ಚಿತ್ರ ಮಂಜರಿ

ದರ್ಶನ್ ​ಮೇಲೆ ಕೋಪ ಇಲ್ಲ : ಕಿಚ್ಚ ಸುದೀಪ್

ನಟ ದರ್ಶನ್ ಹಾಗೂ ಸುದೀಪ್ ಮಧ್ಯೆ ವೈಮನಸ್ಸು ಮೂಡಿ ಹಲವು ವರ್ಷಗಳು ಕಳೆದಿವೆ. ಇಬ್ಬರೂ ಒಂದಾಗಬೇಕು ಎಂಬುದು ಅಭಿಮಾನಿಗಳ ಆಸೆ. ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಈ ವಿಚಾರದಲ್ಲಿ ಪಾಸಿಟಿವ್ ಆಗಿ ಪ್ರತಿಕ್ರಿಯಿಸುತ್ತಲೇ ಬಂದಿದ್ದಾರೆ. ಇಂದು ಸುದೀಪ್ ಹುಟ್ಟುಹಬ್ಬ. ಈ ವೇಳೆ ಅವರು ದರ್ಶನ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ದರ್ಶನ್ ಮೇಲೆ ಕೋಪವಿಲ್ಲ ಎಂದು ಅವರು ನೇರವಾಗಿ ಹೇಳಿದ್ದಾರೆ. ಜೊತೆಗೆ ರಾಜಿ ಸಂಧಾನದ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಸುಮಲತಾ ಅಂಬರೀಷ್ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇದಿಕೆ ಮೇಲೆ ದರ್ಶನ್ ಹಾಗೂ ಸುದೀಪ್ ಒಟ್ಟಾಗಿ ಕಾಣಿಸಿಕೊಂಡರು. ಆರು ವರ್ಷಗಳ ಬಳಿಕ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡರು. ಆದರೆ, ಇವರ ಮಧ್ಯೆ ಮಾತುಕತೆ ನಡೆದಿಲ್ಲ. ಈಗ ಒಂದೇ ವೇದಿಕೆ ಮೇಲೆ ಕಾಣಿಸಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ದರ್ಶನ್ ಹಾಗೂ ನಾನು ಒಂದೇ ಪಾರ್ಟಿಯಲ್ಲಿ ಭೇಟಿ ಆಗಿದ್ದು ನನಗೆ ಖುಷಿ ತಂದಿದೆ. ನಾವು ಕಿತ್ತಾಡಿಕೊಂಡಿಲ್ಲ. ನನಗೆ ದರ್ಶನ್ ಮೇಲೆ ಕೋಪವಿಲ್ಲ. ನಂಗೂ ಕೆಲವು ಪ್ರಶ್ನೆಗಳು ಇವೆ, ಅದೇ ರೀತಿ ದರ್ಶನ್​ಗೂ ಪ್ರಶ್ನೆ ಇದೆ. ಇಬ್ಬರೂ ಮುಖಾಮುಖಿ ಆದಾಗ ಮಾತ್ರ ಸಮಸ್ಯೆಗೆ ಪರಿಹಾರ ಸಿಗೋದು. ಸುಮಲತಾ ಮೇಲಿನ ಗೌರವದಿಂದ ಆ ಪಾರ್ಟಿಗೆ ಹೋಗಿದ್ದೆ ಎಂದಿದ್ದಾರೆ.

ನಾನು ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್​​ಗಳನ್ನು ನೋಡಲು ಹೋಗುವುದಿಲ್ಲ. ದರ್ಶನ್ ಏನು ಪೋಸ್ಟ್ ಮಾಡಿದ್ದಾರೆ ಎಂಬುದನ್ನು ನಾನು ನೋಡಿಲ್ಲ. ನೇರವಾಗಿ ಏನಾದರೂ ಹೇಳಿದರೆ ಅದನ್ನು ಪರಿಗಣನೆ ಮಾಡುತ್ತೇನೆ. ಶೇಕ್ ಹ್ಯಾಂಡ್ ಮಾಡೋದು ದೊಡ್ಡದಲ್ಲ. ಕೆಲವೊಂದಕ್ಕೆ ಸಮಯ ಕೂಡಿ ಆ ಬಳಿಕ ಸರಿ ಹೋಗುತ್ತದೆ. ನಾವಿಬ್ಬರು ಮತ್ತೆ ಒಂದಾದರೆ ನನಗೆ ಖುಷಿ ಇದೆ ಎಂದಿದ್ದಾರೆ.

ಅಭಿಮಾನಿಗಳು ಹುಟ್ಟುಹಬ್ಬ ಆಚರಿಸುತ್ತಿರುವ ಬಗ್ಗೆ ಸುದೀಪ್ ಪ್ರತಿಕ್ರಿಯಿಸಿದ್ದು,ಎಲ್ಲವೂ ಸರ್ಪ್ರೈಸ್ ಆಗಿ ಬರುತ್ತಿದೆ. ರಾತ್ರಿಯಿಂದ ನಿದ್ದೆಯನ್ನೇ ಮಾಡಿಲ್ಲ. ನಿಮ್ಮಿಂದಲೇ ತಾಳ್ಮೆ ಕಲಿತಿದ್ದೀನಿ. ನಾನು ಹೇಗೆ ಬೇಕಾದರು ಇರುತ್ತೇನೆ ಎನ್ನುವುದಕ್ಕೆ ಆಗುವುದಿಲ್ಲ. ಕಲಾವಿದರಾಗಿ ನಾವು ಸರ್ವೆಂಟ್ ಆಗಬೇಕು. ಸಾವಿರ ನೋವಿರಲಿ ಎಲ್ಲರನ್ನೂ ಭೇಟಿಯಾಗಬೇಕು ಎಂದಿದ್ದಾರೆ.

lokesh

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago