ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಕಾಟೇರ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ವರ್ಷಾಂತ್ಯಕ್ಕೆ ಬಿಡುಗಡೆಗೊಳ್ಳಲಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಹಿಂದಿ ಹಾಗೂ ತೆಲುಗು ಭಾಷೆಯ ದೊಡ್ಡ ಸ್ಟಾರ್ ನಟರ ಚಿತ್ರಗಳೂ ಸಹ ಬಿಡುಗಡೆಯಾಗಲಿದ್ದು, ಕಾಟೇರ ಚಿತ್ರ ಡಿಸೆಂಬರ್ 29ಕ್ಕೆ ಬಿಡುಗಡೆಯಾಗಲಿದೆ ಎಂದು ಘೋಷಣೆಯಾದಾಗ ಈ ಕುರಿತು ಚರ್ಚೆಗಳು ನಡೆದಿದ್ದವು.
ತೆಲುಗು ಸ್ಟಾರ್ ನಟ ಪ್ರಭಾಸ್ ನಟನೆಯ ಸಲಾರ್ ಹಾಗೂ ಹಿಂದಿಯ ಸ್ಟಾರ್ ನಟ ಶಾರುಖ್ ಖಾನ್ ನಟನೆಯ ಡಂಕಿ ಚಿತ್ರಗಳು ಇದೇ ತಿಂಗಳ 22ರಂದು ತೆರೆಗೆ ಬರಲಿದ್ದು, ಈ ಚಿತ್ರಗಳು ತೆರೆಕಂಡ ವಾರದ ಬಳಿಕ ಬಿಡುಗಡೆಯಾಗಲಿರುವ ಕಾಟೇರ ಚಿತ್ರದ ಮೇಲೆ ಈ ಚಿತ್ರಗಳ ಪ್ರಭಾವ ಬೀರಬಹುದು, ಬಿಡುಗಡೆಯನ್ನು ಮುಂದೂಡಿಕೊಂಡಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಹಲವರು ಅಭಿಪ್ರಾಯಪಟ್ಟಿದ್ದರು.
ಇದೀಗ ಅಂತಹ ಅಭಿಪ್ರಾಯ ವ್ಯಕ್ತಪಡಿಸಿದವರ ಕುರಿತು ದರ್ಶನ್ ನಿನ್ನೆ ( ಡಿಸೆಂಬರ್ 14 ) ಪ್ರೆಸ್ಮೀಟ್ನಲ್ಲಿ ಮಾತನಾಡಿದ್ದಾರೆ. “29ಕ್ಕೆ ನಾವು ಬರೋಣ ಅಂತ ಅನ್ಕೊಂಡ್ವಿ. ನಮ್ ಸಿನಿಮಾ, ನಮ್ ಜಾಗ ಇದು. ಯಾರಿಗೋ ಹೆದರಿಕೊಂಡು ನಾವ್ಯಾಕ್ ಬರಬೇಕು ರೀ. ನಮ್ಮನೆಗೆ ಬರೋಕೆ ಅವರಿಗೆ ಹೆದರಿಕೆ ಇರಬೇಕೇ ಹೊರತು ನಮಗ್ಯಾಕೆ ಹೆದರಿಕೆ? ಕನ್ನಡ ಜನರು ಇದಾರಾ ಇಲ್ವಾ ಅಂತ ನನಗೆ ಡೌಟ್ ಬಂದುಬಿಡ್ತು. ಆದರೆ ಕನ್ನಡ ಸಿನಿಮಾ ಚೆನ್ನಾಗಿದ್ದಾಗ ಕನ್ನಡ ಜನ ಕೈಹಿಡಿದೇ ಹಿಡಿತಾರೆ. ಆಮೇಲೆ ನಾವ್ ಯಾವ್ದೇ ಪ್ಯಾನ್ ಇಂಡಿಯಾ ಸಿನಿಮಾ ಮಾಡಿಲ್ಲ, ಅಪ್ಪಟ ಕನ್ನಡ ಸಿನಿಮಾ, ಕನ್ನಡ ಜನತೆಗೋಸ್ಕರ ಮಾಡಿರೋ ಸಿನಿಮಾ ಅಂತ ಹೇಳೋಕೆ ಇಷ್ಟಪಡ್ತೀನಿ” ಎಂದು ದರ್ಶನ್ ಹೇಳಿದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…