ಚಿತ್ರ ಮಂಜರಿ

ಒಟಿಟಿ ವೇದಿಕೆಯತ್ತ ʼಆರ್ಕೆಸ್ಟ್ರಾ, ಮೈಸೂರುʼ

ಬೆಂಗಳೂರು : ಪೂರ್ಣಚಂದ್ರ ಮೈಸೂರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಆರ್ಕೆಸ್ಟ್ರಾ, ಮೈಸೂರುʼ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡು ಒಂದು ತಿಂಗಳು ಕಳೆಯುವ ಮುನ್ನವೇ ಒಟಿಟಿಯತ್ತ ಮುಖ ಮಾಡಿದ್ದು, ಒಟಿಟಿ ವೇದಿಕೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವ ಬಗ್ಗೆ ಡಾಲಿ ಪಿಕ್ಚರ್ಸ್‌ ಮಾಹಿತಿ ಹಂಚಿಕೊಂಡಿದೆ.

ʼಆರ್ಕೆಸ್ಟ್ರಾ ಮೈಸೂರುʼ ಸಿನಿಮಾ ಜನವರಿ 12ರಂದು ತೆರೆಗೆ ಬಂದಿತ್ತು. ಟ್ರೈಲರ್‌ ಮತ್ತು ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಿಡುಗಡೆಯಾದ ಮೊದಲ ದಿನವೇ ಚಿತ್ರಕ್ಕೆ ಪ್ರೇಕ್ಷಕರ ಕೊರತೆ ಎದುರಾಗಿದೆ ಎಂದು ನಿರ್ಮಾಪಕ ರಘು ದಿಕ್ಷಿತ್‌ ಅಳಲು ತೋಡಿಕೊಂಡಿದ್ದರು. ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ತೆರೆಕಂಡ 15 ದಿನಕ್ಕೆ ಒಟಿಟಿಯಲ್ಲಿ ಬಿಡುಗಡೆ”

ಈ ಬಗ್ಗೆ ಟ್ವಿಟರ್‌ನಲ್ಲಿ ಪತ್ರವೊಂದನ್ನು ಹಂಚಿಕೊಂಡಿರುವ ಡಾಲಿ ಪಿಕ್ಚರ್ಸ್‌, ನಮ್ಮ ʼಆರ್ಕೆಸ್ಟ್ರಾ ಮೈಸೂರುʼ ತಂಡ ಕಥೆ ಹೇಳಬೇಕೆಂಬ ಕನಸು ಕಂಡವರು. ಮೈಸೂರಿನಲ್ಲೇ ಹುಟ್ಟಿ ಬೆಳೆದ, ಆರ್ಕೆಸ್ಟ್ರಾ ಸಂಸ್ಕೃತಿ ಮತ್ತು ಸಂಗೀತವುಳ್ಳ ಕಥೆಯೊಂದನ್ನು ಕನಸು ಕಾಣುವ ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಚಿತ್ರವಾಗಿಸಿ ತೋರಿಸಬೇಕೆಂದು ಮಾಡಿದ ಸಿನಿಮಾ, ‘ಆರ್ಕೆಸ್ಟ್ರಾ ಮೈಸೂರು’. ನಮ್ಮ ಈ ಕನಸನ್ನು ಬೆಳ್ಳಿ ಪರದೆಯಲ್ಲಿ ಆಸ್ವಾದಿಸಿದ ಅಷ್ಟೂ ಪ್ರೇಕ್ಷಕರಿಗೆ, ಕುಟುಂಬದವರಿಗೆ, ಗೆಳೆಯವರ್ಗಕ್ಕೆ ನಾವು ಮಣಿ. ಅದರಲ್ಲೂ, ಮೈಸೂರಿನ ಜನತೆ ʼಡಿಆರ್‌ಸಿʼ ಚಿತ್ರಮಂದಿರ ತುಂಬಿಸುವ ಮೂಲಕ ತೋರುತ್ತಿರುವ ವಿಶೇಷ ಪ್ರೀತಿಗೆ ನಾವು ಆಭಾರಿ. ಈಗ ಮುಂದಿನ ಹೆಜ್ಜೆ ನಮ್ಮ ಸಿನಿಮಾ ನೋಡಿ ಮೆಚ್ಚಿದ ʼಅಮೆಜಾನ್‌ ಪ್ರೈಂʼ ಸಂಸ್ಥೆ ಇದೀಗ ಚಿತ್ರವನ್ನು ಪ್ರಸಾರ ಮಾಡಲು ಮುಂದೆ ಬಂದಿದೆ. ಮತ್ತಷ್ಟು ಚಿತ್ರರಸಿಕರನ್ನು ತಲುಪಲು ‘ಆರ್ಕೆಸ್ಟ್ರಾ ಮೈಸೂರು’ ಚಿತ್ರ ಜನವರಿ 27ರಿಂದ ಪ್ರೈಂ ವಿಡಿಯೋಸ್‌ನಲ್ಲಿ ಬರಲಿದೆ. ಸಿನಿಮಾ ನೋಡಿ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ” ಎಂದು ಮಾಹಿತಿ ನೀಡಿದೆ.

 

andolanait

Recent Posts

ನಾಯಕತ್ವ ಬದಲಾವಣೆ ವಿಚಾರ: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…

8 mins ago

ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ: ಸಚಿವ ಕೆ.ವೆಂಕಟೇಶ್‌

ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…

18 mins ago

ಕಣ್ಣೂರು| ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು

ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…

30 mins ago

ಜನವರಿ.29ರಿಂದ ಫೆಬ್ರವರಿ.06ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…

53 mins ago

ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಲಬುರ್ಗಿ: ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ…

1 hour ago

ಚಾಮರಾಜನಗರ: ನಂಜೆದೇವಪುರ ಸುತ್ತಮುತ್ತ ಹುಲಿಗಳಿಗಾಗಿ ಶೋಧ ಕಾರ್ಯ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…

2 hours ago