ಚಿತ್ರ ಮಂಜರಿ

ನಗ್ನ ಫೋಟೋ ಶೂಟ್‌ ಕೇಸ್‌ : ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿರುವ ರಣವೀರ್​ ಸಿಂಗ್

ಮುಂಬೈ: ನಟ ರಣವೀರ್​ ಸಿಂ​ಗ್ ಅವರಿಗೆ ಸಂಕಷ್ಟ ಎದುರಾಗಿದೆ. ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಹೊಂದಿರುವ ‘ಪೇಪರ್​’ ಮ್ಯಾಗಜಿನ್​ ಸಲುವಾಗಿ ಅವರು ಮಾಡಿಸಿದ ನಗ್ನ ಫೋಟೋಶೂಟ್​  ಹಲವು ವಿವಾದಕ್ಕೆ ಕಾರಣ ಆಗಿದೆ. ಈ ಫೋಟೋಶೂಟ್​ಗೆ ಸಂಬಂಧಿಸಿದಂತೆ ರಣವೀರ್​ ಸಿಂಗ್​ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಆ ಪ್ರಕರಣದ ವಿಚಾರಣೆಗೆ ಹಾಜರಾಗಲು ರಣವೀರ್​ ಸಿಂಗ್ ಈಗ​ ಹಿಂದೇಟು ಹಾಕುತ್ತಿದ್ದಾರೆ.

ಆಗಸ್ಟ್​ 22ರಂದು ಮುಂಬೈ ಪೊಲೀಸರ ಎದುರು ಅವರು ವಿಚಾರಣೆಗೆ ಒಳಪಡಬೇಕು. ಆದರೆ ಒಂದಷ್ಟು ಕಾರಣಗಳನ್ನು ನೀಡಿ ಅವರು ವಿಚಾರಣೆಯಿಂದ ತಪ್ಪಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಮುಂಬೈ ಪೊಲೀಸರು ಮಾಹಿತಿ ನೀಡಿರುವುದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ. ವಿಚಾರಣೆಗೆ ಹಾಜರಾಗಲು ರಣವೀರ್​ ಸಿಂಗ್​ ಎರಡು ವಾರಗಳ ಕಾಲ ಸಮಯ ಕೇಳಿದ್ದಾರೆ ಎಂದು ಹೇಳಲಾಗಿದೆ.

ರಣವೀರ್​ ಸಿಂಗ್​ ಮಾಡಿಸಿದ ನಗ್ನ ಫೋಟೋಶೂಟ್​ನಿಂದ ಮಹಿಳೆಯರ ಗೌರವಕ್ಕೆ ಧಕ್ಕೆ ಆಗಿದೆ ಎಂದು ಆರೋಪಿಸಿ ಕೆಲವರು ದೂರು ನೀಡಿದ್ದರು. ಆ ಕುರಿತು ವಿಚಾರಣೆ ನಡೆಸುವ ಸಲುವಾಗಿ ರಣವೀರ್​ ಸಿಂಗ್​ಗೆ ಪೊಲೀಸರು ಸಮನ್ಸ್​ ನೀಡಿದ್ದರು. ಸಮನ್ಸ್​ ನೀಡಲು ಅವರ ಮನೆಗೆ ತೆರಳಿದ್ದಾಗ ಅವರು ಅಲ್ಲಿ ಇರಲಿಲ್ಲ. ಆಗಸ್ಟ್​ 22ರಂದು ಮುಂಬೈನ ಬೇಂಬೂರ್​ ಪೊಲೀಸ್​ ಠಾಣೆಗೆ ಹಾಜರಾಗುವಂತೆ ಸಮನ್ಸ್​ನಲ್ಲಿ ತಿಳಿಸಲಾಗಿತ್ತು.

ಹಲವು ಪ್ರಾಜೆಕ್ಟ್​ಗಳಲ್ಲಿ ರಣವೀರ್ ಸಿಂಗ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಪೊಲೀಸರ ಎದುರು ವಿಚಾರಣೆಗೆ ಹಾಜರಾಗದಿರಲು ನೆಪ ಹೇಳಿದ್ದಾರೆ. ಆ ಮೂಲಕ ಹೊಸ ವರಸೆ ತೋರಿದ್ದಾರೆ. ಇನ್ನೂ ಎರಡು ವಾರಗಳ ಕಾಲ ಸಮಯಾವಕಾಶ ಬೇಕು ಎಂದು ಅವರು ಪೊಲೀಸರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಹಾಗಾಗಿ ಹೊಸ ದಿನಾಂಕವನ್ನು ನಿಗದಿಪಡಿಸಿ, ಮತ್ತೊಮ್ಮೆ ಸಮನ್ಸ್​ ಜಾರಿಮಾಡಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಐಪಿಸಿ ಸೆಕ್ಷನ್​ 292, 293 ಹಾಗೂ 509ರ ಅಡಿಯಲ್ಲಿ ರಣವೀರ್​ ಸಿಂಗ್​ ವಿರುದ್ಧ ಕೇಸ್​ ದಾಖಲಾಗಿದೆ. ಇದರಿಂದ ಅವರಿಗೆ ಸಂಕಷ್ಟ ಎದುರಾಗಿದೆ. ಜುಲೈ 22ರಂದು ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ನಗ್ನ ಫೋಟೋಗಳನ್ನು ಶೇರ್​ ಮಾಡಿಕೊಂಡರು. ಇದನ್ನು ಕಂಡು ಕೆಲವರು ಅಸಮಾಧಾನ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ರಣವೀರ್​ ಸಿಂಗ್​ ಪರ ಮಾತನಾಡಿದ್ದಾರೆ. ಅಂತಿಮವಾಗಿ ಈ ಕೇಸ್​ ಏನಾಗಲಿದೆ ಎಂಬ ಕೌತುಕ ಮೂಡಿದೆ.

andolana

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

6 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

8 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

9 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

9 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

10 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

11 hours ago