ಚಿತ್ರ ಮಂಜರಿ

ಮತ್ತೆ ಸಿನಿಮಾದಲ್ಲಿ ಬ್ಯುಸಿಯಾದ ನಿಖಿಲ್‌ ಕುಮಾರಸ್ವಾಮಿ : ಆಗಸ್ಟ್ 23ಕ್ಕೆ ಚಿತ್ರದ ಮುಹೂರ್ತ

ಜಾಗ್ವಾರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬಂದ ನಿಖಿಲ್ ಬಳಿಕ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ಮಿಂಚಿದರು. ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಗಮನ ಸೆಳೆದರು.

2 ವರ್ಷದ ಹಿಂದೆ ಬಂದ ರೈಡರ್ ಸಿನಿಮಾ ಪ್ರೇಕ್ಷಕರ ಮನಗೆದ್ದರೂ ಬಾಕ್ಸ್ ಆಫೀಸ್‌ನಲ್ಲಿ ಮುಗ್ಗರಿಸಿತ್ತು. ಆ ಬಳಿಕ ಯಾವುದೇ ಸಿನಿಮಾದಲ್ಲಿ ನಿಖಿಲ್ ನಟಿಸಲಿಲ್ಲ.

ರಾಜ್ಯ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಸಿನಿಮಾ ನಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನ ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ.

ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡಿದ್ದಾರೆ.

ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಇದೀಗ ನಿಖಿಲ್ ಅವರ ಸಿನಿಮಾ ನಿರ್ಮಾಣ ಮಾಡಲು ಮುಂದೆ ಬಂದಿದೆ. ನಿಖಿಲ್ ಕೂಡ ಈ ಕಂಪೆನಿಯಲ್ಲಿ ಕೆಲಸ ಮಾಡಲು ಒಪ್ಪಿಕೊಂಡಿದ್ದರಿಂದ ಹೊಸ ಚಿತ್ರಕ್ಕೆ ಆಗಸ್ಟ್ 23 ರಂದು ಚಾಲನೆ ನೀಡಲಾಗುತ್ತಿದೆ. ತಮಿಳಿನಲ್ಲಿ ದುಬಾರಿ ಬಜೆಟ್ ಸಿನಿಮಾ ಮಾಡಿದ ಲೈಕಾ ಇದೀಗ ಕನ್ನಡದ ನಟನ ಮೇಲೆ ಹಣ ಹೂಡುತ್ತಿದೆ.

ಬಹಳ ಅದ್ಧೂರಿಯಾಗಿ ನಿಖಿಲ್ 4ನೇ ಸಿನಿಮಾ ಶುರುವಾಗಲಿದೆ. ಚಿತ್ರದಲ್ಲಿ ದಕ್ಷಿಣ ಭಾರತ ಚಿತ್ರರಂಗದ ಘಟಾನುಘಟಿ ಕಲಾವಿದರು, ತಂತ್ರಜ್ಞರು ಕೆಲಸ ಮಾಡಲಿದ್ದಾರೆ. 5 ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ನಿರ್ಮಾಣವಾಗಲಿದೆ. ಬಹುಕೋಟಿ ವೆಚ್ಚದಲ್ಲಿ ಈ ಪ್ರಾಜೆಕ್ಟ್ ಸಿದ್ಧವಾಗಲಿದೆ. ಪರಭಾಷೆಯ ನಿರ್ದೇಶಕರು ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಸಾಧ್ಯತೆಯಿದೆ.

lokesh

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

1 hour ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

2 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

3 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

4 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

4 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

6 hours ago