ಚಿತ್ರ ಮಂಜರಿ

‘ಅವರಿಗೆ ಹೆದರಿಕೆ ಇರಬೇಕು ನಮಗ್ಯಾಕೆ ಹೆದರಿಕೆ?’ ಸಲಾರ್‌, ಡಂಕಿಗೆ ಟಾಂಗ್‌ ಕೊಟ್ರು ದರ್ಶನ್‌

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹು ನಿರೀಕ್ಷಿತ ಚಿತ್ರ ಕಾಟೇರ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ವರ್ಷಾಂತ್ಯಕ್ಕೆ ಬಿಡುಗಡೆಗೊಳ್ಳಲಿದೆ. ಡಿಸೆಂಬರ್‌ ಕೊನೆಯ ವಾರದಲ್ಲಿ ಹಿಂದಿ ಹಾಗೂ ತೆಲುಗು ಭಾಷೆಯ ದೊಡ್ಡ ಸ್ಟಾರ್‌ ನಟರ ಚಿತ್ರಗಳೂ ಸಹ ಬಿಡುಗಡೆಯಾಗಲಿದ್ದು, ಕಾಟೇರ ಚಿತ್ರ ಡಿಸೆಂಬರ್‌ 29ಕ್ಕೆ ಬಿಡುಗಡೆಯಾಗಲಿದೆ ಎಂದು ಘೋಷಣೆಯಾದಾಗ ಈ ಕುರಿತು ಚರ್ಚೆಗಳು ನಡೆದಿದ್ದವು.

ತೆಲುಗು ಸ್ಟಾರ್‌ ನಟ ಪ್ರಭಾಸ್‌ ನಟನೆಯ ಸಲಾರ್‌ ಹಾಗೂ ಹಿಂದಿಯ ಸ್ಟಾರ್‌ ನಟ ಶಾರುಖ್‌ ಖಾನ್‌ ನಟನೆಯ ಡಂಕಿ ಚಿತ್ರಗಳು ಇದೇ ತಿಂಗಳ 22ರಂದು ತೆರೆಗೆ ಬರಲಿದ್ದು, ಈ ಚಿತ್ರಗಳು ತೆರೆಕಂಡ ವಾರದ ಬಳಿಕ ಬಿಡುಗಡೆಯಾಗಲಿರುವ ಕಾಟೇರ ಚಿತ್ರದ ಮೇಲೆ ಈ ಚಿತ್ರಗಳ ಪ್ರಭಾವ ಬೀರಬಹುದು, ಬಿಡುಗಡೆಯನ್ನು ಮುಂದೂಡಿಕೊಂಡಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಇದೀಗ ಅಂತಹ ಅಭಿಪ್ರಾಯ ವ್ಯಕ್ತಪಡಿಸಿದವರ ಕುರಿತು ದರ್ಶನ್ ನಿನ್ನೆ ( ಡಿಸೆಂಬರ್‌ 14 ) ಪ್ರೆಸ್‌ಮೀಟ್‌ನಲ್ಲಿ ಮಾತನಾಡಿದ್ದಾರೆ. “29ಕ್ಕೆ ನಾವು ಬರೋಣ ಅಂತ ಅನ್ಕೊಂಡ್ವಿ. ನಮ್‌ ಸಿನಿಮಾ, ನಮ್‌ ಜಾಗ ಇದು. ಯಾರಿಗೋ ಹೆದರಿಕೊಂಡು ನಾವ್ಯಾಕ್‌ ಬರಬೇಕು ರೀ. ನಮ್ಮನೆಗೆ ಬರೋಕೆ ಅವರಿಗೆ ಹೆದರಿಕೆ ಇರಬೇಕೇ ಹೊರತು ನಮಗ್ಯಾಕೆ ಹೆದರಿಕೆ? ಕನ್ನಡ ಜನರು ಇದಾರಾ ಇಲ್ವಾ ಅಂತ ನನಗೆ ಡೌಟ್‌ ಬಂದುಬಿಡ್ತು. ಆದರೆ ಕನ್ನಡ ಸಿನಿಮಾ ಚೆನ್ನಾಗಿದ್ದಾಗ ಕನ್ನಡ ಜನ ಕೈಹಿಡಿದೇ ಹಿಡಿತಾರೆ. ಆಮೇಲೆ ನಾವ್‌ ಯಾವ್ದೇ ಪ್ಯಾನ್‌ ಇಂಡಿಯಾ ಸಿನಿಮಾ ಮಾಡಿಲ್ಲ, ಅಪ್ಪಟ ಕನ್ನಡ ಸಿನಿಮಾ, ಕನ್ನಡ ಜನತೆಗೋಸ್ಕರ ಮಾಡಿರೋ ಸಿನಿಮಾ ಅಂತ ಹೇಳೋಕೆ ಇಷ್ಟಪಡ್ತೀನಿ” ಎಂದು ದರ್ಶನ್‌ ಹೇಳಿದರು.

andolana

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

4 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

4 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

4 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago