ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಕಾಟೇರ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ವರ್ಷಾಂತ್ಯಕ್ಕೆ ಬಿಡುಗಡೆಗೊಳ್ಳಲಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಹಿಂದಿ ಹಾಗೂ ತೆಲುಗು ಭಾಷೆಯ ದೊಡ್ಡ ಸ್ಟಾರ್ ನಟರ ಚಿತ್ರಗಳೂ ಸಹ ಬಿಡುಗಡೆಯಾಗಲಿದ್ದು, ಕಾಟೇರ ಚಿತ್ರ ಡಿಸೆಂಬರ್ 29ಕ್ಕೆ ಬಿಡುಗಡೆಯಾಗಲಿದೆ ಎಂದು ಘೋಷಣೆಯಾದಾಗ ಈ ಕುರಿತು ಚರ್ಚೆಗಳು ನಡೆದಿದ್ದವು.
ತೆಲುಗು ಸ್ಟಾರ್ ನಟ ಪ್ರಭಾಸ್ ನಟನೆಯ ಸಲಾರ್ ಹಾಗೂ ಹಿಂದಿಯ ಸ್ಟಾರ್ ನಟ ಶಾರುಖ್ ಖಾನ್ ನಟನೆಯ ಡಂಕಿ ಚಿತ್ರಗಳು ಇದೇ ತಿಂಗಳ 22ರಂದು ತೆರೆಗೆ ಬರಲಿದ್ದು, ಈ ಚಿತ್ರಗಳು ತೆರೆಕಂಡ ವಾರದ ಬಳಿಕ ಬಿಡುಗಡೆಯಾಗಲಿರುವ ಕಾಟೇರ ಚಿತ್ರದ ಮೇಲೆ ಈ ಚಿತ್ರಗಳ ಪ್ರಭಾವ ಬೀರಬಹುದು, ಬಿಡುಗಡೆಯನ್ನು ಮುಂದೂಡಿಕೊಂಡಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಹಲವರು ಅಭಿಪ್ರಾಯಪಟ್ಟಿದ್ದರು.
ಇದೀಗ ಅಂತಹ ಅಭಿಪ್ರಾಯ ವ್ಯಕ್ತಪಡಿಸಿದವರ ಕುರಿತು ದರ್ಶನ್ ನಿನ್ನೆ ( ಡಿಸೆಂಬರ್ 14 ) ಪ್ರೆಸ್ಮೀಟ್ನಲ್ಲಿ ಮಾತನಾಡಿದ್ದಾರೆ. “29ಕ್ಕೆ ನಾವು ಬರೋಣ ಅಂತ ಅನ್ಕೊಂಡ್ವಿ. ನಮ್ ಸಿನಿಮಾ, ನಮ್ ಜಾಗ ಇದು. ಯಾರಿಗೋ ಹೆದರಿಕೊಂಡು ನಾವ್ಯಾಕ್ ಬರಬೇಕು ರೀ. ನಮ್ಮನೆಗೆ ಬರೋಕೆ ಅವರಿಗೆ ಹೆದರಿಕೆ ಇರಬೇಕೇ ಹೊರತು ನಮಗ್ಯಾಕೆ ಹೆದರಿಕೆ? ಕನ್ನಡ ಜನರು ಇದಾರಾ ಇಲ್ವಾ ಅಂತ ನನಗೆ ಡೌಟ್ ಬಂದುಬಿಡ್ತು. ಆದರೆ ಕನ್ನಡ ಸಿನಿಮಾ ಚೆನ್ನಾಗಿದ್ದಾಗ ಕನ್ನಡ ಜನ ಕೈಹಿಡಿದೇ ಹಿಡಿತಾರೆ. ಆಮೇಲೆ ನಾವ್ ಯಾವ್ದೇ ಪ್ಯಾನ್ ಇಂಡಿಯಾ ಸಿನಿಮಾ ಮಾಡಿಲ್ಲ, ಅಪ್ಪಟ ಕನ್ನಡ ಸಿನಿಮಾ, ಕನ್ನಡ ಜನತೆಗೋಸ್ಕರ ಮಾಡಿರೋ ಸಿನಿಮಾ ಅಂತ ಹೇಳೋಕೆ ಇಷ್ಟಪಡ್ತೀನಿ” ಎಂದು ದರ್ಶನ್ ಹೇಳಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…