ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಕಾಟೇರ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ವರ್ಷಾಂತ್ಯಕ್ಕೆ ಬಿಡುಗಡೆಗೊಳ್ಳಲಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಹಿಂದಿ ಹಾಗೂ ತೆಲುಗು ಭಾಷೆಯ ದೊಡ್ಡ ಸ್ಟಾರ್ ನಟರ ಚಿತ್ರಗಳೂ ಸಹ ಬಿಡುಗಡೆಯಾಗಲಿದ್ದು, ಕಾಟೇರ ಚಿತ್ರ ಡಿಸೆಂಬರ್ 29ಕ್ಕೆ ಬಿಡುಗಡೆಯಾಗಲಿದೆ ಎಂದು ಘೋಷಣೆಯಾದಾಗ ಈ ಕುರಿತು ಚರ್ಚೆಗಳು ನಡೆದಿದ್ದವು.
ತೆಲುಗು ಸ್ಟಾರ್ ನಟ ಪ್ರಭಾಸ್ ನಟನೆಯ ಸಲಾರ್ ಹಾಗೂ ಹಿಂದಿಯ ಸ್ಟಾರ್ ನಟ ಶಾರುಖ್ ಖಾನ್ ನಟನೆಯ ಡಂಕಿ ಚಿತ್ರಗಳು ಇದೇ ತಿಂಗಳ 22ರಂದು ತೆರೆಗೆ ಬರಲಿದ್ದು, ಈ ಚಿತ್ರಗಳು ತೆರೆಕಂಡ ವಾರದ ಬಳಿಕ ಬಿಡುಗಡೆಯಾಗಲಿರುವ ಕಾಟೇರ ಚಿತ್ರದ ಮೇಲೆ ಈ ಚಿತ್ರಗಳ ಪ್ರಭಾವ ಬೀರಬಹುದು, ಬಿಡುಗಡೆಯನ್ನು ಮುಂದೂಡಿಕೊಂಡಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಹಲವರು ಅಭಿಪ್ರಾಯಪಟ್ಟಿದ್ದರು.
ಇದೀಗ ಅಂತಹ ಅಭಿಪ್ರಾಯ ವ್ಯಕ್ತಪಡಿಸಿದವರ ಕುರಿತು ದರ್ಶನ್ ನಿನ್ನೆ ( ಡಿಸೆಂಬರ್ 14 ) ಪ್ರೆಸ್ಮೀಟ್ನಲ್ಲಿ ಮಾತನಾಡಿದ್ದಾರೆ. “29ಕ್ಕೆ ನಾವು ಬರೋಣ ಅಂತ ಅನ್ಕೊಂಡ್ವಿ. ನಮ್ ಸಿನಿಮಾ, ನಮ್ ಜಾಗ ಇದು. ಯಾರಿಗೋ ಹೆದರಿಕೊಂಡು ನಾವ್ಯಾಕ್ ಬರಬೇಕು ರೀ. ನಮ್ಮನೆಗೆ ಬರೋಕೆ ಅವರಿಗೆ ಹೆದರಿಕೆ ಇರಬೇಕೇ ಹೊರತು ನಮಗ್ಯಾಕೆ ಹೆದರಿಕೆ? ಕನ್ನಡ ಜನರು ಇದಾರಾ ಇಲ್ವಾ ಅಂತ ನನಗೆ ಡೌಟ್ ಬಂದುಬಿಡ್ತು. ಆದರೆ ಕನ್ನಡ ಸಿನಿಮಾ ಚೆನ್ನಾಗಿದ್ದಾಗ ಕನ್ನಡ ಜನ ಕೈಹಿಡಿದೇ ಹಿಡಿತಾರೆ. ಆಮೇಲೆ ನಾವ್ ಯಾವ್ದೇ ಪ್ಯಾನ್ ಇಂಡಿಯಾ ಸಿನಿಮಾ ಮಾಡಿಲ್ಲ, ಅಪ್ಪಟ ಕನ್ನಡ ಸಿನಿಮಾ, ಕನ್ನಡ ಜನತೆಗೋಸ್ಕರ ಮಾಡಿರೋ ಸಿನಿಮಾ ಅಂತ ಹೇಳೋಕೆ ಇಷ್ಟಪಡ್ತೀನಿ” ಎಂದು ದರ್ಶನ್ ಹೇಳಿದರು.
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…
ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳ ೧೩೫ ಪಿಯು ಕಾಲೇಜುಗಳಲ್ಲಿ ೧೮೫ ಕೊಠಡಿಗಳ ನಿರ್ಮಾಣ ಬಾಲಕರ ೪೬, ಬಾಲಕಿಯರ ೫೦ ಶೌಚಾಲಯ…
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…