ಜಾಗ್ವಾರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬಂದ ನಿಖಿಲ್ ಬಳಿಕ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ಮಿಂಚಿದರು. ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಗಮನ ಸೆಳೆದರು.
2 ವರ್ಷದ ಹಿಂದೆ ಬಂದ ರೈಡರ್ ಸಿನಿಮಾ ಪ್ರೇಕ್ಷಕರ ಮನಗೆದ್ದರೂ ಬಾಕ್ಸ್ ಆಫೀಸ್ನಲ್ಲಿ ಮುಗ್ಗರಿಸಿತ್ತು. ಆ ಬಳಿಕ ಯಾವುದೇ ಸಿನಿಮಾದಲ್ಲಿ ನಿಖಿಲ್ ನಟಿಸಲಿಲ್ಲ.
ರಾಜ್ಯ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಸಿನಿಮಾ ನಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನ ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ.
ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡಿದ್ದಾರೆ.
ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಇದೀಗ ನಿಖಿಲ್ ಅವರ ಸಿನಿಮಾ ನಿರ್ಮಾಣ ಮಾಡಲು ಮುಂದೆ ಬಂದಿದೆ. ನಿಖಿಲ್ ಕೂಡ ಈ ಕಂಪೆನಿಯಲ್ಲಿ ಕೆಲಸ ಮಾಡಲು ಒಪ್ಪಿಕೊಂಡಿದ್ದರಿಂದ ಹೊಸ ಚಿತ್ರಕ್ಕೆ ಆಗಸ್ಟ್ 23 ರಂದು ಚಾಲನೆ ನೀಡಲಾಗುತ್ತಿದೆ. ತಮಿಳಿನಲ್ಲಿ ದುಬಾರಿ ಬಜೆಟ್ ಸಿನಿಮಾ ಮಾಡಿದ ಲೈಕಾ ಇದೀಗ ಕನ್ನಡದ ನಟನ ಮೇಲೆ ಹಣ ಹೂಡುತ್ತಿದೆ.
ಬಹಳ ಅದ್ಧೂರಿಯಾಗಿ ನಿಖಿಲ್ 4ನೇ ಸಿನಿಮಾ ಶುರುವಾಗಲಿದೆ. ಚಿತ್ರದಲ್ಲಿ ದಕ್ಷಿಣ ಭಾರತ ಚಿತ್ರರಂಗದ ಘಟಾನುಘಟಿ ಕಲಾವಿದರು, ತಂತ್ರಜ್ಞರು ಕೆಲಸ ಮಾಡಲಿದ್ದಾರೆ. 5 ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ನಿರ್ಮಾಣವಾಗಲಿದೆ. ಬಹುಕೋಟಿ ವೆಚ್ಚದಲ್ಲಿ ಈ ಪ್ರಾಜೆಕ್ಟ್ ಸಿದ್ಧವಾಗಲಿದೆ. ಪರಭಾಷೆಯ ನಿರ್ದೇಶಕರು ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಸಾಧ್ಯತೆಯಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…