ಚಿತ್ರ ಮಂಜರಿ

ಲೀಡರ್‌ ರಾಮಯ್ಯ ಪಾರ್ಟ್ 1ಗೆ ನಿರೂಪ್ ಭಂಡಾರಿ ಹೀರೋ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾದ ಲೀಡರ್‌ ರಾಮಯ್ಯ ಚಿತ್ರದ ಬಗ್ಗೆ ಮತ್ತೊಂದು ಹೊಸ ವಿಷಯ ಹೊರಬಿದ್ದಿದೆ. ಈ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕೂಡ ನಟಿಸಲಿದ್ದಾರೆ. ಈಗಾಗಲೇ ನಿರೂಪ್ ಅವರನ್ನು ಚಿತ್ರತಂಡ ಭೇಟಿ ಕೂಡ ಮಾಡಿದೆಯಂತೆ.

ಲೀಡರ್‌ ರಾಮಯ್ಯ ಸಿನಿಮಾ ಎರಡು ಭಾಗದಲ್ಲಿ ಮೂಡಿ ಬರಲಿದ್ದು, ಮೊದಲ ಭಾಗದಲ್ಲಿ ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದರೆ, ಎರಡನೇ ಭಾಗದಲ್ಲಿ ಸಿದ್ದರಾಮಯ್ಯನವರ ಪಾತ್ರದಲ್ಲಿ ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಕಾಣಿಸಿಕೊಳ್ಳಲಿದ್ದಾರಂತೆ. ಯೌವನದ ಪಾತ್ರದಲ್ಲಿ ನಿರೂಪ್, ಸಿದ್ದರಾಮಯ್ಯ ಲಾಯರ್ ಆಗಿದ್ದ ದಿನಗಳ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಎನ್ನುವುದು ಸದ್ಯಕ್ಕಿರುವ ಮಾಹಿತಿ.

ಸಿದ್ದರಾಮಯ್ಯ ಅವರ ಕುರಿತಾದ ಚಿತ್ರಕ್ಕೆ ಸದ್ಯದಲ್ಲೇ ಚಾಲನೆ ಸಿಗಲಿದ್ದು, ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಸೇರಿದಂತೆ ಹಲವು ಕೆಲಸಗಳಲ್ಲಿ ಬ್ಯುಸಿಯಾಗಿದೆ ಚಿತ್ರತಂಡ. ಕಲಾವಿದರ ಆಯ್ಕೆ ಕೂಡ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಇದೆ. ಬಾಲ್ಯ ಮತ್ತು ಯೌವನ ಹೀಗೆ ಎರಡು ಸ್ತರದ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಇದೆ.

ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನ ಬೆಳ್ಳಿಪರದೆಯಲ್ಲಿ ಬಿಚ್ಚಿಡಲು ಸತ್ಯರತ್ನಂ ರೆಡಿಯಾಗಿದ್ದಾರೆ. ಈಗಾಗಲೇ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಮತ್ತು ಜಮೀರ್ ಅಹ್ಮಮದ್ ನೇತೃತ್ವದಲ್ಲಿ ಮಾಕತೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಕೂಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಗಂಗಾವತಿ ಹಯಾತ್ ಪೀರ್ ಸಾಬ್ ಅವರ ನೇತೃತ್ವದ ಎಮ್‌ಎಸ್ ಕ್ರಿಯೇಷನ್ಸ್ ಬ್ಯಾನರ್ ಅಡಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಹೈ ಬಜೆಟ್‌ನಲ್ಲಿ 50 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಸದ್ಯದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್‌ ಬಗ್ಗೆ ಚಿತ್ರತಂಡದಿಂದ ಅಭಿಮಾನಿಗಳಿಗೆ ಅಧಿಕೃತ ಮಾಹಿತಿ ಸಿಗಲಿದೆ.

lokesh

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

9 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

9 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

10 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

10 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

10 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

10 hours ago