ಜಾಗ್ವಾರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬಂದ ನಿಖಿಲ್ ಬಳಿಕ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ಮಿಂಚಿದರು. ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಗಮನ ಸೆಳೆದರು.
2 ವರ್ಷದ ಹಿಂದೆ ಬಂದ ರೈಡರ್ ಸಿನಿಮಾ ಪ್ರೇಕ್ಷಕರ ಮನಗೆದ್ದರೂ ಬಾಕ್ಸ್ ಆಫೀಸ್ನಲ್ಲಿ ಮುಗ್ಗರಿಸಿತ್ತು. ಆ ಬಳಿಕ ಯಾವುದೇ ಸಿನಿಮಾದಲ್ಲಿ ನಿಖಿಲ್ ನಟಿಸಲಿಲ್ಲ.
ರಾಜ್ಯ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಸಿನಿಮಾ ನಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನ ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ.
ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡಿದ್ದಾರೆ.
ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಇದೀಗ ನಿಖಿಲ್ ಅವರ ಸಿನಿಮಾ ನಿರ್ಮಾಣ ಮಾಡಲು ಮುಂದೆ ಬಂದಿದೆ. ನಿಖಿಲ್ ಕೂಡ ಈ ಕಂಪೆನಿಯಲ್ಲಿ ಕೆಲಸ ಮಾಡಲು ಒಪ್ಪಿಕೊಂಡಿದ್ದರಿಂದ ಹೊಸ ಚಿತ್ರಕ್ಕೆ ಆಗಸ್ಟ್ 23 ರಂದು ಚಾಲನೆ ನೀಡಲಾಗುತ್ತಿದೆ. ತಮಿಳಿನಲ್ಲಿ ದುಬಾರಿ ಬಜೆಟ್ ಸಿನಿಮಾ ಮಾಡಿದ ಲೈಕಾ ಇದೀಗ ಕನ್ನಡದ ನಟನ ಮೇಲೆ ಹಣ ಹೂಡುತ್ತಿದೆ.
ಬಹಳ ಅದ್ಧೂರಿಯಾಗಿ ನಿಖಿಲ್ 4ನೇ ಸಿನಿಮಾ ಶುರುವಾಗಲಿದೆ. ಚಿತ್ರದಲ್ಲಿ ದಕ್ಷಿಣ ಭಾರತ ಚಿತ್ರರಂಗದ ಘಟಾನುಘಟಿ ಕಲಾವಿದರು, ತಂತ್ರಜ್ಞರು ಕೆಲಸ ಮಾಡಲಿದ್ದಾರೆ. 5 ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ನಿರ್ಮಾಣವಾಗಲಿದೆ. ಬಹುಕೋಟಿ ವೆಚ್ಚದಲ್ಲಿ ಈ ಪ್ರಾಜೆಕ್ಟ್ ಸಿದ್ಧವಾಗಲಿದೆ. ಪರಭಾಷೆಯ ನಿರ್ದೇಶಕರು ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಸಾಧ್ಯತೆಯಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…