ಚಿತ್ರ ಮಂಜರಿ

ದರ್ಶನ್ ​ಮೇಲೆ ಕೋಪ ಇಲ್ಲ : ಕಿಚ್ಚ ಸುದೀಪ್

ನಟ ದರ್ಶನ್ ಹಾಗೂ ಸುದೀಪ್ ಮಧ್ಯೆ ವೈಮನಸ್ಸು ಮೂಡಿ ಹಲವು ವರ್ಷಗಳು ಕಳೆದಿವೆ. ಇಬ್ಬರೂ ಒಂದಾಗಬೇಕು ಎಂಬುದು ಅಭಿಮಾನಿಗಳ ಆಸೆ. ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಈ ವಿಚಾರದಲ್ಲಿ ಪಾಸಿಟಿವ್ ಆಗಿ ಪ್ರತಿಕ್ರಿಯಿಸುತ್ತಲೇ ಬಂದಿದ್ದಾರೆ. ಇಂದು ಸುದೀಪ್ ಹುಟ್ಟುಹಬ್ಬ. ಈ ವೇಳೆ ಅವರು ದರ್ಶನ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ದರ್ಶನ್ ಮೇಲೆ ಕೋಪವಿಲ್ಲ ಎಂದು ಅವರು ನೇರವಾಗಿ ಹೇಳಿದ್ದಾರೆ. ಜೊತೆಗೆ ರಾಜಿ ಸಂಧಾನದ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಸುಮಲತಾ ಅಂಬರೀಷ್ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇದಿಕೆ ಮೇಲೆ ದರ್ಶನ್ ಹಾಗೂ ಸುದೀಪ್ ಒಟ್ಟಾಗಿ ಕಾಣಿಸಿಕೊಂಡರು. ಆರು ವರ್ಷಗಳ ಬಳಿಕ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡರು. ಆದರೆ, ಇವರ ಮಧ್ಯೆ ಮಾತುಕತೆ ನಡೆದಿಲ್ಲ. ಈಗ ಒಂದೇ ವೇದಿಕೆ ಮೇಲೆ ಕಾಣಿಸಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ದರ್ಶನ್ ಹಾಗೂ ನಾನು ಒಂದೇ ಪಾರ್ಟಿಯಲ್ಲಿ ಭೇಟಿ ಆಗಿದ್ದು ನನಗೆ ಖುಷಿ ತಂದಿದೆ. ನಾವು ಕಿತ್ತಾಡಿಕೊಂಡಿಲ್ಲ. ನನಗೆ ದರ್ಶನ್ ಮೇಲೆ ಕೋಪವಿಲ್ಲ. ನಂಗೂ ಕೆಲವು ಪ್ರಶ್ನೆಗಳು ಇವೆ, ಅದೇ ರೀತಿ ದರ್ಶನ್​ಗೂ ಪ್ರಶ್ನೆ ಇದೆ. ಇಬ್ಬರೂ ಮುಖಾಮುಖಿ ಆದಾಗ ಮಾತ್ರ ಸಮಸ್ಯೆಗೆ ಪರಿಹಾರ ಸಿಗೋದು. ಸುಮಲತಾ ಮೇಲಿನ ಗೌರವದಿಂದ ಆ ಪಾರ್ಟಿಗೆ ಹೋಗಿದ್ದೆ ಎಂದಿದ್ದಾರೆ.

ನಾನು ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್​​ಗಳನ್ನು ನೋಡಲು ಹೋಗುವುದಿಲ್ಲ. ದರ್ಶನ್ ಏನು ಪೋಸ್ಟ್ ಮಾಡಿದ್ದಾರೆ ಎಂಬುದನ್ನು ನಾನು ನೋಡಿಲ್ಲ. ನೇರವಾಗಿ ಏನಾದರೂ ಹೇಳಿದರೆ ಅದನ್ನು ಪರಿಗಣನೆ ಮಾಡುತ್ತೇನೆ. ಶೇಕ್ ಹ್ಯಾಂಡ್ ಮಾಡೋದು ದೊಡ್ಡದಲ್ಲ. ಕೆಲವೊಂದಕ್ಕೆ ಸಮಯ ಕೂಡಿ ಆ ಬಳಿಕ ಸರಿ ಹೋಗುತ್ತದೆ. ನಾವಿಬ್ಬರು ಮತ್ತೆ ಒಂದಾದರೆ ನನಗೆ ಖುಷಿ ಇದೆ ಎಂದಿದ್ದಾರೆ.

ಅಭಿಮಾನಿಗಳು ಹುಟ್ಟುಹಬ್ಬ ಆಚರಿಸುತ್ತಿರುವ ಬಗ್ಗೆ ಸುದೀಪ್ ಪ್ರತಿಕ್ರಿಯಿಸಿದ್ದು,ಎಲ್ಲವೂ ಸರ್ಪ್ರೈಸ್ ಆಗಿ ಬರುತ್ತಿದೆ. ರಾತ್ರಿಯಿಂದ ನಿದ್ದೆಯನ್ನೇ ಮಾಡಿಲ್ಲ. ನಿಮ್ಮಿಂದಲೇ ತಾಳ್ಮೆ ಕಲಿತಿದ್ದೀನಿ. ನಾನು ಹೇಗೆ ಬೇಕಾದರು ಇರುತ್ತೇನೆ ಎನ್ನುವುದಕ್ಕೆ ಆಗುವುದಿಲ್ಲ. ಕಲಾವಿದರಾಗಿ ನಾವು ಸರ್ವೆಂಟ್ ಆಗಬೇಕು. ಸಾವಿರ ನೋವಿರಲಿ ಎಲ್ಲರನ್ನೂ ಭೇಟಿಯಾಗಬೇಕು ಎಂದಿದ್ದಾರೆ.

lokesh

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

8 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

9 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

9 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

10 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

11 hours ago