ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಕಾಟೇರ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ವರ್ಷಾಂತ್ಯಕ್ಕೆ ಬಿಡುಗಡೆಗೊಳ್ಳಲಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಹಿಂದಿ ಹಾಗೂ ತೆಲುಗು ಭಾಷೆಯ ದೊಡ್ಡ ಸ್ಟಾರ್ ನಟರ ಚಿತ್ರಗಳೂ ಸಹ ಬಿಡುಗಡೆಯಾಗಲಿದ್ದು, ಕಾಟೇರ ಚಿತ್ರ ಡಿಸೆಂಬರ್ 29ಕ್ಕೆ ಬಿಡುಗಡೆಯಾಗಲಿದೆ ಎಂದು ಘೋಷಣೆಯಾದಾಗ ಈ ಕುರಿತು ಚರ್ಚೆಗಳು ನಡೆದಿದ್ದವು.
ತೆಲುಗು ಸ್ಟಾರ್ ನಟ ಪ್ರಭಾಸ್ ನಟನೆಯ ಸಲಾರ್ ಹಾಗೂ ಹಿಂದಿಯ ಸ್ಟಾರ್ ನಟ ಶಾರುಖ್ ಖಾನ್ ನಟನೆಯ ಡಂಕಿ ಚಿತ್ರಗಳು ಇದೇ ತಿಂಗಳ 22ರಂದು ತೆರೆಗೆ ಬರಲಿದ್ದು, ಈ ಚಿತ್ರಗಳು ತೆರೆಕಂಡ ವಾರದ ಬಳಿಕ ಬಿಡುಗಡೆಯಾಗಲಿರುವ ಕಾಟೇರ ಚಿತ್ರದ ಮೇಲೆ ಈ ಚಿತ್ರಗಳ ಪ್ರಭಾವ ಬೀರಬಹುದು, ಬಿಡುಗಡೆಯನ್ನು ಮುಂದೂಡಿಕೊಂಡಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಹಲವರು ಅಭಿಪ್ರಾಯಪಟ್ಟಿದ್ದರು.
ಇದೀಗ ಅಂತಹ ಅಭಿಪ್ರಾಯ ವ್ಯಕ್ತಪಡಿಸಿದವರ ಕುರಿತು ದರ್ಶನ್ ನಿನ್ನೆ ( ಡಿಸೆಂಬರ್ 14 ) ಪ್ರೆಸ್ಮೀಟ್ನಲ್ಲಿ ಮಾತನಾಡಿದ್ದಾರೆ. “29ಕ್ಕೆ ನಾವು ಬರೋಣ ಅಂತ ಅನ್ಕೊಂಡ್ವಿ. ನಮ್ ಸಿನಿಮಾ, ನಮ್ ಜಾಗ ಇದು. ಯಾರಿಗೋ ಹೆದರಿಕೊಂಡು ನಾವ್ಯಾಕ್ ಬರಬೇಕು ರೀ. ನಮ್ಮನೆಗೆ ಬರೋಕೆ ಅವರಿಗೆ ಹೆದರಿಕೆ ಇರಬೇಕೇ ಹೊರತು ನಮಗ್ಯಾಕೆ ಹೆದರಿಕೆ? ಕನ್ನಡ ಜನರು ಇದಾರಾ ಇಲ್ವಾ ಅಂತ ನನಗೆ ಡೌಟ್ ಬಂದುಬಿಡ್ತು. ಆದರೆ ಕನ್ನಡ ಸಿನಿಮಾ ಚೆನ್ನಾಗಿದ್ದಾಗ ಕನ್ನಡ ಜನ ಕೈಹಿಡಿದೇ ಹಿಡಿತಾರೆ. ಆಮೇಲೆ ನಾವ್ ಯಾವ್ದೇ ಪ್ಯಾನ್ ಇಂಡಿಯಾ ಸಿನಿಮಾ ಮಾಡಿಲ್ಲ, ಅಪ್ಪಟ ಕನ್ನಡ ಸಿನಿಮಾ, ಕನ್ನಡ ಜನತೆಗೋಸ್ಕರ ಮಾಡಿರೋ ಸಿನಿಮಾ ಅಂತ ಹೇಳೋಕೆ ಇಷ್ಟಪಡ್ತೀನಿ” ಎಂದು ದರ್ಶನ್ ಹೇಳಿದರು.
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…