಕೊಂಡಿದ್ದರೂ, ಎರಡೂ ಚಿತ್ರಗಳ ಚಿತ್ರೀಕರಣ ಪ್ರಾರಂಭವಾಗಿರಲಿಲ್ಲ. ಹಾಗಾಗಿ ನಿರಾಳರಾಗಿ ಚುನಾವಣೆಗೆ ಕಳುಹಿಸಿ ಕೊಟ್ಟಿದ್ದರು ಆಯಾ ಚಿತ್ರಗಳ ನಿರ್ಮಾಪಕರು. ಆ ಚಿತ್ರಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಈ ನಡುವೆ ಮತ್ತೊಂದು ಹೆಸರಾಂತ ಸಂಸ್ಥೆ ನಿಖಿಲ್ ಚಿತ್ರ ಮಾಡಲು ಮುಂದಾಗಿದೆ.
ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಇದೀಗ ನಿಖಿಲ್ ಅವರ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದೆ ಬಂದಿದೆ. ಈಗಾಗಲೇ ನಿಖಿಲ್ ಜೊತೆ ಮಾತುಕತೆಯನ್ನೂ ಆಡಿದೆ. ನಿಖಿಲ್ ಕೂಡ ಆ ಕಂಪೆನಿಯಲ್ಲಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನುವುದು ಸದ್ಯಕ್ಕಿರುವ ವರ್ತಮಾನ.
ನಿಖಿಲ್ ಕುಮಾರಸ್ವಾಮಿ ದೊಡ್ಡದೊಂದು ಬ್ರೇಕ್ ಗಾಗಿ ಕಾಯುತ್ತಿದ್ದಾರೆ. ಈವರೆಗೂ ಬಂದ ಚಿತ್ರಗಳು ನಿಖಿಲ್ ಅವರಿಗೆ ಅಷ್ಟೇನೂ ಹೇಳಿಕೊಳ್ಳುವಂತಹ ಆದಾಯ ಮತ್ತು ಹೆಸರು ತಂದುಕೊಟ್ಟಿಲ್ಲ. ಹಾಗಾಗಿ ದೊಡ್ಡ ಬ್ರೇಕ್ ಗಾಗಿಯೇ ಅವರು ಕಾಯುತ್ತಿದ್ದಾರೆ. ಒಪ್ಪಿಕೊಂಡ ಚಿತ್ರಗಳು ಅವರ ಕೈ ಹಿಡಿಯಲಿ ಎನ್ನುವುದು ಅಭಿಮಾನಿಗಳ ಆಸೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…